ಲೋಕಸಭಾ ಚುನಾವಣೆಯ ಬಳಿಕ ಉಪಚುನಾವಣೆಯಲ್ಲೂ ಹೀನಾಯ ಸೋಲು ಅನುಭವಿಸಿ ತೀವ್ರ ಮುಖಭಂಗಕ್ಕೀಡಾಗಿರುವ ಜೆಡಿಎಸ್​ಗೆ ಪಕ್ಷ ಸಂಘಟನೆಯೇ ಬಹುದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಚಿಂತನೆ ನಡೆಸಿದ್ದು, ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. 

ಬೆಂಗಳೂರು, (ಡಿ.14): 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್‌ ಒಂದೂ ಸ್ಥಾನದಲ್ಲಿ ಗೆಲುವು ಗೆದ್ದಿಲ್ಲ. ಅಷ್ಟೇ ಅಲ್ಲದೇ ತನ್ನ ಭದ್ರಕೋಟೆಯಲ್ಲಿ ಗೆಲ್ಲಲು ಆಗಿಲ್ಲ. 

Add Asianetnews Kannada as a Preferred SourcegooglePreferred

"

ಇದರಿಂದ ಒಂದೊಂದಾಗಿಯೇ ಭದ್ರಕೋಟೆಗಳು ಅಲುಗಾಡು ಶುರುವಾಗಿದ್ದೆ ತಡ ಎಚ್.ಡಿ.ದೇವೇಗೌಡ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.

ಸೋಲಿಂದ ಧೃತಿಗೆಟ್ಟಿಲ್ಲ, ಮತ್ತೆ ಪುಟಿದೇಳುತ್ತೇವೆ: ರೇವಣ್ಣ

ಸೋಲಿನ ನಂತರ ಪಕ್ಷ ಬಲಪಡಿಸಲು ಪಣ ತೊಡುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​​ ವರಿಷ್ಠ ಎಚ್​.ಡಿ.ದೇವೇಗೌಡ, ಮೊನ್ನೆ ನಡೆದ ಸಭೆಯಲ್ಲಿ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

 ಅಶಕ್ತವಾಗಿರುವ ಪಕ್ಷಕ್ಕೆ ಶಕ್ತಿ ತಂಬಲು ದೊಡ್ಡಗೌಡ್ರು 2ನೇ ಮೊಮ್ಮಗ, ಜೆಡಿಎಸ್ ಯೂಥ್ ಐಕಾನ್ ಪ್ರಜ್ವಲ್​ರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಿದ್ದು, ಅವರಿಗೆ ಉತ್ತರ ಕರ್ನಾಟಕದ ಜವಾಬ್ದಾರಿ ನೀಡಿದ್ದಾರೆ.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗಿದ್ದರೂ ಅವರು ಪಕ್ಷ ಸಂಘಟನೆಯಲ್ಲಿ ಅಷ್ಟಾಗಿ ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಯುವಕರು ಬೇರೆ ಪಕ್ಷದ ಕಡೆ ವಾಲುತ್ತಿದ್ದಾರೆ. ಇದನ್ನ ತಡೆಯಲು ಸಂಸದರು ಆಗಿರುವ ಪ್ರಜ್ವಲ್ ರೇವಣ್ಣನ್ನ ಬಳಸಿಕೊಳ್ಳಲು ದೌಡ್ಡಗೌಡ್ರು ಪ್ಲ್ಯಾನ್ ಮಾಡಿದ್ದಾರೆ.

ಭದ್ರಕೋಟೆ ಕಳೆದುಕೊಂಡ ಜೆಡಿಎಸ್ : ಚುನಾವಣೆ ಬಳಿಕ ಫೀಲ್ಡಿಗಿಳಿದ ನಾಯಕರು

 ತಾತನ ಸೂಚನೆ ಮೇರೆಗೆ ಪಕ್ಷ ಸಂಘಟನೆಗಾಗಿ ಸಂಸದ ಪ್ರಜ್ವಲ್​ ರೇವಣ್ಣ ಫೀಲ್ಡಿಗಿಳಿಯಲು ಸಜ್ಜಾಗಿದ್ದಾರೆ. ಮೊದಲಿಗೆ ಉತ್ತರ ಕರ್ನಾಟಕದತ್ತ ಚಿತ್ತ ನೆಟ್ಟಿದ್ದು, ಪ್ರಜ್ವಲ್​ ಒಂದು ತಿಂಗಳು ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನುವುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಸಂಕ್ರಾಂತಿ ನಂತರ ಉ.ಕ ಜಿಲ್ಲೆಗಳಲ್ಲಿ ಪ್ರಜ್ವಲ್​ ಪ್ರವಾಸ ಮಾಡಲಿದ್ದಾರೆ. ಪ್ರತಿ ಜಿಲ್ಲೆಗೂ ಹೋಗಿ ಕಾರ್ಯಕರ್ತರು ಹಾಗೂ ಪಕ್ಷದ ಹಿರಿಯ ನಾಯಕರ‌ನ್ನು ಭೇಟಿ ಮಾಡಲಿದ್ದಾರೆ. ಪ್ರವಾಸದ ನಡುವೆಯೇ ಕಾರ್ಯಕರ್ತರ ನೋಂದಣಿಗೂ ಪ್ರಜ್ವಲ್​ ಚಾಲನೆ ನೀಡಲಿದ್ದಾರೆ.