ಹೊಸಕೋಟೆಯ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೊರೋನಾದಿಂದ ಗುಣಮುಖರಾಗಿದ್ದು, ಅವರ ಮೊದಲ ಪ್ರತಿಕ್ರಿಯೆ ಹೀಗಿದೆ ನೋಡಿ.

ಬೆಂಗಳೂರು, (ಜುಲೈ,18): ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಮತ್ತು ಪತ್ನಿ ಪ್ರತಿಭಾ ಶರತ್ ಅವರು ಕೋವಿಡ್​ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶರತ್ ಬಚ್ಚೇಗೌಡ ದಂಪತಿಗೆ ಜು.8ರಂದು ಸೋಂಕು ದೃಢಪಟ್ಟಿತ್ತು. ವೈದ್ಯರ ಸಲಹೆ ಮೇರೆಗೆ ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಅವರು ಮನೆಯಲ್ಲೇ ಕ್ವಾರಂಟೈನ್​ಗೆ ಒಳಪಟ್ಟಿದ್ದರು. ಮತ್ತೊಮ್ಮೆ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು, ಇಂದು(ಶನಿವಾರ) ಬಂದ ವರದಿಯಲ್ಲಿ ನೆಗೆಟಿವ್ ಅಂತ​ ಬಂದಿದೆ.

ಮತ್ತೋರ್ವ ಶಾಸಕನಿಗೆ ಕೊರೋನಾ: ಬೆಚ್ಚಿಬಿದ್ದ ಕರ್ನಾಟಕದ ರಾಜಕೀಯ ನಾಯಕರು

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿರುವ ಶರತ್ ಬಚ್ಚೇಗೌಡ, ನಾನು ಹಾಗೂ ನನ್ನ ಧರ್ಮಪತ್ನಿ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿದ್ದೇವೆ. ಇಂದು ಕೊರೋನಾ ಪರೀಕ್ಷೆಯ ಫಲಿತಾಂಶದಲ್ಲಿ ನೆಗಟಿವ್ ಬಂದಿದೆ. ನಾವು ಗುಣಮುಖರಾಗಲೆಂದು ಆಶೀರ್ವಾದಕ್ಕೆ ಮಾಡಿದವರಿಗೆಲ್ಲ ನಾವು ಮತ್ತು ನಮ್ಮ ಕುಟುಂಬ ಸದಾ ಚಿರಋಣಿಯಾಗಿರಲಿದೆ ಎಂದಿದ್ದಾರೆ.

Scroll to load tweet…

ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಈ ಸಾಂಕ್ರಾಮಿಕ ರೋಗದ ವಿರುದ್ಧ ಎಲ್ಲರೂ ಧೈರ್ಯದಿಂದ ಒಗ್ಗಟ್ಟಾಗಿ ಹೋರಾಡೋಣ, ಯಾರೂ ತಾಳ್ಮೆ ಕಳೆದುಕೊಂಡು ಧೃತಿಗೆಡಬಾರದು ಎಂದು ಶಾಸಕರು ಮನವಿ ಮಾಡಿದ್ದಾರೆ.

ಸೋಂಕಿತರು ಕ್ವಾರಂಟೈನ್ ಅವಧಿ ಮತ್ತು ಸರ್ಕಾರದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸುವುದನ್ನ ಮರಿಯಬೇಡಿ ಎಂದು ತಿಳಿಸಿದ್ದಾರೆ.