Asianet Suvarna News Asianet Suvarna News

Himachal Pradesh election 2022: ನಾಳೆ ಚುನಾವಣೆ, ಇತಿಹಾಸದತ್ತ ಬಿಜೆಪಿ ಕಣ್ಣು!

ಕಳೆದ ಎರಡು ಚುನಾವಣಾ ವಿಧಾನಸಭೆ ಚುನಾವನೆಗಳಿಂದ ಹಿಮಾಚಲ ಪ್ರದೇಶದ ಕಣದಲ್ಲಿ ಹಿನ್ನಡೆಯಲ್ಲಿರುವ ಕಾಂಗ್ರೆಸ್‌ಗೆ ಹಿಮಾಚಲವನ್ನು ಬಿಜೆಪಿಯಿಂದ ಕಸಿದುಕೊಳ್ಳುವುದು ಅಸ್ತಿತ್ವದ ಪ್ರಶ್ನೆ ಎನಿಸಿಕೊಂಡಿದೆ.

Himachal Pradesh election 2022 Polls on Saturday BJP Eyes History san
Author
First Published Nov 11, 2022, 5:40 PM IST

ಶಿಮ್ಲಾ (ನ.11): ಹಿಮಾಚಲ ಪ್ರದೇಶ ರಾಜ್ಯಕ್ಕೆ ನಾಳೆ ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ  ತನ್ನ ಅಭಿವೃದ್ಧಿ ಅಜೆಂಡಾದ ಮೂಲಕ ಮತ್ತೆ ಅಧಿಕಾರಕ್ಕೆ ಏರುವ ಕನಸು ಕಾಣುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಕೂಡ ಬಿಜೆಪಿಯನ್ನು ಮಣಿಸುವುದು ತನ್ನ ಅಸ್ತಿತ್ವದ ಪ್ರಶ್ನೆಯಾಗಿ ಇರಿಸಿಕೊಂಡಿದೆ. ಶನಿವಾರ ಒಟ್ಟು 68 ವಿಧಾನಸಭಾ ಕ್ಷೇತ್ರಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದ್ದು, ಸ್ಪಷ್ಟ ಬಹುಮತ ಸಂಪಾದಿಸಲು 35 ಸೀಟ್‌ಗಳನ್ನು ಗೆಲ್ಲಬೇಕಿದೆ. ಈವರೆಗೂ ನಡೆದಿರುವ ನಾಲ್ಕು ಚುನಾವಣಾ ಪೂರ್ವ ಸಮೀಕ್ಷೆಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಸರಾಸರಿಯಾಗಿ 38-46 ಸೀಟು ಗೆಲ್ಲಬಹುದು ಎಂದು ಅಂದಾಜಿಸಲಾಗಿದ್ದರೆ, ಒಂದು ಸಮೀಕ್ಷೆಯಲ್ಲಿ ಬಿಜೆಪಿ 31-39ರ ವರೆಗಿನ ಸೀಟು ಗೆಲ್ಲಬಹುದು ಎಂದು ಹೇಳಿದೆ. ಡಿಸೆಂಬರ್‌ 8 ರಂದು ಚುನಾವಣೆಯ ಫಲಿತಾಂಶಗಳು ಪ್ರಕಟವಾಗಲಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ಹಲವೆಡೆ ದಾಳಿ ನಡೆದಿದ್ದು ಈವರೆಗೂ 50 ಕೋಟಿಗಿಂತ ಹೆಚ್ಚಿನ ಮೊತ್ತದ ಮದ್ಯ, ಹಣ ಹಾಗೂ ಫ್ರೀ ಗಿಫ್ಟ್‌ಗಳನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. 2017ರ ಚುನಾವಣೆಯಲ್ಲಿ ಕೇವಲ 9 ಕೋಟಿ ಇಂಥ ವಸ್ತುಗಳನ್ನು ಆಓಗ ವಶಪಡಿಸಿಕೊಂಡಿದ್ದರೆ, ಈ ಬಾರಿ ಇದರಲ್ಲಿ ಐದು ಪಟ್ಟು ಏರಿಕೆಯಾಗಿದೆ.

ರಾಜ್ಯದ 68 ಕ್ಷೇತ್ರಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಮತ್ತು ಬಿಜೆಪಿಯ ಮಾಜಿ ಮುಖ್ಯಸ್ಥ ಸತ್ಪಾಲ್ ಸಿಂಗ್ ಸತ್ತಿ ಸೇರಿದಂತೆ 412 ಅಭ್ಯರ್ಥಿಗಳ ಭವಿಷ್ಯವನ್ನು 55 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ.

ಆಡಳಿತಾರೂಢ ಬಿಜೆಪಿಗೆ, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಮತದಾರರಿಗೆ ವೈಯಕ್ತಿಕ ಮನವಿಯೊಂದಿಗೆ ತಮ್ಮ ಪ್ರಚಾರವನ್ನು ಅಬ್ಬರದಿಂದ ನಡೆಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಮಲ ಚಿಹ್ನೆಗೆ ಹಾಕುವ ಪ್ರತಿ ಮತ ಕೇಂದ್ರದಲ್ಲಿ ತಮ್ಮ ಬಲವನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಮತದಾರರಲ್ಲಿ ಭಾವನಾತ್ಮಕ ಮನವಿ ಮಾಡಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿಗೆ ಸಾರ್ವಜನಿಕ ಸಂಪರ್ಕದ ಹೊರತಾಗಿ ಸರಣಿ ಚುನಾವಣಾ ಸಭೆಗಳನ್ನು ನಡೆಸಿದರು, ಆದರೆ ಪ್ರತಿಪಕ್ಷ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ಹೆಚ್ಚಾಗಿ ಕೇಂದ್ರಿಕೃತವಾಗಿತ್ತು.

