ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್

ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಹೊರಗಿಡಲು ರಾಜ್ಯ ಸರ್ಕಾರ ಬೃಹತ್ ಪರಿಶೀಲನೆ ಆರಂಭಿಸಿದ್ದು, ಅರ್ಹ ಮಹಿಳೆಯರಿಗೆ ಮಾತ್ರ ₹2000 ನೆರವು ತಲುಪುವಂತೆ ಕ್ರಮ ಕೈಗೊಂಡಿದೆ. 

Share this Video
  • FB
  • Linkdin
  • Whatsapp

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಬೃಹತ್ ಪರಿಶೀಲನಾ ಕಾರ್ಯಾಚರಣೆ ಆರಂಭವಾಗಿದೆ. ಸತ್ತವರ ಹೆಸರು, ತೆರಿಗೆ ಪಾವತಿದಾರರು ಹಾಗೂ ಇತರೆ ಅನರ್ಹರ ಹೆಸರಲ್ಲಿ ಸಾವಿರಾರು ಕೋಟಿ ರೂಪಾಯಿ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 4 ಲಕ್ಷಕ್ಕೂ ಹೆಚ್ಚು ಅನರ್ಹ ಖಾತೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ. ಆದರೆ ಯೋಜನೆಯನ್ನು ಸ್ಥಗಿತಗೊಳಿಸುವ ಉದ್ದೇಶ ಇಲ್ಲ, ಅರ್ಹ ಮಹಿಳೆಯರಿಗೆ ಮಾತ್ರ ₹2000 ನೆರವು ತಲುಪುವಂತೆ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video