Asianet Suvarna News Asianet Suvarna News

ಜಾರಕಿಹೊಳಿ ಟೀಂ ಬೆಳಗಾವಿಗೆ ವಾಪಸ್ : ಸಫಲವಾಯ್ತಾ ಯತ್ನ..?

  • ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಕೆಲ ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಶಾಸಕ ರಮೇಶ್ ಜಾರಕಿಹೊಳಿ ಟೀಂ
  • ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೇ ಬೀಡುಬಿಟ್ಟಿದ್ದ ಶಾಸಕರ ಟೀಂ
Jarkiholi dream back to belagavi from delhi snr
Author
Bengaluru, First Published Aug 27, 2021, 8:26 AM IST

 ನವದೆಹಲಿ (ಆ.27): ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಕೆಲ ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಶಾಸಕ ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ್, ಮಹೇಶ್ ಕುಮಟಳ್ಳಿ ಗುರುವಾರ ಬೆಳಗಾವಿಗೆ ವಾಪಸಾಗಿದ್ದಾರೆ. 

ಮುಖ್ಯಮಂತ್ರಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಕುಮಟಳ್ಳಿ, ಶ್ರೀಮಂತ ಪಾಟಿಲ್  ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. 

ದೆಹಲಿಯಲ್ಲಿ ಬೀಡುಬಿಟ್ಟ ಜಾರಕಿಹೊಳಿ ಬ್ರದರ್ಸ್: ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡ

ಮುಖ್ಯಮಂತ್ರಿಗಳು ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಮುನ್ನವೇ ಅವರ ಜತೆಗೆ ತಮ್ಮ ಬೇಡಿಕೆಗೆ ಸಂಬಂಧಿಸಿ ಮಾತುಕತೆ ನಡೆಸಿದ್ದರು. ನಂತರ  ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರನ್ನು ಜಾರಕಿಹೊಳಿ ತಂಡ ಭೇಟಿಯಾಗಿದೆ ಎನ್ನಲಾಗಿದ್ದು ಇದು ಖಚಿತವಲ್ಲ. 

ಈ ಮಧ್ಯೆ ಬಾಲಚಂದ್ರ ಜಾರಕಿಹೊಳಿ ಅವರು ಹಾಲು ಉತ್ಪಾದನಾ ಸಂಘಕ್ಕೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ಇನ್ನೂ ದೆಹಲಿಯಲ್ಲೆ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. 

Follow Us:
Download App:
  • android
  • ios