Asianet Suvarna News Asianet Suvarna News

ಸಚಿವರಿಗೆ ಕನ್ನಡ ರಾಜ್ಯೋತ್ಸ ಧ್ವಜಾರೋಹಣ ಜವಾಬ್ದಾರಿ ಹಂಚಿಕೆ: ಯಾರು, ಎಲ್ಲಿ?

ರಾಜ್ಯದ ಯಾವ ಜಿಲ್ಲೆಯಲ್ಲಿ ಯಾರು ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಬೇಕೆಂದು ರಾಜ್ಯ ಸರ್ಕಾರ ಸಚಿವರ ಹೆಸರಗಳನ್ನ ಪ್ರಕಟಿಸಿದೆ.

here Is  Minister Names kannada rajyotsava Flagg hoisting On Nov 1 In District Place rbj
Author
Bengaluru, First Published Oct 29, 2020, 4:22 PM IST

ಬೆಂಗಳೂರು, (ಅ.29): ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ-ಬಾಗಲಕೋಟೆ, ಡಾ. ಅಶ್ವತ್ಥ್ ನಾರಾಯಣ-ರಾಮನಗರ, ಲಕ್ಷ್ಮಣ ಸವದಿ- ರಾಯಚೂರಿನಲ್ಲಿ ಧ್ವಜಾರೋಹಣ ಮಾಡಲಿದ್ದಾರೆ.

ಎಂಎಲ್‌ಎ ಸೋತ್ರು ಹೊಸಕೋಟೆಯಲ್ಲಿ ಕಮಲ ಅರಳಿಸಿದ ಎಂಟಿಬಿ ನಾಗರಾಜ್

ಕೆ.ಎಸ್.ಈಶರಪ್ಪ-ಶಿವಮೊಗ್ಗ, ಆರ್.ಅಶೋಕ್-ಬೆಂಗಳೂರು ಗ್ರಾಮಾಂತರ, ಜಗದೀಶ್ ಶೆಟ್ಟರ್- ಧಾರವಾಡ, ಬಿ.ಶ್ರೀರಾಮುಲು-ಚಿತ್ರದುರ್ಗ, ಎಸ್.ಸುರೇಶ್ ಕುಮಾರ್- ಚಾಮರಾಜನಗರ, ವಿ. ಸೋಮಣ್ಣ-ಕೊಡಗು, ಟಿ.ರವಿ-ಚಿಕ್ಕಮಗಳೂರು, ಬಸವರಾಜ್ ಬೊಮ್ಮಾಯಿ-ಹಾವೇರಿ, ಕೋಟ ಶ್ರೀನಿವಾಸ ಪೂಜಾರಿ-ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ಜೆ.ಸಿ. ಮಾಧುಸ್ವಾಮಿ ಅವರಿಗೆ ದ್ವಜಾರೋಹಣದ ಜವಾಬ್ದಾರಿ ನೀಡಲಾಗಿದೆ.

ಉಳಿದಂತೆ ಸಿ.ಸಿ. ಪಾಟೀಲ-ಗದಗ, ಎಚ್.ನಾಗೇಶ- ಕೋಲಾರ, ಪ್ರಭು ಚೌವ್ಹಾಣ್- ಬೀದರ್, ಶಶಿಕಲಾ ಜೊಲ್ಲೆ- ವಿಜಯಪುರ, ಆನಂದ ಸಿಂಗ್- ಬಳ್ಳಾರಿ, ಬೈರತಿ ಬಸವರಾಜ್- ದಾವಣಗೆರೆ, ಎಸ್.ಟಿ. ಸೋಮಶೇಖರ್- ಮೈಸೂರು, ಬಿ.ಸಿ. ಪಾಟೀಲ್-ಕೊಪ್ಪಳ, ಡಾ.ಕೆ. ಸುಧಾಕರ್- ಚಿಕ್ಕಬಳ್ಳಾಪುರ, ಕೆ.ಸಿ. ನಾರಾಯಣಗೌಡ-ಮಂಡ್ಯ, ಶಿವರಾಮ್ ಹೆಬ್ಬಾರ್-ಉತ್ತರ ಕನ್ನಡ, ರಮೇಶ್ ಜಾರಕಿಹೊಳಿ-ಬೆಳಗಾವಿ, ಕೆ. ಗೋಪಾಲಯ್ಯ-ಹಾಸನ, ಶ್ರೀಮಂತ ಪಾಟೀಲ್- ಕಲಬುರಗಿ, ಉಡುಪಿ ಹಾಗೂ ಯಾದಗಿರಿಯಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Follow Us:
Download App:
  • android
  • ios