ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಎಸ್.ಟಿ.ಸೋಮಶೇಖರ್(ST Somashekhar) ಸಹಸ್ರಾರು ಬೆಂಬಲಿಗರೊಂದಿಗೆ ತೆರಳಿ ಸೋಮವಾರ ಉಮೇದುವಾರಿಕೆ ಸಲ್ಲಿಸಿದರು.
ಬೆಂಗಳೂರು (ಏ.18) : ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಎಸ್.ಟಿ.ಸೋಮಶೇಖರ್(ST Somashekhar) ಸಹಸ್ರಾರು ಬೆಂಬಲಿಗರೊಂದಿಗೆ ತೆರಳಿ ಸೋಮವಾರ ಉಮೇದುವಾರಿಕೆ ಸಲ್ಲಿಸಿದರು.
ಇದಕ್ಕೂ ಮುನ್ನ ಮಾಗಡಿ ಮುಖ್ಯರಸ್ತೆಯ ಅಂಜನಾ ನಗರ(Anjananagara)ದ ಆಂಜನೇಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಹೇರೋಹಳ್ಳಿ ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿ ಕಚೇರಿಗೆ ಸಾಗಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆ ವೇಳೆ ಕಾರ್ಯಕರ್ತರ ಜಯಘೋಷಣೆ ಮುಗಿಲು ಮುಟ್ಟಿತು. ರಸ್ತೆ ಉದ್ದಕ್ಕೂ ಕಿಕ್ಕಿರಿದು ತುಂಬಿದ್ದ ಕಾರ್ಯಕರ್ತರು ಸಚಿವರ ಪರ ಘೋಷಣೆ ಕೂಗಿದರು.
ಅಮುಲ್ ಜೊತೆ ನಂದಿನಿ ವಿಲೀನ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್
ಈ ವೇಳೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಸರ್ಕಾರಿ ಜಮೀನನ್ನು ಕೊಳ್ಳೆ ಹೊಡೆದ ರಿಯಲ್ ಎಸ್ಟೇಟ್ ಮಂದಿ ನನ್ನನ್ನು ಹಣಿಯಲು ಸಂಚು ರೂಪಿಸಿದ್ದಾರೆ. ಜನತೆಯ ಬೆಂಬಲ ನನಗಿದೆ. ಮೇ 13ರಂದು ನನ್ನ ರಾಜಕೀಯ ವಿರೋಧಿಗಳಿಗೆ ತಕ್ಕ ಉತ್ತರ ದೊರಕಲಿದೆ. 50 ಸಾವಿರಕ್ಕೂ ಹೆಚ್ಚು ಲೀಡ್ನೊಂದಿಗೆ ವಿಧಾನಸೌಧ ಪ್ರವೇಶಿಸಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಕಣ್ಣೀರು ಒರೆಸುವವನು:
ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ನ ಜವರಾಯಿಗೌಡರ ಹೆಸರು ಪ್ರಸ್ತಾಪಿಸದೆ, .205 ಕೋಟಿ ಒಡೆಯ ಕಣ್ಣೀರು ಹಾಕುವ ಬದಲು ಕೊಂಚವಾದರೂ ಖರ್ಚು ಮಾಡಿ ಜನರ ಕಣ್ಣೀರು ಒರೆಸುವ ಕೆಲಸ ಮಾಡಬಹುದಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ. ನಾನು ಕಣ್ಣೀರು ಹಾಕುವವನಲ್ಲ. ಕಣ್ಣೀರು ಒರೆಸುವವನು ಎಂದು ಸೋಮಶೇಖರ್ ಅವರು ಜೆಡಿಎಸ್ ಅಭ್ಯರ್ಥಿಗೆ ಟಾಂಗ್ ನೀಡಿದರು.
ನಾನು ಅಧಿಕಾರ ಇರದ ಸಮಯದಲ್ಲೂ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ನನ್ನ ಮೇಲೆ ಬೇಲಿ ಹಾಕಿದ ಆರೋಪಗಳಿಲ್ಲ. ಸರ್ಕಾರಿ ಜಮೀನು ಕಬಳಿಕೆ ಮಾಡಿಲ್ಲ. ಹತಾಶೆಯಿಂದ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸಕಾರಣವಿಲ್ಲದೆ ಎಫ್ಐಆರ್ ದಾಖಲು ಮಾಡಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನನ್ನ ಬೆನ್ನಿಗಿದೆ. ರಾಜ್ಯ ಸರ್ಕಾರದ ಸಾಧನೆ ಹಾಗೂ ಮೋದಿ ನಾಯಕತ್ವದ ಬೆಂಬಲದೊಂದಿಗೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ಬಡತನದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಚಿವ ಎಸ್.ಟಿ.ಸೋಮಶೇಖರ್
ಯಾರೋ ಮೂರು ಮಂದಿ ಕ್ಷೇತ್ರಕ್ಕೆ ಭೇಟಿ ನೀಡಿ ಅಬ್ಬರಿಸಿದರೆ ಜನರ ಬೆಂಬಲ ದೊರಕುವುದಿಲ್ಲ. ಫಲಿತಾಂಶ ಬದಲಾಗುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿನ ಉಸಿರುಗಟ್ಟುವ ವಾತಾವರಣದಿಂದಾಗಿ ಪಕ್ಷ ಬಿಡಬೇಕಾಯಿತು. ವೈಯಕ್ತಿಕ ಲಾಲಸೆಯಿಂದಲ್ಲ ಎಂದು ಪುನರುಚ್ಚರಿಸಿದರು.
