Asianet Suvarna News Asianet Suvarna News

6 ತಿಂಗ್ಳಲ್ಲಿ ಸರ್ಕಾರ ಬೀಳಿಸ್ತೇವೆಂದು ಅಮಿತ್‌ ಶಾಗೆ ದೇವೇಗೌಡ,ಎಚ್‌ಡಿಕೆ ವಚನ, ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನನ್ನನ್ನು ಗುರಿಯಾಗಿಸಿಕೊಂಡು ಸರ್ಕಾರನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿವೆ. ಇದೆಲ್ಲದರ ಹಿಂದೆ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ನೇರ ಪಾತ್ರವಿದೆ. ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ನಾವು ಅಸ್ಥಿರಗೊಳಿಸುತ್ತೇವೆ ಎಂದು ದೆಹಲಿಯಲ್ಲಿ ಅಮಿತ್ ಶಾ ಅವರಿಗೆ ಭರವಸೆ ನೀಡಿರುವುದೇ ಇದೆಲ್ಲದಕ್ಕೂ ಕಾರಣ. ಆದರೆ, ಅವರ ಕುತಂತ್ರ ಫಲಿಸುವುದಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 
 

hd devegowda hd kumaraswamy promise to Amit Shah that the government will fall in 6 months grg
Author
First Published Aug 23, 2024, 8:04 AM IST | Last Updated Aug 23, 2024, 8:04 AM IST

ಬೆಂಗಳೂರು(ಆ.23):  ರಾಜ್ಯ ಸರ್ಕಾರವನ್ನು ಇನ್ನಾರು ತಿಂಗಳಲ್ಲಿ ಅಸ್ಥಿರಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭರವಸೆ ನೀಡಿ ಬಂದಿದ್ದಾರೆ. ಹೀಗಾಗಿಯೇ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಪ್ರಾಸಿಕ್ಯೂಷನ್ ಅನುಮತಿಯಂತಹ ಷಡ್ಯಂತ್ರ ನಡೆಸಲಾಗುತ್ತಿದೆ.' ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದರು ಎಂದು ಮೂಲಗಳು ಹೇಳಿವೆ. ಅಲ್ಲದೆ, ಅಲ್ಲದೆ, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಡೆಸಿದ ಹಗರಣಗಳನ್ನು ಬಯಲಿಗೆ ತಂದು ಅವುಗಳ ವಿರುದ್ಧ ತನಿಖೆ ನಡೆಸುವುದಾಗಿಯೂ ಮುಖ್ಯಮಂತ್ರಿಯವರು ಸಭೆಗೆ ತಿಳಿಸಿದರು ಎಂದು ಈ ಮೂಲಗಳು ಹೇಳಿವೆ. 

ರಾಜ್ಯದಲ್ಲಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನನ್ನನ್ನು ಗುರಿಯಾಗಿಸಿಕೊಂಡು ಸರ್ಕಾರನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿವೆ. ಇದೆಲ್ಲದರ ಹಿಂದೆ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ನೇರ ಪಾತ್ರವಿದೆ. ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ನಾವು ಅಸ್ಥಿರಗೊಳಿಸುತ್ತೇವೆ ಎಂದು ದೆಹಲಿಯಲ್ಲಿ ಅಮಿತ್ ಶಾ ಅವರಿಗೆ ಭರವಸೆ ನೀಡಿರುವುದೇ ಇದೆಲ್ಲದಕ್ಕೂ ಕಾರಣ. ಆದರೆ, ಅವರ ಕುತಂತ್ರ ಫಲಿಸುವುದಿಲ್ಲ ಎಂದರು ಎಂದು ಗೊತ್ತಾಗಿದೆ. 

