Asianet Suvarna News Asianet Suvarna News

'ರಾಮಮಂದಿರಕ್ಕೆ 2500 ಕೋಟಿ ಸಂಗ್ರಹ, ಅದೇ ಒಂದು ಊರಿನಲ್ಲಿ ಕಟ್ಟೋಕೆ ನಮ್ಮಂಥವರ ಬಳಿ ಬರ್ತೀರಾ'

 ರಾಮಂದಿರ ದೇಣಿಗೆ ವಿಚಾರದಲ್ಲಿ ವಿವಾದಕ್ಕೀಡಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತೆ ಅಯೋಧ್ಯೆ ರಾಮಮಂದಿರದ ಬಗ್ಗೆ ಮಾತನಾಡಿದ್ದಾರೆ.

JDS Leader HD Kumaraswamy Talks about ayodhya ram mandir rbj
Author
Bengaluru, First Published Mar 14, 2021, 6:40 PM IST

ಮಂಡ್ಯ, (ಮಾ.14): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬರೋಬ್ಬರಿ 2,500 ಕೋಟಿ ದೇಣಿಗೆ ಸಂಗ್ರಹ ಆಗಿದೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್ ಮಾಹಿತಿ ಕೊಟ್ಟಿದೆ.

ಇನ್ನೂ ಈ ಬಗ್ಗೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಕೆ, ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟೋಕೆ 2,500 ಕೋಟಿ ರೂ. ದೇಣಿಗೆ ಸಂಗ್ರಹ ಆಗಿದೆ. ಅದೇ ಒಂದು ಊರಿನಲ್ಲಿ ದೇವಸ್ಥಾನ ಕಟ್ಟೋಕೆ ನಮ್ಮಂಥವರ ಬಳಿ ದೇಣಿಗೆಗೆ ಬರುತ್ತೀರಾ ಎಂದು ಹೇಳಿದರು.

ರಾಮನ ಹೆಸರಲ್ಲಿ ಪುಂಡ-ಪೋಕರಿಗಳಿಂದ ಹಣ ಸಂಗ್ರಹ: ಮತ್ತೆ ಸಿಡಿದ ಕುಮಾರಸ್ವಾಮಿ

ಈ ಹಿಂದೆ ಕುಮಾರಸ್ವಾಮಿ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುತ್ತಿರುವ ಸಂದರ್ಭದಲ್ಲಿ ಮನೆಗಳ ಗುರುತು ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿ ವಿವಾದ ಹುಟ್ಟುಹಾಕಿದ್ದರು. ಇದಕ್ಕೆ ಪರ-ವಿರೋಧದ ಚರ್ಚೆಗಳು ಆಗಿದ್ದವು. ಅಲ್ಲದೇ ಎಚ್‌.ಡಿ ಕುಮಾರಸ್ವಾಮಿ ಈ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿತ್ತು.

ರಾಮನ ಹೆಸರಲ್ಲಿ ಪುಂಡ-ಪೋಕರಿಗಳಿಂದ ಹಣ ಸಂಗ್ರಹ ಮಾಡುತ್ತಿದ್ದಾರೆ ಅವರಿಗೆ ಅನುಮತಿ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us:
Download App:
  • android
  • ios