ಹಳೇಬಿಡು ಗ್ರಾಪಂ ಚುನಾವಣೆ ಬಳಿಕ ನಡೆದ ವಿಜಯೋತ್ಸವ ವೇಳೆ ಬಿಜೆಪಿ ಜೆಡಿಎಸ್ ಪಕ್ಷಗಳ ಸದಸ್ಯರು ನಡುರಸ್ತೆಯಲ್ಲೇ ಬಡಿದಾಡಿಕೊಂಡ ಘಟನೆ  ಹಾಸನ ಜಿಲ್ಲೆಯ ಹಳೇಬಿಡು ಗ್ರಾಮದ ಹೊಯ್ಸಳ ವೃತ್ತದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಸದಸ್ಯನಿಗೆ ಗಂಭೀರ ಗಾಯ. ಸ್ಥಳದಲ್ಲೇ ಕುಸಿದುಬಿದ್ದಿದ್ದಾನೆ. 

ಹಾಸನ (ಜು.29) : ಹಳೇಬಿಡು ಗ್ರಾಪಂ ಚುನಾವಣೆ ಬಳಿಕ ನಡೆದ ವಿಜಯೋತ್ಸವ ವೇಳೆ ಬಿಜೆಪಿ ಜೆಡಿಎಸ್ ಪಕ್ಷಗಳ ಸದಸ್ಯರು ನಡುರಸ್ತೆಯಲ್ಲೇ ಬಡಿದಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹಳೇಬಿಡು ಗ್ರಾಮದ ಹೊಯ್ಸಳ ವೃತ್ತದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಸದಸ್ಯನಿಗೆ ಗಂಭೀರ ಗಾಯ. ಸ್ಥಳದಲ್ಲೇ ಕುಸಿದುಬಿದ್ದಿದ್ದಾನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಲ್ಲಾಳಿಗಳ ಹಾವಳಿ: ನಾಡಕಚೇರಿ ಉಪತಹಸೀಲ್ದಾರ್‌ಗೆ ಶಾಸಕ ಮಂಜು ತರಾಟೆ

ಏನಿದು ಘಟನೆ?

ಹಳೇಬಿಡು ಗ್ರಾಪಂ ಹಿಂದುಳಿದ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಮೂವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. 20 ಸದಸ್ಯರ ಸಂಖ್ಯಾಬಲ ಹೊಂದಿರುವ ಪಂಚಾಯ್ತಿಯಲ್ಲಿ ವಿಜೇತ ಅಭ್ಯರ್ಥಿಯ ಪರವಾಗಿ 11 ಮತ ಹಾಗೂ ಪರಾಜಿತ ಅಭ್ಯರ್ಥಿಯ ಪರವಾಗಿ 9 ಮತಗಳ ಚಲಾವಣೆಯಾಗಿವೆ. ನೂತನ ಅಧ್ಯಕ್ಷರಾಗಿ ನಿತ್ಯಾನಂದ ಅಧ್ಯಕ್ಷರಾಗಿ ಹಾಗೂ ಕಾಂತಾಮಣಿ ಉಪಾಧ್ಯಕ್ಷರಾಗಿ ಹೆಸರು ಘೋಷಣೆಯಾಗಿದೆ. ಗೆದ್ದ ಸಂಭ್ರಮದಲ್ಲಿ ವಿಜಯೋತ್ಸವ ಆಚರಿಸಿತ್ತು. ಈ ವೇಳೆ ಪರಾಜಿತ ಅಭ್ಯರ್ಥಿಗಳ ನಡುವೆ ಜಗಳ. ಮಾತಿಗೆ ಮಾತು ಬೆಳೆದು ನಡು ರಸ್ತೆಯಲ್ಲಿ ಮಾರಾಮಾರಿ ನಡೆದಿದೆ.

ಸದ್ಯ ಎರಡು ಪಕ್ಷಗಳ ಬೆಂಬಲಿಗರಿಂದ ಹಳೇಬಿಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೇಲೂರು: ಪುರಸಭೆ ಸಾಮಾನ್ಯ ಸಭೆಯಲ್ಲಿ ಕೋಳಿ ಜಗಳ !