Asianet Suvarna News Asianet Suvarna News

ವರುಣದಲ್ಲಿ ಪಕ್ಷದ ಮೇಲಿನವರು ಏನು ಮಾಡಿದ್ದಾರೆ ಎಂದು ಅವರಿಗೇ ಗೊತ್ತು: ವಿ.ಸೋಮಣ್ಣ

ನನ್ನ ಸೋಲಿಗೆ ಎರಡು ಮೂರನೇ ಹಂತದ ನಾಯಕರು ಕಾರಣವಲ್ಲ. ಅದಕ್ಕೂ ಮೇಲಿನವರು ಏನು ಮಾಡಿದ್ದಾರೆ ಎಂದು ಅವರಿಗೇ ಗೊತ್ತು. ಚಾಮುಂಡೇಶ್ವರಿ ತಾಯಿಯೇ ನನ್ನ ವಿರುದ್ಧದ ಅಪಪ್ರಚಾರವನ್ನು ನೋಡಿಕೊಳ್ಳುತ್ತಾಳೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಮಾರ್ಮಿಕವಾಗಿ ನುಡಿದರು. 

He himself knows what the higher ups of the party have done in Varuna Constituency Says V Somanna gvd
Author
First Published May 18, 2023, 2:00 AM IST | Last Updated May 18, 2023, 4:07 AM IST

ಮೈಸೂರು (ಮೇ.18): ನಗರದಲ್ಲಿ ಬುಧವಾರ ಆಯೋಜಿಸಿದ್ದ ವರುಣ ಕ್ಷೇತ್ರದ ಬಿಜೆಪಿಯ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್‌ ಸೂಚಿಸಿದ್ದರಿಂದ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾದೆ. ಆದರೆ ಸೋಲಿನ ಕಾರಣವು ಮುದೊಂದು ದಿನ ಹೊರಗೆ ಬರುತ್ತದೆ ಎನ್ನುತ್ತ ತಮ್ಮ ರಾಜಕೀಯ ಜೀವನದ ಏಳುಬೀಳು ನೆನೆದರು. ತಮ್ಮ ಸೋಲಿಗೆ ಕಾರಣರಾದವರ ಬಗ್ಗೆ ಮಾರ್ಮಿಕವಾಗಿ ಟೀಕಿಸಿದರು.

ರಾಜ್ಯದಲ್ಲಿಯೇ ಅತ್ಯಂತ ಎತ್ತರಕ್ಕೆ ಬೆಳೆದಿರುವ ಗೋವಿಂದರಾಜನಗರ ಕ್ಷೇತ್ರ ಬಿಟ್ಟು ಅನಿರೀಕ್ಷಿತವಾಗಿ ವರುಣಕ್ಕೆ ಬಂದೆ. ಪಕ್ಷದ ಆದೇಶವನ್ನು ಪಾಲಿಸಿದೆ. ನಾಯಕರು ಹೇಳಿದ್ದನ್ನು ಪ್ರಶ್ನಿಸದೆ ಸ್ವಿಕರಿಸಿದೆ. ವರುಣ ಕ್ಷೇತ್ರದಲ್ಲಿ ಎಲ್ಲ ಮುಖಂಡರು ಕಾರ್ಯಕರ್ತರು ಬೆಂಬಲ ನೀಡಿದರು. ಆದರೆ ಮೇಲಿನವರು ಏನು ಮಾಡಿದ್ದಾರೆ ಎಂಬುದು ಅವರಿಗೇ ಗೊತ್ತು ಎಂದರು. ವರುಣ ಮತ್ತು ಚಾಮರಾಜನಗರದಲ್ಲಿನ ನನ್ನ ಸೋಲಿನ ಕಾರಣವು ಮುಂದೊಂದು ದಿನ ತಾನೇ ಹೊರಗೆ ಬರುತ್ತದೆ. ರಾಜಕೀಯ ನಿಂತ ನೀರಲ್ಲ, ಸದಾ ಹರಿಯುವ ನೀರು. ನಾನು ದೇವೇಗೌಡರ ಗರಡಿಯಲ್ಲಿ ಬೆಳೆದಿದ್ದೇನೆ. ಜೆ.ಎಚ್‌. ಪಟೇಲ್‌ ಅವರ ಜೊತೆಯಲ್ಲಿ ಬೆಳೆದವನು. 

