ನಾನು ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಇದನ್ನು ಹಿಂದೆಯೂ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ತಿಳಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು(ಫೆ.12): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿಗಳನ್ನು ತಳ್ಳಿ ಹಾಕಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ‘ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ’ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ. 

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಇದನ್ನು ಹಿಂದೆಯೂ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. 

ಜೆಡಿಎಸ್‌ನಿಂದ ಸ್ಪರ್ಧಿಸಲು ಮಂಡ್ಯದಲ್ಲಿ ಗಂಡಸರಿಲ್ವಾ ಎಂದ ಕದಲೂರು; ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿಯಾದ ಸುಮಲತಾ!

2019ರಲ್ಲಿ ನಾನು ಕ್ಷೇತ್ರದ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗ ಸ್ಪರ್ಧೆಗೆ ಮಂಡ್ಯ ಜನರ ಒತ್ತಾಯವಿದೆ. ಅವರ ಪ್ರೀತಿ, ವಿಶ್ವಾಸ ಹಾಗೂ ಒತ್ತಡದ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಪಕ್ಷ ಸಂಘಟನೆಗಾಗಿ ಓಡಾಡಿದ್ದೆ ಅಷ್ಟೇ. ಆದರೆ, ಸ್ಪರ್ಧೆ ಇಲ್ಲ, ರಾಜ್ಯಾದ್ಯಂತ ಓಡಾಡಿ, ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವೆ ಎಂದು ಸ್ಪಷ್ಟಪಡಿಸಿದರು.