ಇನ್ನು ಕಾಂಗ್ರೆಸ್‌ ಪಕ್ಷದ ಪಾಲಿಗೆ ಹಿಮಾಚಲ ಪ್ರದೇಶ ಚುನಾವಣೆ ಅಸ್ತಿತ್ವದ ಪ್ರಶ್ನೆ ಎನಿಸಿಕೊಂಡಿದೆ. ಕಾಂಗ್ರೆಸ್‌ ಪಕ್ಷ 24 ವರ್ಷಗಳ ಬಳಿಕ ಗಾಂಧಿಯೇತರ ಅಧ್ಯಕ್ಷರನ್ನು ಹೊಂದಿದ್ದರೆ, ಮಾಜಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಈ ಬಾರಿ ಹಿಮಾಚಲ ಪ್ರದೇಶ ಚುನಾವಣಾ ಪ್ರಚಾರದಿಂದ ಸಂಪೂರ್ಣವಾಗಿ ಹೊರಗುಳಿದಿದ್ದರು. ಸ್ಥಳೀಯ ನಾಯಕರೇ ಹೆಚ್ಚಾಗಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಾರೆ. 2021 ರಲ್ಲಿ ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ಪುದುಚೇರಿ ಮತ್ತು ಈ ವರ್ಷ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ಸೇರಿದಂತೆ ಎರಡು ವರ್ಷಗಳಲ್ಲಿ ಒಂಬತ್ತು ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲು ಕಂಡಿದೆ.

ಗೆದ್ದರೆ ಏಕರೂಪ ನಾಗರಿಕ ಸಂಹಿತೆ: ಹಿಮಾಚಲದಲ್ಲಿ ಬಿಜೆಪಿ ಪ್ರಣಾಳಿಕೆ

ಹಿಮಾಚಲ ಪ್ರದೇಶ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದ ಪಕ್ಷವನ್ನೇ ಮತ್ತೆ ಅಧಿಕಾರಕ್ಕೆ ತಂದಿರುವುದು ಇತಿಹಾಸವಾಗಿರುವ ಕಾರಣ ಬಿಜೆಪಿ ಕೂಡ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಕೂಡ ಇದೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷವು ಹಿಮಾಚಲದಲ್ಲಿ ಟ್ರೆಂಡ್‌ ಸೆಟ್ಟಿಂಗ್‌ ಶಕ್ತಿಯಾಗಿ ಹೊರಹೊಮ್ಮಿದೆ. ಅಧಿಕಾರದಲ್ಲಿರುವ ಸರ್ಕಾರಗಳನ್ನು ಇಲ್ಲಿನ ಜನ ಮರು ಆಯ್ಕೆ ಮಾಡಲು ಇಷ್ಟಪಡುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ಮತ್ತೆ ‘ಕೈ’ ಹೊಗಳಿದ Ghulam Nabi Azad..!

ಮುಂದಿನ ವರ್ಷದ ಚುನಾವಣೆಗೆ ಬಿಜೆಪಿಗೆ ವಿಶ್ವಾಸ ತುಂಬಲಿದೆ ಗೆಲುವು: ಹಿಮಾಚಲದಲ್ಲಿನ ಗೆಲುವು ಮುಂದಿನ ವರ್ಷ ನಡೆಯಲಿರುವ ಒಂಬತ್ತು ರಾಜ್ಯಗಳ ಚುನಾವಣೆಗಳಲ್ಲಿ ಬಿಜೆಪಿಯ ಅವಕಾಶಗಳನ್ನು ಹೆಚ್ಚಿಸುತ್ತದೆ, ಇದರಲ್ಲಿ ಎಲ್ಲಾ ಪ್ರಮುಖ ಹಿಂದಿ ರಾಜ್ಯಗಳಾದ ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶ ಮತ್ತು ನಂತರ 2024 ರ ಸಾರ್ವತ್ರಿಕ ಚುನಾವಣೆಗಳು ಸೇರಿವೆ. ಹಿಮಾಚಲದಲ್ಲಿ ಹೊಸ ಪ್ರವೇಶ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಚಾರವು ಗಮನ ಸೆಳೆದಿಲ್ಲ. ಈ ಬಾರಿಯೂ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವಿನ ನೇರ ಮುಖಾಮುಖಿ ಎನಿಸಿಕೊಳ್ಳಲಿದೆ. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಮತ್ತು ಎಂಟು ಲಕ್ಷ ಉದ್ಯೋಗಗಳ ಅನುಷ್ಠಾನದ ಭರವಸೆಯನ್ನು ಬಿಜೆಪಿ ನೀಡಿದ್ದು, ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ, 300 ಯೂನಿಟ್ ಉಚಿತ ವಿದ್ಯುತ್ ಮತ್ತು ₹ 680 ಕೋಟಿ ಸ್ಟಾರ್ಟ್‌ಅಪ್ ನಿಧಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಸೇರಿವೆ.
 

Follow Us:
Download App:
  • android
  • ios