ಈ ಕಾಂಗ್ರೆಸ್ ಶಾಸಕಗೆ ಸಚಿವ ಸ್ಥಾನ : ಜಮೀರ್ ಅಹ್ಮದ್
ಶೀಘ್ರದಲ್ಲೇ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಈ ವೇಳೆ ಕಾಂಗ್ರೆಸ್ ನ ಈ ಶಾಸಕಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
ಹಾವೇರಿ : ಡಿ.3ರಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಶಾಸಕ ಬಿ.ಸಿ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ನಾನೂ ಮನವಿ ಮಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಅವರು ನನಗಿಂತ ಒಂದು ವರ್ಷ ಮೊದಲು ಶಾಸಕರಾಗಿದ್ದಾರೆ.
ಈ ನಿಟ್ಟಿನಲ್ಲಿ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ವೈಯಕ್ತಿಕವಾಗಿ ನಾನೂ ಮನವಿ ಮಾಡಿದ್ದೇನೆ ಎಂದರು.