ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಂಭ್ರಮದ ನಡುವೆಯೇ, ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಭದ್ರತಾ ಕಾರಣಗಳಿಂದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಬೆಂಗಳೂರು (ಜೂ.3): ರಾಜ್ಯ ರಾಜಕೀಯದಲ್ಲಿಂದು ಹಬ್ಬದ ವಾತಾವರಣವಿದೆ. ಲೋಕಭವನದ ಗಾಜಿನಮನೆಯಲ್ಲಿಂದು ಮುಖ್ಯಮಂತ್ರಿ ಪದಗ್ರಹಣ ನಡೆಯಲಿದೆ ರಾಜ್ಯ 24ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಅಪಾರ ಬೆಂಬಲಿಗರೊಂದಿಗೆ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಸಮಾರಂಭಕ್ಕೆ ದೆಹಲಿಯಿಂದ ಗಣ್ಯರ ದಂಡೇ ಆಗಮಿಸುತ್ತಿದೆ. ಇತ್ತ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಬೆಂಬಲಿಗರು ನಗರಕ್ಕೆ ಆಗಮಿಸಿದ್ದಾರೆ. ಈ ನಡುವೆ ಹೊಸ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡವರು ಖುಷಿಯಲ್ಲಿದ್ದರೆ, ಸಚಿವ ಸ್ಥಾನದ ಭರವಸೆಯಲ್ಲಿದ್ದ ಕೆಲವು ನಾಯಕರಿಗೆ ಕೈತಪ್ಪಿರುವ ಹಿನ್ನೆಲೆ ಬೆಂಬಲಿಗರು ಅಸಮಾಧಾನ ಆಕ್ರೋಶ ತೀವ್ರಗೊಳ್ಳುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೈತಪ್ಪಿದ ಸಚಿವ ಸ್ಥಾನ ಕಾಶೆಪ್ಪನವರ್ ಬೆಂಬಲಿಗರಿಂದ ಪ್ರತಿಭಟನೆ:

ಶಾಸಕ ವಿಜಯಾನಂದ ಕಾಶಪ್ಪನವರ್ ಈ ಬಾರಿ ಹೊಸ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ಭರವಸೆಯಲ್ಲಿದ್ದರು. ಬೆಂಬಲಿಗರು ಕೂಡ ಅದೇ ನೀರಿಕ್ಷೆಯಲ್ಲಿದ್ದರು ಆದರೆ ಲೆಕ್ಕಾಚಾರ ಉಲ್ಟಾ ಆಗಿದೆ ಶಾಸಕ ವಿಜಯಾನಂದ ಕಾಶೆಪ್ಪನವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಅಸಮಾಧಾನ ವ್ಯಕ್ತವಾಗಿ ಬೆಂಬಲಿಗರು ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಲೋಕಭವನ ರಸ್ತೆಯಲ್ಲೇ ಕಾರ್ಯಕರ್ತರ ಪ್ರತಿಭಟನೆ

ಪ್ರಮಾಣ ವಚನಕ್ಕೆ ಇನ್ನು ಕೆಲವೇ ಗಂಟೆಗಳಿರುವ ಬೆನ್ನಲ್ಲೇ ಪೊಲೀಸರು ಹೈಅಲರ್ಟ್ ಆಗಿ ಸುತ್ತಮುತ್ತ ಯಾವುದೇ ಪ್ರತಿಭಟನೆ, ಮೆರವಣಿಗೆಗಳು ನಡೆಯದಂತೆ ಕಟ್ಟುನಿಟ್ಟಿನ ನಿರ್ಬಂಧಿಸಿದ್ದಾರೆ. ಈ ನಡುವೆ ರಾಜಭವನದ ರಸ್ತೆಯಲ್ಲೇ ಕಾಶೆಪ್ಪನವರ್ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಸಚಿವ ಸ್ಥಾನ ನೀಡಲೇಬೇಕೆಂದು, ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಲಾರಂಭಿಸಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಮುನ್ನವೇ ಭದ್ರತಾ ದೃಷ್ಟಿಯಿಂದ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ತೆರವುಗೊಳಿಸಿದರು.

ಲೋಕಭವನದ ಬಳಿ ಪ್ರತಿಭಟನೆ ಮೆರವಣಿಗೆ ಅವಕಾಶವಿಲ್ಲ:

ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ ಅಥವಾ ಅಹಿತಕರ ಘಟನೆ ನಡೆಯದಂತೆ ಲೋಕಭವನದ ಸುತ್ತಮುತ್ತ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆ ನಡೆಸುತ್ತೆದ್ದ ಕಾಶೆಪ್ಪನವರ ಬೆಂಬಲಿಗರನ್ನ ಲೋಕಭವನದ ಸಮೀಪದಿಂದ ದೂರ ಕಳುಹಿಸಿದರು.

ಸದ್ಯ ಪ್ರಮಾಣ ವಚನಕ್ಕೆ ಮುನ್ನ ಡಿಕೆ ಶಿವಕುಮಾರ್ ಅವರು ಯಡಿಯೂರಪ್ಪ, ದೇವೇಗೌಡ, ಸಿದ್ದರಾಮಯ್ಯ ಸೇರಿದಂತೆ ಪ್ರತಿಯೊಬ್ಬ ಹಿರಿಯ ನಾಯಕರ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ಅಹ್ವಿಸುತ್ತಿದ್ದಾರೆ.