ನೋಡಿಪಾ.. ಅದೇನೋ ಹೇಳ್ತಾರಲ್ಲ ದಿನಾ ಸಾಯೋರಿಗೆ ಅಳೋರ್ಯಾರು ಅಂತಾ. ಇವರದೆಲ್ಲ ದಿನಾ ಗೋಳು ಇದ್ದಿದ್ದೆ ಎಂದು ಮುಡಾ, ವಾಲ್ಮೀಕಿ ಹಗರಣ ವಿಚಾರಕ್ಕೆ ಪ್ರತಿಪಕ್ಷಗಳ ಆರೋಪಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಲೇವಡಿ ಮಾಡಿದರು.

ಬೆಂಗಳೂರು ಆ.8): ನೋಡಿಪಾ.. ಅದೇನೋ ಹೇಳ್ತಾರಲ್ಲ ದಿನಾ ಸಾಯೋರಿಗೆ ಅಳೋರ್ಯಾರು ಅಂತಾ. ಇವರದೆಲ್ಲ ದಿನಾ ಗೋಳು ಇದ್ದಿದ್ದೆ ಎಂದು ಮುಡಾ, ವಾಲ್ಮೀಕಿ ಹಗರಣ ವಿಚಾರಕ್ಕೆ ಪ್ರತಿಪಕ್ಷಗಳ ಆರೋಪಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಲೇವಡಿ ಮಾಡಿದರು.

Add Asianetnews Kannada as a Preferred SourcegooglePreferred

ನಾವು ಇವರ ವಿರುದ್ಧ ಹೋರಾಟ ಮಾಡಿಕೊಂಡೇ ಈ ಸ್ಥಾನಕ್ಕೆ ಬಂದಿದ್ದೇವೆ. ಹಾಗಂತ ಇಲ್ಲಿಗೆ ನಿಲ್ಲಿಸೋದಿಲ್ಲ. ಮುಂದೆಯೂ ಹೋರಾಟ ಮಾಡುತ್ತೇವೆ. ದೇವೇಗೌಡರ ಕುಟುಂಬದ ದಾಖಲೆ ಬಿಚ್ಚಿಡುವ ಕೆಲಸ ಮಾಡಲೇಬೇಕಾಗುತ್ತದೆ. ಇದಕ್ಕೆಲ್ಲ ಒಳ್ಳೆಯ ಟೈಮ್, ಮುಹೂರ್ತ ಬೇಕು. ಶುಭ ವಾರ, ಶುಭ ನಕ್ಷತ್ರ ನೋಡಬೇಕಾಗುತ್ತೆ. ನಾವು ಈಗಾಗಲೇ ಅವರಿಗೆ ಹೇಳಿದ್ದೇವೆ. ನಮ್ಮದೇನಿದೆ ಅನ್ನೋದು ಮೊದಲು ಬಿಚ್ಚಿ, ಅನಂತರ ನಿಮ್ಮದು ಬಿಚ್ಚುತ್ತೇವೆ ಅಂತಾ. ನಾನು ಈ ಹಿಂದೆಯೇ ಎರಡು ಬಾರಿ ಬಹಿರಂಗ ಚರ್ಚೆಗೆ ಕರೆದಿದ್ದೇನೆ ಅವರು ಬರಲಿಲ್ಲ. ಈಗ ಅವರಣ್ಣ ರೇವಣ್ಣ ಇದ್ದಾರೆ ಅವರನ್ನೇ ಕಳಿಸಲಿ. ಟಿವಿಯಲ್ಲಿ ಬೇಡ, ಅಧಿವೇಶನದಲ್ಲಿ ಚರ್ಚೆ ಮಾಡೋಣ. ಈ ವಿಚಾರ ಮುಂದಿನ ಜನರೇಷನ್‌ಗೆ ಕೂಡ ಗೊತ್ತಾಗಬೇಕು ಎಂದು ಸವಾಲು ಹಾಕಿದರು.

ಎನ್‌ಡಿಎ ಸರ್ಕಾರಕ್ಕೆ ಅಲ್ಪಸಂಖ್ಯಾತರ ಮೇಲೆ ಕೋಪ ಇದೆ: ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಿಎಂ ಕಿಡಿ