ಉಭಯ ಪಕ್ಷಗಳ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಎಚ್ಡಿ ಕುಮಾರಸ್ವಾಮಿ ಇಂದು ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ್ದ ವೇಳೆ ಆಕಸ್ಮಿಕವಾಗಿ ಪರಸ್ಪರ ಮುಖಾಮುಖಿಯಾದ ಸಂದರ್ಭ ಎದುರಾಯ್ತು. ಆದರೆ ಈ ವೇಳೆ ಪರಸ್ಪರ ಮುಖವನ್ನೇ ನೋಡದೇ ಮುಂದೆ ಸಾಗಿದ ಘಟನೆಗೆ ಸಾಕ್ಷಿಯಾಯಿತು.

ಬೆಂಗಳೂರು (ಜೂ.3) ಉಭಯ ಪಕ್ಷಗಳ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಎಚ್ಡಿ ಕುಮಾರಸ್ವಾಮಿ ಇಂದು ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ್ದ ವೇಳೆ ಆಕಸ್ಮಿಕವಾಗಿ ಪರಸ್ಪರ ಮುಖಾಮುಖಿಯಾದ ಸಂದರ್ಭ ಎದುರಾಯ್ತು. ಆದರೆ ಈ ವೇಳೆ ಪರಸ್ಪರ ಮುಖವನ್ನೇ ನೋಡದೇ ಮುಂದೆ ಸಾಗಿದ ಘಟನೆಗೆ ಸಾಕ್ಷಿಯಾಯಿತು.

Add Asianetnews Kannada as a Preferred SourcegooglePreferred

ಇಂದು ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ. ಮುಂದೆ ಎಚ್‌ಸಿ ಮಹದೇವಪ್ಪ ಹಿಂದೆ ಸಿದ್ದರಾಮಯ್ಯ ನಡೆದುಕೊಂಡು ಚುನಾವಣಾಧಿಕಾರಿಗೆ ಆಗಮಿಸಿ ಚುನಾವಣಾ ಕಾರ್ಯದರ್ಶಿ ಕಚೇರಿ ಮುಂಭಾಗದಲ್ಲಿ ಬಂದು ನಿಲ್ಲೋದಕ್ಕೂ, ಅತ್ತ ಚುನಾವಣಾಧಿಕಾರಿ ಕಚೇರಿಯಿಂದ ಎಚ್‌ಡಿ ಕುಮಾರಸ್ವಾಮಿ ಹೊರಬಂದಿದ್ದರಿಂದ ಎದುರುಬದರಾದರು. ಈ ವೇಳೆ ಸಿದ್ದರಾಮಯ್ಯ, ಎಚ್‌ಡಿ ಕುಮಾರಸ್ವಾಮಿ ಪರಸ್ಪರ ಮುಖ ಕೂಡ ನೋಡಿಕೊಳ್ಳಲಿಲ್ಲ. ಎಚ್‌ಡಿ ಕುಮಾರಸ್ವಾಮಿ ಸಿಎಂ ಮುಖ ಕೂಡ ನೋಡದೇ ಇತರರಿಗೆ ನಮಸ್ಕರಿಸಿ ಮುಂದೆ ಸಾಗಿದರು. ಈ ವೇಳೆ ಎಚ್‌ಡಿ ಕುಮಾರಸ್ವಾಮಿಯವರ ಹಿಂದಿದ್ದ ಜಿಟಿ ದೇವೇಗೌಡ ಸಿಎಂಗೆ ನಮಸ್ಕರಿಸಿ ತಬ್ಬಿಕೊಂಡು ಕುಶಲೋಪರಿ ವಿಚಾರಿಸಿದರು.ಕೆಲ ಜೆಡಿಎಸ್ ಶಾಸಕರು ಸಿಎಂ ಕಾಲಿಗೆ ಮುಟ್ಟಿ ನಮಸ್ಕಾರಿಸಿ ಆಶೀರ್ವಾದ ಪಡೆದರು.

ಶಿಕ್ಷಣ ಕ್ಷೇತ್ರಕ್ಕೆ ಏನಾದ್ರೂ ಕೊಡುಗೆ ನೀಡಿದ್ರೆ ಅದು ಕುಮಾರಸ್ವಾಮಿ ಮಾತ್ರ: ಎಚ್‌ಡಿ ರೇವಣ್ಣ

ಅದೇ ರೀತಿ ಡಿಕೆ ಶಿವಕುಮಾರ ಎಚ್‌ಡಿ ಕುಮಾರಸ್ವಾಮಿ ವಿಧಾನಸಭೆ ಕಾರ್ಯದರ್ಶಿ ಕಚೇರಿಯ ಹೊರಗಡೆ ಕಾರಿಡಾರ್‌ನಲ್ಲಿ ಮುಖಾಮುಖಿಯಾದರೂ ಪರಸ್ಪರ ಮುಖವನ್ನೂ ನೋಡದೇ ನಡೆದರು. ಈ ಹಿಂದೆ ರಾಜಕೀಯವಾಗಿ ಎಷ್ಟೇ ಬೈದಾಡಿಕೊಂಡರು ಪರಸ್ಪರ ಎದುರುಬದರಾದಾಗ ಉಭಯ ಕುಶಲೋಪರಿ ನಡೆಯುತ್ತಿತ್ತು. ಆದರೆ ಪ್ರಜ್ವಲ್ ರೇವಣ್ಣ ಘಟನೆ ಬಳಿಕ ಹೆಚ್ಡಿ ಕುಟುಂಬಕ್ಕೆ ಸಂಕಷ್ಟ ತಂದೊಡ್ಡಿರುವುದು ಪರಸ್ಪರ ದ್ವೇಷ, ವೈಮನಸು ಉಭಯ ನಾಯಕರಲ್ಲಿ ಎದ್ದು ಕಾಣುವಂತಿತ್ತು.