ಕಳೆದ ನಾಲ್ಕು ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ (ಎಸ್‌ಸಿಪಿ/ಟಿಎಸ್‌ಪಿ) ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ಧವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ದ್ರೋಹ ಬಗೆದಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರು (ಏ.22): ಕಳೆದ ನಾಲ್ಕು ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗೆ (ಎಸ್‌ಸಿಪಿ/ಟಿಎಸ್‌ಪಿ) ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ಧವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ (BJP Govt) ದಲಿತ ಸಮುದಾಯಕ್ಕೆ (Dalit Community) ದ್ರೋಹ ಬಗೆದಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಆರೋಪಿಸಿದ್ದಾರೆ. 2021-22ರ ರಾಜ್ಯ ಬಜೆಟ್‌ನಲ್ಲಿ ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯನ್ವಯ ಯೋಜನಾ ವೆಚ್ಚದ ಶೇಕಡಾ 24.1ರಷ್ಟು(26,695.64 ಕೋಟಿ ರು.) ಹಣವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕೆ ಮೀಸಲಿಡಲಾಗಿತ್ತು. 

Add Asianetnews Kannada as a Preferred SourcegooglePreferred

ಆದರೆ ರಾಜ್ಯ ಸರ್ಕಾರ ಕಾಯ್ದೆಯನ್ನು ಉಲ್ಲಂಘಿಸಿ ಒಟ್ಟು ಹಣದಲ್ಲಿ 7885.32 ಕೋಟಿ ರು.ಗಳನ್ನು ನೀರಾವರಿ, ನಗರಾಭಿವೃದ್ದಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮೂಲಸೌಕರ್ಯದ ಯೋಜನೆಗಳಿಗೆ ವ್ಯಯ ಮಾಡಿದೆ. ಇದು ಸಂಪೂರ್ಣವಾಗಿ ಕಾನೂನು ವಿರೋಧಿ ನಡೆಯಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ದ ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಸರ್ಕಾರ ಜಾರಿಗೆ ತಂದಿರುವ ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಯ ಪ್ರಕಾರ ಒಟ್ಟು ಬಜೆಟ್‌ನ ಶೇ.24.1ರಷ್ಟು ಭಾಗವನ್ನು ಎಸ್‌ಸಿ, ಎಸ್‌ಟಿ ಜನರ ಕಲ್ಯಾಣ ಕಾರ್ಯಕ್ರಮಗಳಿಗಷ್ಟೇ ಬಳಸಬೇಕು. 

ಆಣೆ ಮಾಡು ಎನ್ನೋಕೆ ಅವನು ಯಾವೂರ ದಾಸಯ್ಯ?: ಸಿದ್ದು ವಿರುದ್ಧ ಎಚ್‌ಡಿಕೆ ಕಿಡಿ

ಆ ವರ್ಷ ಉಳಿಕೆಯಾದರೆ ಅದನ್ನು ನಂತರದ ವರ್ಷ ಖರ್ಚು ಮಾಡಬೇಕು. ನಿಗದಿತ ಪ್ರಮಾಣದಲ್ಲಿ ನಿಗದಿತ ಉದ್ದೇಶಕ್ಕಾಗಿಯೇ ಖರ್ಚು ಮಾಡದೆ ಇದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೂಡಾ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. 2018ರಿಂದ 2021ರವರೆಗೆ 4 ವರ್ಷದಲ್ಲಿ ಈ ರೀತಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣದಲ್ಲಿ 7885.32 ಕೋಟಿ ರುಪಾಯಿಗಳನ್ನು ಮೂಲ ಸೌಕರ್ಯಗಳಿಗೆ ಬಳಸಿಕೊಂಡು ಎಸ್‌ಸಿ, ಎಸ್‌ಟಿ ಜನರು ನೇರ ಫಲಾನುಭವಿಗಳಾಗಿರುವ ಯೋಜನೆಗಳಿಗೆ ಹಣವನ್ನು ಕಡಿತಗೊಳಿಸಲಾಗಿದೆ ಎಂದಿದ್ದಾರೆ.

ಎಸ್‌ಸಿಪಿ/ಟಿಎಸ್‌ಪಿ ಹಣದ ಸ್ವಲ್ಪ ಭಾಗವನ್ನು ಸಾಮಾನ್ಯ ಮೂಲಸೌಕರ್ಯಗಳಿಗೆ ಬಳಸಲು ಕಾಯ್ದೆಯಲ್ಲಿ ಅವಕಾಶವಿದ್ದರೂ, ಇಷ್ಟೊಂದು ಪ್ರಮಾಣದ ಹಣವನ್ನು ಎಸ್‌ಸಿ,ಎಸ್‌ಟಿ ಸಮುದಾಯದವರು ನೇರ ಫಲಾನುಭವಿಗಳಲ್ಲದ ಯೋಜನೆಗಳಿಗೆ ಬಳಸುವುದು ಆ ಸಮುದಾಯಕ್ಕೆ ಬಗೆಯುವ ದ್ರೋಹ ಮಾತ್ರವಲ್ಲ, ಕಾನೂನಿನ ಉಲ್ಲಂಘನೆಯೂ ಹೌದು ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

