ಮುಖ್ಯಮಂತ್ರಿಗಳ ಧರ್ಮಪತ್ನಿ ಪಾರ್ವತಿ ಅವರು ಎಂದೂ ಅಧಿಕಾರ ದುರ್ಬಳಕೆ ಮಾಡಿಕೊಂಡವರಲ್ಲ. ಮುಖ್ಯಮಂತ್ರಿ ಪತ್ನಿಯಾಗಿದ್ದರೂ ದೇವಾಲಯಕ್ಕೆ ಹೋದರೆ ಸರದಿ ಸಾಲಿನಲ್ಲಿ ನಿಂತವರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರು (ಆ.10) : ಮುಖ್ಯಮಂತ್ರಿಗಳ ಧರ್ಮಪತ್ನಿ ಪಾರ್ವತಿ ಅವರು ಎಂದೂ ಅಧಿಕಾರ ದುರ್ಬಳಕೆ ಮಾಡಿಕೊಂಡವರಲ್ಲ. ಮುಖ್ಯಮಂತ್ರಿ ಪತ್ನಿಯಾಗಿದ್ದರೂ ದೇವಾಲಯಕ್ಕೆ ಹೋದರೆ ಸರದಿ ಸಾಲಿನಲ್ಲಿ ನಿಂತವರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Add Asianetnews Kannada as a Preferred SourcegooglePreferred

ನಮ್ಮಲ್ಲಿನ ಅನೇಕ ಸಚಿವರೇ ಅವರ ಮುಖ ನೋಡಿಲ್ಲ. ಸಿದ್ದರಾಮಯ್ಯ(Siddaramaiah) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದಾಗಲೂ ಅವರು ಕಾಣಿಸಿಕೊಳ್ಳಲಿಲ್ಲ. ಅಂತಹ ಹೆಣ್ಣಿನ ಬಗ್ಗೆ ಅಧಿಕಾರ ದುರುಪಯೋಗದ ಆರೋಪ ಮಾಡುತ್ತೀರಲ್ಲಾ? ನಿಮ್ಮ ಈ ಪಾಪವನ್ನು ಮುಖ್ಯಮಂತ್ರಿಗಳು ಹಾಗೂ ಪಾರ್ವತಿ ಅವರು ಕ್ಷಮಿಸಿದರೂ ಬೆಟ್ಟದ ಮೇಲಿರುವ ತಾಯಿ ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸಿದ್ದು ವರ್ಷನ್‌-2 ಅಂದ್ರೆ ಬನಾನಾ ರಿಪಬ್ಲಿಕ್‌! - ಅರವಿಂದ್ ಬೆಲ್ಲದ್ ವಿಶೇಷ ಅಂಕಣ