ನನ್ನ ಕ್ಷೇತ್ರದಲ್ಲಿ ಜೆಡಿಎಸ್ ಮತಗಳು 4 ಸಾವಿರ ಇತ್ತು. ನಾನು ಅವರಿಗೆ 8 ಸಾವಿರ ಮತಗಳ ಲೀಡ್ ಕೊಡಿಸಿದೆ. ಅದಾದ ಬಳಿಕ ಜೆಡಿಎಸ್ ಸೇರಿಕೊಂಡೆ. ನಾನು ಸಿಎಂ ಆಗಲು ಬಾಲಕೃಷ್ಣ ಕಾರಣ ಅಂತ ಕುಮಾರಸ್ವಾಮಿ ಅವರೇ ಸದನದಲ್ಲೂ ಹೇಳಿದ್ದಾರೆ: ಶಾಸಕ ಬಾಲಕೃಷ್ಣ

ರಾಮನಗರ(ಮಾ.21): ಕುಮಾರಸ್ವಾಮಿಯವರು ಚುನಾವಣೆಗೆ ಬರುವ ಮುಂಚೆಯೇ ನಾನು ಶಾಸಕನಾಗಿದ್ದೆ. ಬಿಜೆಪಿ ಶಾಸಕನಾಗಿದ್ದರೂ ಬಿಜೆಪಿಗೆ ಅನ್ಯಾಯ ಮಾಡಿ, ಅವರ ಸಂಸತ್ ಚುನಾವಣೆಯಲ್ಲಿ ಸಾಥ್ ಕೊಟ್ಟಿದ್ದೆ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ನಾನೇ ಸಾಕಿದ ಗಿಣಿ, ನನ್ನನ್ನೇ ಹದ್ದಾಗಿ ಕುಕ್ಕಿದೆ ಎಂಬ ಕುಮಾರಸ್ವಾಮಿಯ ಹೇಳಿಕೆಗೆ ಪ್ರತಿಕ್ರಿಯಿಸಿ, ನನ್ನ ಕ್ಷೇತ್ರದಲ್ಲಿ ಜೆಡಿಎಸ್ ಮತಗಳು 4 ಸಾವಿರ ಇತ್ತು. ನಾನು ಅವರಿಗೆ 8 ಸಾವಿರ ಮತಗಳ ಲೀಡ್ ಕೊಡಿಸಿದೆ. ಅದಾದ ಬಳಿಕ ಜೆಡಿಎಸ್ ಸೇರಿಕೊಂಡೆ. ನಾನು ಸಿಎಂ ಆಗಲು ಬಾಲಕೃಷ್ಣ ಕಾರಣ ಅಂತ ಅವರೇ ಸದನದಲ್ಲೂ ಹೇಳಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಡಾ.ಮಂಜುನಾಥ್ ಹರಕೆಯ ಕುರಿಯಾಗುತ್ತಿದ್ದಾರೆ: ಬಾಲಕೃಷ್ಣ

ಅವರು ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಆದಾಗ ಬಿಡಿಎ ಚೇರ್ಮನ್ ಮಾಡುತ್ತೇನೆ ಅಂದಿದ್ದರು, ಮಾಡಲಿಲ್ಲ. ಇದ್ದಕ್ಕಾಗಿ ನಾನು ಬೇಸರ ಮಾಡಿಕೊಂಡಿಲ್ಲ ಎಂದು ಕಿಡಿಕಾರಿದರು.