3 ನೇ ಸಲ 'ರಾರಾ'ಜಿಸಿದ ಮುನಿರತ್ನ, ಶಿರಾದಲ್ಲಿ ಅರಳಿದ ಕಮಲ: ಕೇಸರಿ ಪಾಳಯದಲ್ಲಿ ಖುಷಿ!
ಪ್ರತಿಷ್ಠೆಯ ಕಣವಾಗಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನಿರೀಕ್ಷೆಗೂ ಮೀರಿ ಜಯಗಳಿಸಿದೆ.
ಬೆಂಗಳೂರು (ನ. 11): ಪ್ರತಿಷ್ಠೆಯ ಕಣವಾಗಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನಿರೀಕ್ಷೆಗೂ ಮೀರಿ ಜಯಗಳಿಸಿದೆ.
ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದರೆ, ದಶಕದ ನಂತರ ಆರ್ಆರ್ ನಗರ ಕ್ಷೇತ್ರವನ್ನು ಎರಡನೇ ಬಾರಿಗೆ ತೆಕ್ಕೆಗೆ ತೆಗೆದುಕೊಂಡಿದೆ. ಈ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ.
ಆರ್ಆರ್ ನಗರದಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿದೆ. ಹಾಗಾದರೆ ಜೆಡಿಎಸ್ ಎಡವಿದ್ದೆಲ್ಲಿ? ರಾಜಕೀಯ ವಿಶ್ಲೇಷಣೆ ನೋಡೋಣ.