Asianet Suvarna News Asianet Suvarna News

ನಾಯಕತ್ವ ಬದಲಾವಣೆ: ಸೋನಿಯಾಗೆ ಪತ್ರ ಬರೆದ ಗುಂಪಿನಲ್ಲಿ ಕರ್ನಾಟಕ ನಾಯಕ

ಎಐಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ಕೆಲ ನಾಯಕರು ಪತ್ರ ಬರೆದಿದ್ದು, ಇದು ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಸಿದೆ. ಈ ಪತ್ರ ಬರೆದ ಗುಂಪಿನ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಇದ್ದಾರೆ.

Karnataka Congress leader Veerappa Moily defends over his letter on Sonia Gandhi
Author
Bengaluru, First Published Aug 25, 2020, 2:34 PM IST

ಬೆಂಗಳೂರು, (ಆ.25): ಕಾಂಗ್ರೆಸ್ ನಾಯಕಕತ್ವ ಬದಲಾವಣೆ ವಿಚಾರವಾಗಿ ಪತ್ರ ಬರೆದ 23 ನಾಯಕರಲ್ಲಿ ಕರ್ನಾಟಕದ ವೀರಪ್ಪ ಮೊಯ್ಲಿ ಕೂಡ ಒಬ್ಬರಿದ್ದಾರೆ.

ಹೌದು...23 ಕಾಂಗ್ರೆಸ್ ನ ಹಿರಿಯ ‌ನಾಯಕರು  ಪುನರ್ ಪಕ್ಷ ಸಂಘಟನೆ ಬಗ್ಗೆ ನೇರವಾಗಿ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಇದೀಗ ಸ್ವತಃ ಮಾಜಿ ಕೇಂದ್ರ ಸಚಿವ ವಿರಪ್ಪ   ಮೊಯ್ಲಿ ಅವರೇ ಹೇಳಿಕೊಂಡಿದ್ದಾರೆ. ಆದ್ರೆ, ರಾಹುಲ್ ಗಾಂದಿ ಅವರ ಮಾತಿನಿಂದ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ಗೆ ಹೊಸ ನಾಯಕತ್ವ ಹೈಡ್ರಾಮಕ್ಕೆ ತೆರೆ: ಅಂತಿಮವಾಗಿ CWC ಸಭೆಯಲ್ಲಿ ಮಹತ್ವದ ತೀರ್ಮಾನ

ಇಂದು (ಮಂಗಳವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ (ಸೋಮವಾರ) ಕಾರ್ಯಕಾರಣಿ ಸಭೆಯಲ್ಲಿ 23 ಕಾಂಗ್ರೆಸ್ ನ ಹಿರಿಯ ‌ನಾಯಕರು ಕಾಂಗ್ರೆಸ್ ನ ಪುನರ್ ಸಂಘಟನೆ ಬಗ್ಗೆ ನೇರವಾಗಿ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದೆವು. ಅದರಲ್ಲಿ ನಾನು ಕೂಡ ಸಹಿ ಹಾಕಿದ್ದೆ. ನಾವು ಸಹಿ ಹಾಕಿದ ಪತ್ರದಲ್ಲಿ ನಾವು ನಾಯಕತ್ವ ಪ್ರಶ್ನೆ ಮಾಡಿಲ್ಲ. ನಾವು ನೇರವಾಗಿ ಸೋನಿಯಾ ಗಾಂಧಿ ಅವರಿಗೆ ಮಾತ್ರ ಒಂದು ಪ್ರತಿ ಪತ್ರ ಕೊಟ್ಟಿದ್ದೇವೆ. ಆದರೆ ಈ ಪತ್ರ ಲೀಕ್ ಮಾಡಿದವರು ಯಾರು? ಈ ಪತ್ರ ಲೀಕ್ ಮಾಡಿದ ಬಗ್ಗೆ ತನಿಖೆ ನಡೆಸಬೇಕು. ಯಾರು ಲೀಕ್ ಮಾಡಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 ನಾನು ಸಾಯುವವರೆಗೂ ಕಾಂಗ್ರೆಸ್ ನಲ್ಲೇ ಇರುತ್ತೇನೆ. ಬಿಜೆಪಿಯ ಪ್ರಶ್ನೆಯೇ ಇಲ್ಲ. ನಾನು ಕಾಂಗ್ರೆಸ್ ಗೆ ನಿಷ್ಠನಾಗಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲೇ ಸಾಯೋವರೆಗೂ ಇರುತ್ತೇವೆ. ನರೇಂದ್ರ ಮೋದಿಯವರಿಗೆ ಕನಸು ಮನಸಿನಲ್ಲೂ ಬೆಂಬಲ ಕೊಟ್ಟಿಲ್ಲ. ನಾವು ಕೇವಲ ಪಕ್ಷದ ಹಿತದೃಷ್ಟಿಯಿಂದ ಪತ್ರ ಬರೆದಿದ್ದೆವು ಎಂದು ಭಾವುಕರಾಗಿ ಹೇಳಿದರು.

