Asianet Suvarna News Asianet Suvarna News

ಆಡಿಯೋದಲ್ಲಿ ಮಾತನಾಡಿದ್ದು ಯಡಿಯೂರಪ್ಪ ಎಂದು ನಾನು ಹೇಳಿಲ್ಲ: ಎಚ್‌ಡಿಕೆ

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಫೆ. 08ರಂದು ಬಜೆಟ್ ಮಂಡಿಸುವುದಕ್ಕೂ ಮೊದಲು ಹೈಡ್ರಾಮಾ ನಡೆದಿದ್ದು, ಎಚ್‌ಡಿ ಕುಮಾರಸ್ವಾಮಿ ಆಡಿಯೋ ಕ್ಲಿಪ್‌ ಒಂದನ್ನು ಬಿಡುಗಡೆಗೊಳಿಸಿದ್ದು ತೀವ್ರ ಸಂಚಲನ ಮೂಡಿಸಿತ್ತು. ಆಡಿಯೋದಲ್ಲಿ ಸ್ಪೀಕರ್‌ಗೆ ಹಣ ನೀಡಿ ಬುಕ್ ಮಾಡಿದ್ದಾರೆಂಬ ಮಾತುಗಳೂ ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಕೂಡಾ ಸುದ್ದಿಗೋಷ್ಠಿ ನಡೆಸಿ ಆಡಿಯೋ ಕ್ಲಿಪ್‌ನಲ್ಲಿ ಮಾತನಾಡಿದ್ದು ನಾನೇ ಎಂದು ಸಾಬೀತುಪಡಿಸಿ ಎಂದು ಸವಾಲು ಎಸೆದಿದ್ದರು. ಆದರೀಗ ಸಿಎಂ ಕುಮಾರಸ್ವಾಮಿ ಆಡಿಯೋ ಕುರಿತಾಗಿ ಸ್ಪಷ್ಟನೆ ನೀಡಿದ್ದು, ನಾನು ನೀಡಿರುವ ಹೇಳಿಕೆಯಲ್ಲಿ ಆಡಿಯೋದಲ್ಲಿರುವ ಧ್ವನಿ ಯಡಿಯೂರಪ್ಪನವರದ್ದೇ ಎಂದು ಎಲ್ಲೂ ಹೇಳಿಲ್ಲ ಎಂದಿದ್ದಾರೆ.

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಫೆ. 08ರಂದು ಬಜೆಟ್ ಮಂಡಿಸುವುದಕ್ಕೂ ಮೊದಲು ಹೈಡ್ರಾಮಾ ನಡೆದಿದ್ದು, ಎಚ್‌ಡಿ ಕುಮಾರಸ್ವಾಮಿ ಆಡಿಯೋ ಕ್ಲಿಪ್‌ ಒಂದನ್ನು ಬಿಡುಗಡೆಗೊಳಿಸಿದ್ದು ತೀವ್ರ ಸಂಚಲನ ಮೂಡಿಸಿತ್ತು. ಆಡಿಯೋದಲ್ಲಿ ಸ್ಪೀಕರ್‌ಗೆ ಹಣ ನೀಡಿ ಬುಕ್ ಮಾಡಿದ್ದಾರೆಂಬ ಮಾತುಗಳೂ ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಕೂಡಾ ಸುದ್ದಿಗೋಷ್ಠಿ ನಡೆಸಿ ಆಡಿಯೋ ಕ್ಲಿಪ್‌ನಲ್ಲಿ ಮಾತನಾಡಿದ್ದು ನಾನೇ ಎಂದು ಸಾಬೀತುಪಡಿಸಿ ಎಂದು ಸವಾಲು ಎಸೆದಿದ್ದರು. ಆದರೀಗ ಸಿಎಂ ಕುಮಾರಸ್ವಾಮಿ ಆಡಿಯೋ ಕುರಿತಾಗಿ ಸ್ಪಷ್ಟನೆ ನೀಡಿದ್ದು, ನಾನು ನೀಡಿರುವ ಹೇಳಿಕೆಯಲ್ಲಿ ಆಡಿಯೋದಲ್ಲಿರುವ ಧ್ವನಿ ಯಡಿಯೂರಪ್ಪನವರದ್ದೇ ಎಂದು ಎಲ್ಲೂ ಹೇಳಿಲ್ಲ ಎಂದಿದ್ದಾರೆ.