ಬೇರೆ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ವಿಚಾರವಾಗಿ ಮಾತನಾಡುತ್ತಾ, ಇಲ್ಲಿ ಹದಿನೆಂಟು ಜನ ಜೆಡಿಎಸ್ ಶಾಸಕರು ಇದ್ದಾರೆ ಅಂದ್ರಲ್ಲಾ, ಒಬ್ಬರು ಬಂದಿರಲಿಲ್ಲ. ಆ ಸ್ನೇಹಿತ ನನ್ನ ಜೊತೆ ಶಾಂಗ್ರಿಲಾ ಹೋಟೆಲ್‌ನಲ್ಲಿ ಕಾಫಿ ಕುಡಿಯುತ್ತಿದ್ದರು. ದೀಪಾವಳಿ ಮುಗಿದ ಮೇಲೆ, ಸಂಕ್ರಾಂತಿ ಒಳಗೆ ಎಷ್ಟು ಜನ ಶಾಸಕರು ನಮ್ಮ ಪಕ್ಷಕ್ಕೆ ಬರ್ತಾರೆ ಅಂಥ ನೀವೆ ನೋಡಿ: ಕಾಂಗ್ರೆಸ್ ಶಾಸಕ ರವಿ ಗಣಿಗ

ಹಾಸನ(ನ.11): ಇತ್ತೀಚೆಗೆ ಹಾಸನದಲ್ಲಿ ರಾಜ್ಯದ ಎಲ್ಲಾ ಜೆಡಿಎಸ್ ಶಾಸಕರ ಸಭೆ ನಡೆದಿದ್ದು, ೧೮ ಜನ ಶಾಸಕರು ಮಾತ್ರ ಭಾಗಿಯಾಗಿದ್ದು, ಓರ್ವರು ನನ್ನ ಜೊತೆ ಕಾಫಿ ಕುಡಿಯುತ್ತಿದ್ದರು. ದೀಪಾವಳಿ ಮುಗಿದ ಮೇಲೆ, ಸಂಕ್ರಾಂತಿ ಒಳಗೆ ಎಷ್ಟು ಜನ ಶಾಸಕರು ನಮ್ಮ ಪಕ್ಷಕ್ಕೆ ಬರ್ತಾರೆ ಅಂಥ ನೀವು ಕಾದು ನೋಡಿ ಎಂದು ಹೇಳಿಕೆ ಕೊಡುವ ಮೂಲಕ ಮಂಡ್ಯ ತಾಲೂಕಿನ ಕಾಂಗ್ರೆಸ್ ಶಾಸಕ ರವಿ ಗಣಿಗ ಹೊಸ ರಾಜಕೀಯ ಬಾಂಬ್ ಸಿಡಿಸಿದರು.

Add Asianetnews Kannada as a Preferred SourcegooglePreferred

ಶನಿವಾರ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿ, ಬೇರೆ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ವಿಚಾರವಾಗಿ ಮಾತನಾಡುತ್ತಾ, ಇಲ್ಲಿ ಹದಿನೆಂಟು ಜನ ಜೆಡಿಎಸ್ ಶಾಸಕರು ಇದ್ದಾರೆ ಅಂದ್ರಲ್ಲಾ, ಒಬ್ಬರು ಬಂದಿರಲಿಲ್ಲ. ಆ ಸ್ನೇಹಿತ ನನ್ನ ಜೊತೆ ಶಾಂಗ್ರಿಲಾ ಹೋಟೆಲ್‌ನಲ್ಲಿ ಕಾಫಿ ಕುಡಿಯುತ್ತಿದ್ದರು. ದೀಪಾವಳಿ ಮುಗಿದ ಮೇಲೆ, ಸಂಕ್ರಾಂತಿ ಒಳಗೆ ಎಷ್ಟು ಜನ ಶಾಸಕರು ನಮ್ಮ ಪಕ್ಷಕ್ಕೆ ಬರ್ತಾರೆ ಅಂಥ ನೀವೆ ನೋಡಿ ಎಂದರು.