23 ನಾಯಕರ ಪತ್ರ, ರಾಹುಲ್ ಗಾಂಧಿ ಅಸಮಾಧಾನ!

ಇಂದಿರಾ ಕಾಂಗ್ರೆಸ್ ಹಾಗೂ ಅರಸು ಕಾಂಗ್ರೆಸ್ ಅಂತ ಇಬ್ಬಾಗ ಆದಾಗಲೂ ಸಹ ಈಗ ಯಾರು ಕಾಂಗ್ರೆಸ್ ಗೆ ವಿಧೇಯರು ಅಂತ ಹೇಳಿಕೊಳ್ಳುತ್ತಿದ್ದಾರೋ ಅವರೆಲ್ಲ ಅರಸು ಜೊತೆ ಹೋಗಿದ್ದರು. ಆದರೆ ನಾವೆಲ್ಲ ಇಂದಿರಾ ಗಾಂಧಿಯವರ ಜೊತೆಯೇ ನಿಂತೆವು. ಕಾಂಗ್ರೆಸ್ ನ ತತ್ವ ಸಿದ್ಧಾಂತಗಳ ನಂಬಿ ಪಕ್ಷದಲ್ಲಿದ್ದೇವೆ. 2024ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲೇಬೇಕು ಎಂದರು.

ಈಗ ಪುನರ್ ಸಂಘಟನೆಗೆ ಒಂದು ಕಮಿಟಿ ಮಾಡಲಾಗಿದ್ದು, ಅದನ್ನು ಸ್ವಾಗತಿಸುತ್ತೇವೆ. ಸೋನಿಯಾ ಗಾಂಧಿಯವರ ಮುಂದುವರಿಕೆ ಸ್ವಾಗತಿಸುತ್ತೇವೆ. ರಾಹುಲ್ ಗಾಂಧಿಯವರು ಮೊದಲು ನಾವು ಬಿಜೆಪಿ ಕೈಜೋಡಿಸಿದ್ದೇವೆ ಎಂದರು ಎಂದು ವರದಿ ಬಂತು. ನಂತರ ಹಾಗೆ ಹೇಳಿಲ್ಲ ಅಂತ ಅವರು ಹೇಳಿದರು. ಹೀಗಾಗಿ ಆ ಚರ್ಚೆಯನ್ನು ಈಗ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾವು ಪತ್ರದಲ್ಲಿ ಎಲ್ಲೂ ಕೂಡ ನಾಯಕತ್ವದ ಬಗ್ಗೆ ಪ್ರಶ್ನೆ ಮಾಡಿಲ್ಲ. ವಾಸ್ತವವಾಗಿ ಪತ್ರದಲ್ಲಿಎರಡು ಮೂರು ಪ್ಯಾರಗಳಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ನಾಯಕತ್ವ ಪ್ರಶಂಸೆ ಮಾಡಿದ್ದೇವೆ. ಪಕ್ಷದಲ್ಲಿ ಬೇರು ಮಟ್ಟದಿಂದ ಸಂಪೂರ್ಣವಾಗಿ ಸಂಘಟನೆಯಲ್ಲಿ ಬದಲಾವಣೆ ಆಗಬೇಕು. ಪಕ್ಷದ ಸಾಂಸ್ಥಿಕ ಚುನಾವಣೆಗಳು ನಡೆಯಬೇಕು ಎನ್ನುವುದು ಪತ್ರದ ಸಾರಾಂಶವಾಗಿತ್ತು ಎಂದು ತಿಳಿಸಿದರು.

Follow Us:
Download App:
  • android
  • ios