ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಶಾಸಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದ್ಕಡೆ ವಿಪ್​, ಇನ್ನೊಂದ್ಕಡೆ ಅರೆಸ್ಟ್ ಭೀತಿಯಲ್ಲಿದ್ದಾರೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರು, [ಫೆ.05]:  ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಪರಿಸ್ಥಿತಿ ಉಗುಳಕ್ಕೂ ಆಗದ ನುಂಗಕ್ಕೂ ಆಗದ ಬಿಸಿ ತುಪ್ಪವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅದೇನೆಂದರೆ ಒಂದು ಕಡೆ ವಿಪ್. ಮತ್ತೊಂದು ಕಡೆ ಬಂಧನ ಭೀತಿ. ಹೌದು... ನಾಳೆಯಿಂದ [ಬುಧವಾರ] ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದೆ. 

ಈ ನಡುವೆ ಕುಮಾರಸ್ವಾಮಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಕಾಂಗ್ರೆಸ್​ ತನ್ನ ಶಾಸಕರಿಗೆ ಕಡ್ಡಾಯವಾಗಿ ಅಧಿವೇಶನ ಮುಗಿಯುವವರೆಗೂ ಹಾಜರಾಗುವಂತೆ ವಿಪ್​ ಜಾರಿ ಮಾಡಿದೆ. 

ಒಂದು ವೇಳೆ ಅಧಿವೇಶನಕ್ಕೆ ಗೈರಾದರೆ ಪಕ್ಷ ಕ್ರಮಕೈಗೊಳ್ಳುತ್ತದೆ ಎನ್ನುವ ಭಯ. ಮತ್ತೊಂದೆಡೆ ಅಧಿವೇಶನಕ್ಕೆ ಬಂದರೆ ಆನಂದ್​ ಸಿಂಗ್​ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧನವಾಗುವ ಭೀತಿ. 

ಇದ್ರಿಂದ ಸಂಕಷ್ಟದಲ್ಲಿ ಸಿಲುಕಿರುವ ಗಣೇಶ್​ಗೆ ಪರಿಸ್ಥಿತಿ ನುಂಗಲಾರದ ತುತ್ತಾಗಿದ್ದು, ಮುಂದಿನ ನಡೆ ಏನು ಅನ್ನೋದು ಮಾತ್ರ ಕುತೂಹಲ ಮೂಡಿಸಿದೆ. 

ಅಧಿವೇಶನಕ್ಕೆ ಬರಲಿಲ್ಲ ಅಂದ್ರೆ ಪಕ್ಷ ಗಣೇಶ್​ ವಿರುದ್ಧ ಕ್ರಮ ಕೈಗೊಳ್ಳಲಿದೆ. ಹೀಗಾಗಿ ನಾಳೆ ಏನು ಮಾಡಬೇಕು ಎಂದು ಗೊತ್ತಾಗದೇ ಜೆ.ಎನ್. ಗಣೇಶ್ ಇಕ್ಕಟ್ಟಿಗೆ ಸಿಲುಕಿದಂತೂ ಸತ್ಯ.