ಸಿಎಂ ಸಿದ್ದುಗಿಂತ ಮೊದಲು ನನ್ನನ್ನು ಎದುರಿಸಿ: ಕುಮಾರಸ್ವಾಮಿಗೆ ಜಮೀರ್‌ ಸವಾಲು

ಮುಡಾ ಆಗಲಿ, ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಾಗಲಿ ನನ್ನ ಎಳ್ಳಷ್ಟೂ ಪಾತ್ರವಿಲ್ಲ. ಮುಡಾ ಪ್ರಕರಣದಲ್ಲಿ ನನ್ನ ಬಾಮೈದನೂ ಸೇರಿದಂತೆ ಕುಟುಂಬದ ಯಾವುದೇ ಸದಸ್ಯರ ಹಸ್ತಕ್ಷೇಪವಿಲ್ಲ. ನನ್ನ ರಾಜಕೀಯ ಜೀವನಕ್ಕೆ ಕಪ್ಪುಚುಕ್ಕೆ ಇಡುವ ಹುನ್ನಾರ ಹಾಗೂ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ದುರುದ್ದೇಶದಿಂದ ಪ್ರತಿಪಕ್ಷಗಳು ಕುತಂತ್ರ ನಡೆಸಿವೆ. ಇದರ ವಿರುದ್ಧ ಕಾನೂನು ಹೋರಾಟದ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ನವರ ಅಕ್ರಮಗಳನ್ನು ಹೊರಗೆಳೆದು ಜನರ ಮುಂದೆ ಇಡುವ ಮೂಲಕ ಅವರ ಕುತಂತ್ರ ಫಲಿಸದಂತೆ ಮಾಡಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಸಿಎಂ ತಿಳಿಸಿದರು ಎಂದು ಮೂಲಗಳು ಹೇಳಿವೆ. 

ಸಿದ್ದರಾಮಯ್ಯನವರೇ 40 ವರ್ಷದ ನಿಮ್ಮ ರಾಜಕೀಯ ಜೀವನದ ಕಪ್ಪುಚುಕ್ಕೆಯನ್ನು ವೈಟ್ನರ್ ಅಳಿಸೀತಾ?: ಕೇಂದ್ರ ಸಚಿವ ಎಚ್‌ಡಿಕೆ

ರಾಜ್ಯಪಾಲರು ಖಾಸಗಿ ವ್ಯಕ್ತಿ ನೀಡಿದ ದೂರು ಆಧರಿಸಿ ವಿವೇಚನಾರಹಿತವಾಗಿ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ. ಆದರೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತ ಎಸ್‌ಐಟಿಯವರೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕಳೆದ ನವೆಂಬರ್‌ನಲ್ಲೇ ಕೇಳಿದ್ದರೂ ಕೊಟ್ಟಿಲ್ಲ. ಅದೇ ರೀತಿ ಬಿಜೆಪಿಯ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಅವರ ವಿರುದ್ಧವೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ದೂರುಗಳು ಬಂದಿದ್ದರೂ ಪರಿಗಣಿಸಿಲ್ಲ. ನನ್ನ ವಿರುದ್ದ ಮಾತ್ರ ತರಾತುರಿಯಲ್ಲಿ ಕೇಂದ್ರ ಸರ್ಕಾರ, ಬಿಜೆಪಿಯವರ ಒತ್ತಡಕ್ಕೆ ಮಣಿದು ಅನುಮತಿ ನೀಡಿ ತಾರತಮ್ಯ ಎಸಗಿದ್ದಾರೆ. ಇದರ ವಿರುದ್ದದ ಕಾನೂನು ಹೋರಾಟದಲ್ಲಿ ಜಯ ಸಿಗುವ ನಂಬಿಕೆ ಇದೆ ಎಂದು ತಿಳಿಸಿದರು ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಸಿಎಂ ಹೇಳಿದ್ದೇನು? 

• ಶಾಗೆ ನೀಡಿರುವ ವಚನ ಈಡೇರಿಸಲು ರಾಜ್ಯ ಸರ್ಕಾರದ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ 
• ವಿಪಕ್ಷಗಳ ಪ್ರಯತ್ನ ಫಲಿಸುವುದಿಲ್ಲ, ಏಕೆಂದ್ರೆ ವಾಲ್ಮೀಕಿ, ಮುಡಾ ಕೇಸಲ್ಲಿ ನನ್ನ ಪಾತ್ರ ಇಲ್ಲ 
• ಪ್ರಕರಣದಲ್ಲಿ ನನ್ನ ಬಾಮೈದನೂ ಸೇರಿದಂತೆ ಕುಟುಂಬದ ಯಾರ ಹಸ್ತಕ್ಷೇಪವೂ ಇಲ್ಲ . ಆದರೂ ಅಧಿವೇಶನದಲ್ಲಿ ಪ್ರಸ್ತಾಪಿಸಿ, ನನಗೆ ಉತ್ತರ ನೀಡಲೂ ಬಿಡದೆ ಗಲಾಟೆ ಎಬ್ಬಿಸಿದರು 
• ಪಾದಯಾತ್ರೆ ನಡೆಸಿದರು... ಅದು ಫಲಿಸದಿ ದ್ದಾಗ ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ಕೊಡಿಸಿದರು 
• ಪ್ರತಿಪಕ್ಷಗಳ ಷಡ್ಯಂತ್ರಕ್ಕೆ ಕಾನೂನು ಹೋರಾಟದ ಮೂಲಕ ಹಾಗೂ ರಾಜಕೀಯವಾಗಿ ಪ್ರತ್ಯುತ್ತರ ನೀಡೋಣ

Latest Videos
Follow Us:
Download App:
  • android
  • ios