Asianet Suvarna News Asianet Suvarna News

ತುರ್ತು ಪರಿಸ್ಥಿತಿಗಿಂತ ಕೆಟ್ಟ ಸನ್ನಿವೇಶ: ಬಿಜೆಪಿ ವಿರುದ್ಧ ದೇವೇಗೌಡ ಆಕ್ರೋಶ!

‘ರಾಜ್ಯದಲ್ಲಿ ತುರ್ತು ಪರಿಸ್ಥಿತಿಗಿಂತ ಕೆಟ್ಟ ಸನ್ನಿವೇಶ’| ಅಧಿಕಾರಕ್ಕಾಗಿ ಬಿಜೆಪಿಯಿಂದ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿ| ಕೇಂದ್ರ ಬಿಜೆಪಿ ನಾಯಕತ್ವದ ವಿರುದ್ಧ ಹರಿಹಾಯ್ದ ಜೆಡಿಎಸ್ ವರಿಷ್ಠ| ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ ದೇವೇಗೌಡ|
 

HD Deve Gowda Blasts BJP Over Karnataka Crisis
Author
Bengaluru, First Published Jul 10, 2019, 9:14 PM IST

ಬೆಂಗಳೂರು(ಜು.10): ಕರ್ನಾಟಕ ರಾಜಕೀಯ ಸನ್ನಿವೇಶವನ್ನು ತುರ್ತು ಪರಿಸ್ಥಿತಿಗಿಂತ ಘೋರ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಬಣ್ಣಿಸಿದ್ದಾರೆ.

ಖಾಸಗಿ ಸುದದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ದೇವೇಗೌಡ, ರಾಜ್ಯದ ಪ್ರಸಕ್ತ ತರಾಜಕೀಯ ಬಿಕ್ಕಟ್ಟಿಗೆ  ಬಿಜೆಪಿಯ ಅಧಿಕಾರದ ಲಾಲಸೆಯೇ ಕಾರಣ ಎಂದು ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಶತಾಯಗತಾಯ ಅಧಿಕಾರ ಹಿಡಿಯಬೇಕೆಂಬ ಹಂಬಲದಿಂದಾಗಿ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಮೂಲಕ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸಿದೆ ಎಂದು ದೇವೇಗೌಡ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಸೃಷ್ಟಿಯಾಗಿರುವ ಸಾಂವಿಧಾನಿಕ ಬಿಕ್ಕಿಟ್ಟಿಗೆ ಬಿಜೆಪಿಯೇ ನೇರ ಹೊಣೆ ಎಂದಿರುವ ಜೆಡಿಎಸ್ ವರಿಷ್ಠ, ಇದಕ್ಕೆ ಬಿಜೆಪಿ ಕೇಂದ್ರ ನಾಯಕತ್ವದ ಬೆಂಬಲ ಇದೆ ಎಂದು ಗುಡುಗಿದ್ದಾರೆ.

ಶಾಸಕರನ್ನು ಖರೀದಿಸುವ, ಬೆದರಿಸುವ ತಂತ್ರಕ್ಕೆ ಮೊರೆ ಹೋಗಿರುವ ಬಿಜೆಪಿ,  ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಸನ್ನಿವೇಶವನ್ನು ನಿರ್ಮಾಣ ಮಾಡಿದೆ ಎಂದು ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.

Follow Us:
Download App:
  • android
  • ios