7 ಜೆಡಿಯು ಶಾಸಕರ ಪೈಕಿ 6 ಜನರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸಿಎಂ ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ಗೆ ಬಿಗ್ ಶಾಕ್ ಆಗಿದೆ.
ಪಾಟ್ನಾ, (ಡಿ.25): ಅರುಣಾಚಲ ಪ್ರದೇಶ ವಿಧಾನಸಭೆಯ 7 ಜೆಡಿಯು ಶಾಸಕರ ಪೈಕಿ 6 ಜನರು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಗೆ ಭಾರೀ ಮುಖಭಂಗವಾಗಿದೆ.
ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಜೆಡಿಯು ಸರ್ಕಾರ ರಚನೆ ಮಾಡಿದೆ. ಅರುಣಾಚಲದ ಈ ಬೆಳವಣಿಗೆ ಜೆಡಿಯುಗೆ ನುಂಗಲಾರದ ತುತ್ತಾಗಿದೆ.
ಬಿಹಾರದಲ್ಲಿ ಅಚ್ಚರಿಯ ಬೆಳವಣಿಗೆ, ನಿತೀಶ್ಗೆ ‘ಮಹಾಗಠಬಂಧನ’ ಆಫರ್!
60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದಾರೆ. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗುವುದಿಲ್ಲ. ಪೀಪಲ್ ಪಾರ್ಟಿ ಆಫ್ ಅರುಣಾಚಲ ಪಕ್ಷದ ಬೆಂಬಲವೂ ಸೇರಿ ಬಿಜೆಪಿ ಈಗ 48 ಸದಸ್ಯ ಬಲವನ್ನು ಹೊಂದಿದಂತಾಗಿದೆ.
ಹಯೇಂಗ್ ಮಂಗ್ಫಿ, ಜಿಕ್ಕೆ ತಕೊ, ಡೊಂಗ್ರು ಸಿಯೊಂಗ್ಜು, ತಲೇಮ್ ತಬೋಹ್, ಕಾಂಗ್ಗಾಂಗ್ ಟಕು ಮತ್ತು ಡೋರ್ಜಿ ವಾಂಗ್ಡಿ ಖರ್ಮಾ ಬಿಜೆಪಿ ಸೇರಿದ ಶಾಸಕರು. ಪಕ್ಷ ವಿರೋಧಿ ಕಾರ್ಯದಲ್ಲಿ ತೊಡಗಿದ ಆರೋಪದ ಮೇಲೆ ಮೂವರನ್ನು ಸಸ್ಪೆಂಡ್ ಮಾಡಲಾಗಿತ್ತು ಮತ್ತು ನೋಟಿಸ್ ಕೂಡ ನೀಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿ ಈ ಆರು ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಹೇಳಿದೆ.
ಅರುಣಾಚಲ ರಾಜಕೀಯ ಬೆಳವಣಿಗೆಯಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಅರುಣಾಚಲ ಪ್ರದೇಶದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಬಿಜೆಪಿ (41) ನಂತರ ಅತಿ ಹೆಚ್ಚು ಸ್ಥಾನ ಗಳಿಸಿದ ಹೆಗ್ಗಳಿಕೆ ಜೆಡಿಯುನದ್ದಾಗಿತ್ತು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 25, 2020, 8:21 PM IST