ಕಾಂಗ್ರೆಸ್‌ಗೆ ತನ್ನ ಶಾಸಕರನ್ನೇ ಸಮಾಧಾನ ಮಾಡಲಾಗುತ್ತಿಲ್ಲ: ಸಿ.ಟಿ.ರವಿ ವ್ಯಂಗ್ಯ

ರಾಜಕಾರಣದಲ್ಲಿ ಕಾಫಿ ಡಿನ್ನರ್‌ಗೆ ಬಹಳ ಮಹತ್ವವಿದೆ

ರಮೇಶ್ ಜಾರಕಿಹೊಳಿ ಬೆಳಗಾವಿ ಏರ್‌ಪೋರ್ಟ್‌ನಲ್ಲಿ ನಮ್ಮ ಶಾಸಕರನ್ನು ಕರೆದರು ಅಂತ ವಿಚಾರ ಎತ್ತಿದ್ದೆವು. ಬಾಬಾ ಸಾಹೇಬ್ ಪಾಟೀಲ್ ಸಿಕ್ಕಿದ್ದ ಮಾತನಾಡಿದೆ. ಕರೆದೆ ಅಂತ ಅವರೇ ಒಪ್ಪಿಕೊಂಡರು. ಇಲ್ಲಾ ಅಂದಿದ್ದರೆ ವಿಡಿಯೋ ಬಿಡ್ತಾ ಇದ್ವಿ. ಅವರು ಈ ಕೆಲಸ ಬಿಡಬೇಕು. ನಾವು ೧೩೬ ಜನ ಒಗ್ಗಟ್ಟಾಗಿರುವಾಗ ಬಿಜೆಪಿಯವರು ಬಲೆಗೆ ಬೀಳಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಬರ್ತಿನಿ ಅಂದ್ರೆ ಯಾಕೆ ಬೇಡ ಅನ್ನಬೇಕು. ಬೇಡ ಅನ್ನಲು ಆಗುತ್ತಾ! ನಮ್ಮ ಪಕ್ಷಕ್ಕೆ ಬರುವವರಿಗೆ ಸ್ವಾಗತ ಇದೆ. ಆದರೆ ನಾವು ಯಾರ ಮನೆಗೂ ಹೋಗಿ ಕರಿತಿಲ್ಲ, ಬರ್ತಿನಿ ಅಂತಿದ್ಧಾರೆ ನಾವು ಸ್ವಾಗತ ಮಾಡುತ್ತಿದ್ದೇವೆ ಅಷ್ಟೆ. ಬಿಜೆಪಿ-ಜೆಡಿಎಸ್‌ನಿಂದ ಶಾಸಕರು ಬರ್ತಾರೆ. ಅವರಲ್ಲಿ ಶರಣಗೌಡ ಕಂದಕೂರು ಕಾಂಗ್ರೆಸ್‌ಗೆ ಬನ್ನಿ ಅಂತ ಹೇಳಿಲ್ಲ. ಎಲ್ಲರೂ ಹಾಸನದಲ್ಲಿ ಇರಬೇಕಾದರೆ ಅವರು ನನ್ನ ಜೊತೆ ಕಾಫಿ ಕುಡಿಯುತ್ತಿದ್ದರು. ನಮ್ಮ ಪಕ್ಷಕ್ಕೆ ಬರ್ತರೆ ಅಂಥ ಹೇಳಲಿಲ್ಲ. ಕಾಫಿ ಕುಡಿಯುತ್ತಿದ್ದರು ಅಂತ ಹೇಳಿದೆ. ಅವರು ನನ್ನ ಗೆಳೆಯ, ರಾಜಕಾರಣದಲ್ಲಿ ಕಾಫಿ ಡಿನ್ನರ್‌ಗೆ ಬಹಳ ಮಹತ್ವವಿದೆ ಎಂದು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದರ ಬಗ್ಗೆ ಒಗಟಾಗಿ ಹೇಳಿದಂತಿತ್ತು.

ಈಗಾಗಲೇ ಹೈಕಮಾಂಡ್ ಅವರು ಏನು ಮಾತನಾಡಬಾರದು ಅಂತ ಹೇಳಿದ್ದಾರೆ. ಆದ್ದರಿಂದ ಆ ವಿಚಾರ ಅಲ್ಲಿಗೆ ಬಿಟ್ಟು ಇನ್ನೇನಿದ್ದರು ರಾಜ್ಯದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದೇವೆ. ಅದೆಲ್ಲ ಮುಗಿದ ಅಧ್ಯಾಯ, ೧೩೬ ಶಾಸಕರು ಸಿಎಂ, ಡಿಸಿಎಂ, ಪರಮೇಶ್ವರ್, ಸತೀಶ್ ಜಾರಕಿಹೊಳಿ, ಖರ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಜೊತೆ ಇದ್ದೇವೆ. ಯಾವ ಭಿನ್ನಮತ, ಗೊಂದಲ ಇಲ್ಲ, ಏನು ಇಲ್ಲ. ಹಾಸನಾಂಬೆ ಆಶೀರ್ವಾದದಿಂದ ಎಲ್ಲಾ ಚೆನ್ನಾಗಿದ್ದೇವೆ. ಡಿಕೆಶಿ ಅವರು ನೀರಾವರಿಯ ಸಚಿವರು, ಒಳ್ಳೆಯ ಮಳೆಯಾಗಲಿ ಅಂತ ಪ್ರಾರ್ಥನೆ ಮಾಡಿದ್ದೇನೆ. ಎಲ್ಲಾ ಬಿಜೆಪಿಯವರು ಹಬ್ಬಿಸುತ್ತಿದ್ದಾರೆ ಎಂದು ದೂರಿದರು. ವಿಜಯೇಂದ್ರ ಯುವಕರು, ಒಳ್ಳೆಯ ಯುವಕರನ್ನು ಆಯ್ಕೆ ಮಾಡಿದ್ದಾರೆ, ಅವರಿಗೆ ಒಳ್ಳೆಯದಾಗಲಿ. ಅವರ ನಾಯಕತ್ವದಲ್ಲಿ ಸದೃಢವಾಗಿ ಪಾರ್ಟಿ ಕಟ್ಟಲಿ. ಬಿಜೆಪಿ ೧೫೦ ಬಾಗಿಲಾಗಿದೆ, ಯಡಿಯೂರಪ್ಪ ಅವರ ಮೇಲೆ ಯತ್ನಾಳ್ ಗುಡುಗುತ್ತಿದ್ದರು. ೧೫೦ ಬಾಗಿಲು ಇರುವುದು ಒಗ್ಗಟ್ಟಾಗಲಿ ಎಂದು ಹೇಳಿದರು.