ಕಮಲ ಹಿಡಿದಾಗಲೇ ಸಿ.ಪಿ.ಯೋಗೇಶ್ವರ್‌ಗೆ ಹೆಚ್ಚು ಸೋಲು!

ಬಿಜೆಪಿಗೆ ಬಂದಾಗ ಯಡಿಯೂರಪ್ಪ ಅವರು ಏನೆಲ್ಲಾ ಕೆಲಸ ಮಾಡಬೇಕು ಎಂದು ಹೇಳಿಕೊಟ್ಟರು. ನನಗೆ ಪಕ್ಷವೇ ದೇವರು, ಪಕ್ಷವೇ ತಾಯಿ. ಆದರೆ, ನನಗೆ ಸಿಟ್ಟು ಬಂದರೆ ಪಕ್ಷವೂ ಬೇಡ ಎಂದು ಹೋಗುತ್ತಿರುತ್ತೆನೆ ಎಂದು ಬೇಸರ ವ್ಯಕ್ತಪಡಿಸಿದರು. ಎಸ್‌.ಎಂ. ಕೃಷ್ಣ ಅವರ ವಿರುದ್ಧ ಜಗಳ ಮಾಡಿಕೊಂಡು ಪಕ್ಷೇತರವಾಗಿ ಸ್ಪರ್ಧಿಸಿ ಗೆದ್ದೆ. ನಾನು ತಪ್ಪು ಮಾಡಿದ್ದರೆ ಒಪ್ಪಿಕೊಳ್ಳುತ್ತೇನೆ. ನನಗಿಂತ ದೊಡ್ಡವನು ತಪ್ಪು ಮಾಡಿದ್ದರೂ ತಪ್ಪೆಂದು ಹೇಳುತ್ತೇನೆ. ವರುಣದಲ್ಲಿ ಯಾರಿಗಾದರೂ ತೊಂದರೆ ಕೊಟ್ಟರೆ ಸೋಮಣ್ಣ ಇದ್ದಾನೆ. ಚಿಂತಿಸಬೇಕಿಲ್ಲ ಎಂದು ಧೈರ್ಯ ತುಂಬಿದರು.

ಬೆಂಗಳೂರಿನಲ್ಲಿ ನನ್ನದೇ ಆದ ಕೋಟೆ ಕಟ್ಟಿದ್ದೇನೆ. ನಾನು ನನ್ನ ದುಡಿಮೆಯಲ್ಲಿ ಬೆಳೆದಿದ್ದೇನೆ. ಹೈಕಮಾಂಡ್‌ ಯಾಕೆ ನನ್ನ ಇಲ್ಲಿಗೆ ಕರೆಸಿದ್ದರೋ ಗೊತ್ತಿಲ್ಲ. ಚಿನ್ನದಂತ ನನ್ನ ಕ್ಷೇತ್ರದ ಜನ ಬೀದಿಯಲ್ಲಿ ಅನಾಥರಾಗಿ ಕಣ್ಣಿರು ಸುರಿಸುತ್ತಿದ್ದಾರೆ. ಅಂಗವಿಕಲರಿಗೆ ಮಾಡಿದ್ದ ಜಿಮ್‌ಗೆ ಬೀಗ ಹಾಕಿದ್ದಾರೆ ಎಂದರು. ನಾನು ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಹೋದೆ. ನನ್ನ ಸೋದರ ಮಾವ ನಿಜಲಿಂಗಪ್ಪನ ಅಳಿಯ. ನಾನು ನನ್ನ ಅಮ್ಮ ಮಾವನ ಮನೆಗೆ ಹೋದಾಗ ಇವನನ್ನು ಯಾಕೆ ಕರೆದುಕೊಂಡು ಬಂದೆ ಎಂದು ಬೈದರು. ನಮ್ಮ ಅಮ್ಮ ನನಗೆ . 25 ನೀಡಿ ಇವನ ಮನೆಗೆ ಇನ್ಯಾವತ್ತೂ ಹೋಗಬೇಡ. ನಿಮಪ್ಪನ ಹೆಸರು ಉಳಿಸಿ ಬೆಳೆಯಬೇಕು. 

