ಜೆಡಿ ಎಸ್ ಅವಕಾಶವಾದಿ ಪಕ್ಷ  ಎಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಸೆ.20): ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿ ಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿ ಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೆಡಿಎಸ್ ಪಕ್ಷ ಅವಕಾಶವಾದಿಗಳ ಪಕ್ಷ ಎಂಬ ವಿಪಕ್ಷ ನಾಯಕಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ ಎಂದು ತಿರುಗೇಟು ನೀಡಿದ್ದಾರೆ.

60 ನಾಯಕರು ಕಾಂಗ್ರೆಸ್ ಸೇರಲು ಅರ್ಜಿ: ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಬರೆದ ಜೆಡಿಎಸ್ ನಾಯಕ

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದು ಕುಟುಕಿದ್ದಾರೆ.

Scroll to load tweet…