2012-13ರಲ್ಲಿ ಎಸ್‌ಸಿ,ಎಸ್‌ಟಿಗೆ ಕೇವಲ 7,200 ಕೋಟಿ ರು.ಗಳನ್ನು ಮೀಸಲಿರಿಸಲಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ 2014-15ರ ವೇಳೆಗೆ 15834 ಕೋಟಿಗಳಿಗೆ ಏರಿಕೆಯಾಯಿತು. 2018ರ ಫೆಬ್ರವರಿಯಲ್ಲಿ ನಾನು ಬಜೆಟ್‌ ಮಂಡಿಸಿದಾಗ 29691.5 ಕೋಟಿಗಳನ್ನು ಈ ಯೋಜನೆಗೆ ಮೀಸಲಿರಿಸಿದ್ದೆ. ಆದರೆ ಕಳೆದ 3 ವರ್ಷಗಳಿಂದ ರಾಜ್ಯದ ಬಿಜೆಪಿ ಸರ್ಕಾರವು ಈ ವರ್ಗಗಳಿಗೆ ಖರ್ಚು ಮಾಡುವ ಅನುದಾನವನ್ನು ಒಂದೇ ಸಮನೆ ಕಡಿಮೆ ಮಾಡುತ್ತಿದೆ. ಬಜೆಟ್‌ ಗಾತ್ರ ಮಾತ್ರ ದೊಡ್ಡದಾಗುತ್ತಿದೆಯೇ ಹೊರತು, ಜನರ ಕಲ್ಯಾಣಕ್ಕಾಗಿ ಖರ್ಚು ಮಾಡುವ ಅನುದಾನ ಕಡಿಮೆಯಾಗುತ್ತಿದೆ ಎಂದು ಟೀಕಿಸಿದರು.

ನಿಮಗೆ ತಾಕತ್‌ ಇದ್ರೆ 40% ಸರ್ಕಾರದ ವಿರುದ್ಧ ತನಿಖೆ ಮಾಡಿಸಿ: ಆಧಾರ ರಹಿತವಾಗಿ ನನ್ನ ಸರ್ಕಾರವನ್ನು ಅಂದು ಪ್ರಧಾನಿ ನರೇಂದ್ರ ಮೋದಿ (Narendra Modi) 10% ಕಮಿಷನ್‌ ಸರ್ಕಾರ ಎಂದು ಟೀಕಿಸಿದ್ದರು. ಆದರೆ, ಈಗ ಈ ಬಿಜೆಪಿ ಸರ್ಕಾರ 40% ಕಮಿಷನ್‌ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘವೇ ಪ್ರಧಾನಿಗೆ 8 ತಿಂಗಳ ಹಿಂದೆ ಪತ್ರ ಬರೆದಿದೆ, ನಾನು ತಿನ್ನಲ್ಲ, ತಿನ್ನಲೂ ಬಿಡಲ್ಲ ಎನ್ನುವ ನಿಮಗೆ ತಾಕತ್‌ ಇದ್ದರೇ 40% ಸರ್ಕಾರದ ವಿರುದ್ಧ ತನಿಖೆ ಮಾಡಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದರು. 

Karnataka Politics: ಬಿಜೆಪಿ ಜತೆ ಸೇರಲ್ಲವೆಂದು ತಂದೆ ಮೇಲೆ ಎಚ್ಡಿಕೆ ಆಣೆ ಮಾಡಲಿ: ಸಿದ್ದು

ಈಶ್ವರಪ್ಪ (KS Eshwarappa) ಬಂಧನಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ (Protest) ಮಾತನಾಡಿದ ಅವರು, ಎಲ್ಲಾ ಏಜೆನ್ಸಿಗಳು ಅವರ ಬಳಿಯೇ ಇದೆಯಲ್ಲಾ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಕಿಡಿಕಾರಿದರು. ಸ್ವಪಕ್ಷದ ಕಾರ್ಯಕರ್ತನಿಂದ ಕಾಮಗಾರಿ ಮಾಡಿಸಿ ಬಳಿಕ 40% ಕಮಿಷನ್‌ಗಾಗಿ ಗುತ್ತಿಗೆದಾರನನ್ನು ಈಶ್ವರಪ್ಪ ಬಲಿ ಪಡೆದಿದ್ದಾರೆ. ಬಡವನ ಹಣಕ್ಕೆ ಕತ್ತರಿ ಹಾಕಿರುವ ಈಶ್ವರಪ್ಪ ಮನುಷ್ಯನಾ, ರಾಕ್ಷಸನಾ, ಆತನನ್ನು ಕೊಲೆಗಡುಕ ಅನ್ನದೇ ಏನನ್ನಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದರು.