ರಾಜ್ಯ ಸಚಿವ ಸಂಪುಟದಲ್ಲಿ ತೆಗೆದುಕೊಂಡ ಮಹತ್ವದ ತೀರ್ಮಾನಗಳು
* ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ
* ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆ
* ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸಭೆಯಲ್ಲಿ ಮಹತ್ವದ ನಿರ್ಧಾರ
ಬೆಂಗಳೂರು, (ಜು.15): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು (ಗುರುವಾರ) ಸಚಿವ ಸಂಪುಟ ನಡೆಯಿತು.
ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲೂ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ನು ಕ್ಯಾಬಿನೆಟ್ ಸಭೆಯಲ್ಲಿ ತೆಗೆದುಕೊಂಡು ತೀರ್ಮಾನಗಳು ಈ ಕೆಳಗಿನಂತಿವೆ.
ದೀದಿ ನಾಡಲ್ಲಿ ಹಿಂಸಾಚಾರವೇ ಹೆಚ್ಚು, ಇಂದ್ರಜಿತ್ಗೆ ಉತ್ತರಿಸಿದ ದಚ್ಚು; ಜು.15ರ ಟಾಪ್ 10 ಸುದ್ದಿ!
ಸಂಪುಟ ಸಭೆ ತೀರ್ಮಾನಗಳು
* ಗೋಹತ್ಯೆ ನಿಷೇಧ ಕಾಯ್ದೆ ಜಾರಿಗಾಗಿ ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆಗಳ ಸ್ಥಾಪನೆ, ಅಂದಾಜಿಸಿದ ವೆಚ್ಚದ ಪ್ರಕಾರ ಮೊದಲ ಹಂತದಲ್ಲಿ 15 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ
* ಕರ್ನಾಟಕ ರಾಜ್ತ ಹಣಕಾಸು ಸಂಸ್ಥೆಯಿಂದ ಸಾಲ ಪಡೆದು ಕಟ್ ಬಾಕಿದಾರರಾದ 1,500 ಜನರಿಗೆ ವಿಶೇಷ ವಿನಾಯಿತಿ ಯೋಜನೆ ಅನ್ವಯಿಸುವುದಕ್ಕೆ ಅಸ್ತು.
* ಗದಗ ಪಶು ಸಂಗೋಪನೆ ಕಾಲೇಜಿನದ ಮೂರನೇ ಹಂತದ 30 ಕೋಟಿ ರೂ ಅಂದಾಜು ವೆಚ್ಚದ ಕಾಮಗಾರಿಗಳಿಗೆ ಆಡಳಿತಾತ್ಮಕ ಒಪ್ಪಿಗೆ
* ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 9 ರಿಂದ 11ರವರೆಗೆ ಇನ್ವೆಸ್ಟ್ ಕರ್ನಾಟಕ-2022; ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜನೆಗೆ ಅಸ್ತು
* ರಾಜ್ಯದಲ್ಲಿರುವ ಆಮ್ಲಜನಕ ಉತ್ಪಾದನೆ ಹಾಗೂ ಅಸೋಸಿಯೇಟ್ ಎಂಟರ್ ಪ್ರೈಸಸ್ ಗೆ ವಿಶೇಷ ಪ್ರೋತ್ಸಾಹ ನೀಡುವ ಯೋಜನೆಗೆ ಸಮ್ಮತಿ
* ಜಿಲ್ಲಾ, ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಡಿಸೆಂಬರ್ ಅಂತ್ಯದ ವರೆಗೆ ಮುಂದೂಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
* ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆಗೆ ಸಮ್ಮತಿ
* ದಾಸನಪುರ ಉಪ ಮಾರುಕಟ್ಟೆ ಪ್ರಾಂಗಣದ 'ಇ' ಬ್ಲಾಕ್ ನಲ್ಲಿರುವ ಮಳಿಗೆ/ಉಗ್ರಾಣಗಳನ್ನು ಗುತ್ತಿಗೆ ಕಮ್ ಮಾರಾಟಕ್ಕೆ ನೀಡಲು ಪ್ರಸ್ತಾವಿತ ಮೌಲ್ಯ ಪರಿಷ್ಕರಣೆ
* ರಾಜ್ಯದ ಉದ್ಯೋಗಾಧಾರಿತ ವ್ಯಾಸಂಗ ( ಜೆಒಸಿ) ಪಿಯುಸಿಗೆ ತತ್ಸಮಾನವೆಂದು ಪರಿಗಣನೆ
* ಸನ್ನಡತೆಯ ಆಧಾರದಲ್ಲಿ 139 ಜೀವಾವಧಿ ಸಜಾ ಕೈದಿಗಳ ಅವಧಿಪೂರ್ವ ಬಿಡುಗಡೆ ಮಾಡಲು ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಶಿಫಾರಸು.
