ಕೊರೋನಾದಿಂದ ಹಂತ-ಹಂತವಾಗಿ ಚೇತರಿಸಿಕೊಳ್ಳುತ್ತಿದ್ದ ಮಾಜಿ ಮುಖ್ಯಮಂತ್ರಿ ಇಂದು (ಗುರುವಾರ) ನಿಧನರಾಗಿದ್ದಾರೆ. ಇವರ ಸಾವಿಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಹಮದಾಬಾದ್, (ಅ.29)​: ಗುಜರಾತಿನ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೇಶುಭಾಯ್​ ಪಟೇಲ್​ (92) ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಸಿರಾಡಲು ತೊಂದರೆಯಾಗುತ್ತಿದೆ ಎಂದು ಗುರುವಾರ ಬೆಳಗ್ಗೆಯಷ್ಟೇ ಮನೆಯವರ ಬಳಿ ಹೇಳಿಕೊಂಡಿದ್ದರು. ಬಳಿಕ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಇಂದು (ಗುರುವಾರ) ಕೊನೆಯುಸೆರೆಳೆದಿದ್ದಾರೆ. 

ಕೊರೋನಾ ಸೋಂಕಿನಿಂದ ಮತ್ತೋರ್ವ ಬಿಜೆಪಿ ನಾಯಕ ನಿಧನ: ಮೋದಿ ಸಂತಾಪ

Scroll to load tweet…

ಕೇಶುಭಾಯ್​ ಪಟೇಲ್​ ಅವರಿಗೆ ಸೆಪ್ಟೆಂಬರ್​ನಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತ.​ ಆದರೆ, ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಅವರು ಅಹಮದಾಬಾದ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೇಶುಭಾಯ್​ ಪಟೇಲರು ಎರಡು ಅವಧಿಯಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಕೇಶುಭಾಯ್​ ಪಟೇಲರನ್ನು ಕಳೆದುಕೊಂಡ ಬಿಜೆಪಿಗೆ ದೊಡ್ಡ ನಷ್ಟವಾಗಿದೆ.

Scroll to load tweet…

ಮೊನ್ನೇ ಅಷ್ಟೇ ಗುಜರಾತಿ ಖ್ಯಾತ ನಟ ಹಾಗೂ ಬಿಜೆಪಿ ನಾಯಕ ನರೇಶ್‌ ಕನೋಡಿಯಾ(77) ಅವರು ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.