Asianet Suvarna News Asianet Suvarna News

ಕೋವಿಡ್​ ವಿಮೆ ವ್ಯಾಪ್ತಿಯಲ್ಲಿ ಪತ್ರಕರ್ತರನ್ನು ಸೇರಿಸಲು ಎಚ್​ಡಿಕೆ ಆಗ್ರಹ

ಕೊರೋನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್​ಡಿಕೆ ಆಗ್ರಹಿಸಿದ್ದಾರೆ.

HD Kumaraswamy urges to Govt covid insurance coverage include journalists
Author
Bengaluru, First Published Jun 27, 2020, 10:05 PM IST

ಬೆಂಗಳೂರು, (ಜೂನ್.27): ಕಾರ್ಯನಿರತ ಪತ್ರಕರ್ತರನ್ನು(ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೋನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಎಚ್​ಡಿಕೆ, ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಟ್ವೀಟ್​  ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯೋಗಿ ಕೊಂಡಾಡಿದ ಟ್ರಂಪ್,ಅಂತರ್ ಜಿಲ್ಲಾ ಓಡಾಟಕ್ಕೆ ಬ್ರೇಕ್; ಜೂ.27ರ ಟಾಪ್ 10 ಸುದ್ದಿ!

ಕೊರೋನಾ ವಾರಿಯರ್ಸ್ ಎಂದು ಪತ್ರಕರ್ತರನ್ನು ಹೆಸರಿಗಷ್ಟೇ ಹೇಳಲಾಗಿದೆ. ಅವರಿಗೆ ಯಾವುದೇ ರೀತಿಯ ವಿಮೆ ಸೌಲಭ್ಯವನ್ನೂ ನೀಡಿಲ್ಲ, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೂ ಕೋವಿಡ್​ ವಿಮೆ ಅನ್ವಯ ಆಗಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

Follow Us:
Download App:
  • android
  • ios