* ರಾಯಚೂರು ಜಿಲ್ಲೆ ದೇವದುರ್ಗದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅಂದಾಜಿಸಿದ ವೆಚ್ಚ 58 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಒಪ್ಪಿಗೆ
* 2019ರ ಆಗಸ್ಟ್-ಸೆಪ್ಟಂಬರ್ ಪ್ರವಾಹ ಸಂದರ್ಭದಲ್ಲಿ ಸಂತ್ರಸ್ತರಿಗೆ ಮನೆಗಳ ಪುನರ್ ನಿರ್ಮಾಣ, ರಿಪೇರಿ ಹಾಗೂ ಮನೆ ಬಾಡಿಗೆ ಪಾವತಿಸಲು ಹೊರಡಿಸಿದ ಐದು ಆದೇಶಗಳಿಗೆ ಘಟನೋತ್ತರ ಮಂಜೂರು
* ಕರ್ನಾಟಕ ಕಂದಾಯ ಉಪ ಶಾಖೆ ಸೇವೆಗಳು (ನೇಮಕ) ( ತಿದ್ದುಪಡಿ) ನಿಯಮಗಳು-2021ಕ್ಜೆ ಒಪ್ಪಿಗೆ
* ಬೆಳಗಾವಿ ಹಾಗೂ ಮಂಗಳೂರಿನಲ್ಲಿ ಒಟ್ಟು 31.66 ಕೋಟಿ ರೂ ವೆಚ್ಚದಲ್ಲಿ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯ ಕಟ್ಟಡಗಳ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ
* ಬಳ್ಳಾರಿ ಜಿಲ್ಲೆ ಸಿರುಗುಪ್ಪ ನಗರಕ್ಕೆ ಕುಡಿಯುವ ನೀರು ಪೂರೈಕೆಗಾಗಿ 45.46 ಕೋಟಿ ರೂ ವೆಚ್ಚದಲ್ಲಿ 2,500 ದಶಲಕ್ಷ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಗಾರ ನಿರ್ಮಾಣ,
* ತುಂಗಭದ್ರಾ ಕೆಳಮಟ್ಟದ ಬಾಗೇವಾಡಿ ವಿತರಣಾ ಕಾಲುವೆಯಿಂದ ಈ ಜಲಾಗಾರಕ್ಕೆ ನೀರು ಒದಗಿಸಲು ಆಡಳಿತಾತ್ಮಕ ಅನುಮೋದನೆ
* ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮೆದ್ಲೇರಿ, ರಾಹುತನ ಕೆರೆ ಹಾಗೂ ಇತರ 18 ಕೆರೆಗಳನ್ನು ಭರ್ತಿ ಮಾಡುವ 206 ಕೋಟಿ ರೂ ವೆಚ್ಚದ ವಿಸ್ತೃತ ಯೋಜನಾ ವರದಿ ಸ್ಥಿರೀಕರಣ
* ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ದೇವಿಘಾಟ್ ಸಮೀಪದ ತುಂಗಭದ್ರಾ ನದಿಯಿಂದ ಮುಕ್ಕುಂಪಿ ಹಾಗೂ ಇತರ ಐದು ಕೆರೆಗಳನ್ನು ತುಂಬುವ 93 ಕೋಟಿ ರೂ ವೆಚ್ಚದ ವಿಸ್ತೃತ ಯೋಜನಾ
* ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ 1,100 ಹೆಕ್ಟೇರ್ ಪ್ರದೇಶಕ್ಕೆ ನೀರುಣ್ಣಿಸಲು ಉದ್ದೇಶಿತ 240 ಕೋಟಿ ರೂ ವೆಚ್ಚದಲ್ಲಿ ನೇತ್ರಾವತಿ ನದಿಗೆ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಯೋಜನೆ