'ಕಟೀಲ್ ಪಕ್ಷದ ಕಚೇರಿಗೆ ಭೇಟಿ ಕೊಡುವುದಕ್ಕಿಂತ ಮಂಗಳೂರಿನ ಗೆಳತಿಯರ ಹಿಂದೆ ಅಲೆಯುವುದೇ ಹೆಚ್ಚು'
* ಕಾಂಗ್ರೆಸ್-ಬಿಜೆಪಿ ನಡುವೆ ಟ್ವಿಟ್ಟರ್ ವಾರ್
* ಬಿಜೆಪಿಯ ಟ್ವೀಟ್ಗೆ ಪ್ರತ್ಯುತ್ತರ ನೀಡಿ ಟ್ವೀಟ್ ಮಾಡಿರುವ ಕಾಂಗ್ರೆಸ್
* ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು
![Karnataka Congress Hits back at BJP President Nalin Kumar Kateel rbj Karnataka Congress Hits back at BJP President Nalin Kumar Kateel rbj](https://static-ai.asianetnews.com/images/01er6g7c0qmwnqszjnjt1g1cxh/untitled--9--jpg-710x400xt-jpg-710x400xt-jpg_363x203xt.jpg)
ಬೆಂಗಳೂರು, (ಅ.17): ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ (By Election) ಕಾವು ದಿನದಿದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
ಪ್ರಚಾರದ ಮಧ್ಯೆ ಮೂರು ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಬಿಜೆಪಿ(BJP) ಹಾಗೂ ಕಾಂಗ್ರೆಸ್9Congress) ನಡುವೆ ಟ್ವಿಟ್ಟರ್ (Twitter) ವಾರ್ ಶುರುವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಪಕ್ಷದ ಕಚೇರಿಗೆ ಭೇಟಿ ಕೊಡುವುದಕ್ಕಿಂತ ಮಂಗಳೂರಿನ ಗೆಳತಿಯರ ಹಿಂದೆ ಅಲೆಯುವುದೇ ಹೆಚ್ಚು ಎಂದು ಆ ಬಾಗದ ಗುಸುಗುಸು, ನಿಜವೇ ಬಿಜೆಪಿ? ಎಂದು ಕಾಂಗ್ರೆಸ್ ಪ್ರತ್ನಿಸಿದೆ.
ಸಿದ್ದರಾಮಯ್ಯ ವರ್ಸಸ್ ಬಿಜೆಪಿ ನಡುವೆ ಟ್ವೀಟ್ ವಾರ್
ಸಲೀಂ, ಉಗ್ರಪ್ಪ ನಡುವಿನ ವೈರಲ್ ಸಂಭಾಷಣೆಯನ್ನು ಮುಂದಿಟ್ಟು ಡಿಕೆ ಶಿವಕುಮಾರ್ (DK Shivakumar) ಅವರ ವಿರುದ್ಧ ಟ್ವೀಟ್ ಮಾಡಿದ್ದ ಬಿಜೆಪಿ, ಕೆಪಿಸಿಸಿ ರಾಜ್ಯಾಧ್ಯಕ್ಷರು ಈಗ ಭ್ರಷ್ಟಾಧ್ಯಕ್ಷ ಎಂದೇ ಕುಖ್ಯಾತರಾಗಿದ್ದಾರೆ. ಅಕ್ರಮ ಸಂಪಾದನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಯಾತ್ರೆ ಮುಗಿಸಿ ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಪಕ್ಷದ ಕಚೇರಿಗೆ ಭೇಟಿ ನೀಡುವುದಕ್ಕಿಂತ ಡಿಕೆ ಶಿವಕುಮಾರ್ ಅವರು ಹೆಚ್ಚಾಗಿ ಕೋರ್ಟಿಗೆ ಅಲೆದಾಡುತ್ತಿದ್ದಾರೆ ಎಂದು ಟೀಕೆ ಮಾಡಿ ಟ್ವೀಟ್ ಮಾಡಿತ್ತು.
ಇದಕ್ಕೆ ಬಿಜೆಪಿಯ ಟ್ವೀಟ್ಗೆ ಪ್ರತ್ಯುತ್ತರ ನೀಡಿ ಟ್ವೀಟ್ ಮಾಡಿರುವ ಕಾಂಗ್ರೆಸ್, ತಮ್ಮದೇ ಪಕ್ಷದ ಬಿಎಸ್ ಯಡಯೂರಪ್ಪ ಅವರನ್ನು ಮತ್ತೊಮ್ಮೆ ಜೈಲಿಗೆ ಕಳಿಸಲು ಐಟಿ ಬಲೆ ಹೆಣೆದಿರುವ ಬಿಜೆಪಿ ಕರ್ನಾಟಕ ವಿಪಕ್ಷದವರನ್ನು ಸಿಲುಕಿಸಲು ಯತ್ನಿಸುವುದು ವಿಶೇಷವೇನಲ್ಲ ಬಿಡಿ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಕಚೇರಿಗೆ ಭೇಟಿ ಕೊಡುವುದಕ್ಕಿಂತ ಮಂಗಳೂರಿನ ಗೆಳತಿಯರ ಹಿಂದೆ ಅಲೆಯುವುದೇ ಹೆಚ್ಚು ಎಂದು ಆ ಬಾಗದ ಗುಸುಗುಸು, ನಿಜವೇ ಬಿಜೆಪಿ? ಎಂದು ಕಾಂಗ್ರೆಸ್ ಪ್ರತ್ನಿಸಿದೆ.