ನಾನು ಸಚಿವನಾದ ಮೇಲೆ ನನ್ನ ಮಾವ ನನ್ನ ಮನೆಗೆ ಬಂದ. ಒಳ್ಳೆಯವರಿಗೆ ಯಾರು ಅನ್ಯಾಯ ಮಾಡಬೇಡಿ ಎಂದು ತಮ ರಾಜಕೀಯ ಜೀವನವನ್ನು ಮೆಲುಕು ಹಾಕಿದರು. ಅಶೋಕ ಮನೆಗೆ ಬಂದು ನನ್ನ ತರ ನಿಲ್ಲಬೇಕು ಎಂದ. ನಾನು ಅಶೋಕ ಅಲ್ಲ, ಸೋಮಣ್ಣ ಎಂದೆ. ಪ್ರವಾಹದ ವಿರುದ್ಧ ಈಜಲು ಪಕ್ಷ ಹೇಳಿದೆ, ಅದಕ್ಕೆ ನಿಂತೆ ಅಂದೆ. ಎಲ್ಲರೂ ಪಕ್ಷ ಸಂಘಟಿಸಬೇಕು. ಪಕ್ಷ ಹೇಳಿದ ಮಾತು ಕೇಳಬೇಕು. ಜಾತಿ ನೋಡದೇ ನಾಯಕರನ್ನು ಬೆಳೆಸಬೇಕು ಎಂದು ಹೇಳಿದರು.

ಮೇಲುಕೋಟೆ ಅಭಿವೃದ್ಧಿಗೆ ಪ್ರಾಧಿಕಾರ: ದರ್ಶನ್‌ ಪುಟ್ಟಣ್ಣಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಟರಾದ ಶಿವರಾಜಕುಮಾರ್‌, ಲೂಸ್‌ ಮಾದ, ದುನಿಯಾ ವಿಜಯ್‌ ಕರೆತಂದರು. ಸಿದ್ದರಾಮಯ್ಯ ಅವರ ಇಡೀ ಜೀವನದಲ್ಲಿ ಖರ್ಚು ಮಾಡದಷ್ಟುಹಣವನ್ನು ಈ ಬಾರಿಯ ಚುನಾವಣೆಯಲ್ಲಿ ಖರ್ಚು ಮಾಡಿದ್ದಾರೆ. ಸಿದ್ದರಾಮಯ್ಯಗೆ ಯಾರು ಯಾರು ಫಂಡ್‌ ಮಾಡಿದ್ದಾರೆ ಎಂದು ಗೊತ್ತು. ನಾನು ದಡ್ಡನಲ್ಲ, ದಡ್ಡನ ತರಹ ನಡೆದುಕೊಳ್ಳುವ ಬುದ್ಧಿವಂತ ಎಂದು ಅವರು ಹೇಳಿದರು. ಶಾಸಕ ಟಿ.ಎಸ್‌. ಶ್ರೀವತ್ಸ, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್‌, ಮುಖಂಡರಾದ ಮೈ.ವಿ. ರವಿಶಂಕರ್‌, ಎಸ್‌. ಮಹದೇವಯ್ಯ, ಕೋಟೆ ಎಂ. ಶಿವಣ್ಣ, ಕಲ್ಮಳ್ಳಿ ವಿಜಯಕುಮಾರ್‌ ಇದ್ದರು.

Latest Videos
Follow Us:
Download App:
  • android
  • ios