Asianet Suvarna News Asianet Suvarna News

ಅಧಿವೇಶನಕ್ಕೂ ಮುನ್ನವೇ ಕರ್ನಾಟಕ ಉಪಮುಖ್ಯಮಂತ್ರಿಗೆ ಕೊರೋನಾ ದೃಢ..!

ಅಧಿವೇಶ ಆರಂಭಕ್ಕೂ ಮುನ್ನವೇ ಜನಪ್ರತಿನಿಧಿಗಳಗೆ ಕೊರೋನಾ ಶಾಕ್ ಕೊಡುತ್ತುದೆ. ಇದೀಗ ಉಪಮುಖ್ಯಮಂತ್ರಿಗೂ ಕೊರೋನಾ ಪಾಸಿಟಿವ್ .

Karnataka DyCM Ashwath Narayan tests Covid-19 positive rbj
Author
Bengaluru, First Published Sep 19, 2020, 3:43 PM IST

ಬೆಂಗಳೂರು, (ಸೆ.19): ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬೆನ್ನಲ್ಲೇ ಇದೀಗ ಉಪ ಮುಖ್ಯಮಂತ್ರಿ ಡಾ. ಸಿ.ಎನ್​. ಅಶ್ವಥ್ ನಾರಾಯಣ್​ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. 

ಸೆ.16ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೊರೋನಾ ಸೋಂಕು ತುಗುಲಿದ್ದು, ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದೀಗ ಡಿಸಿಎಂ ಅಶ್ವಥ್ ನಾರಾಯಣ್‌ಗೂ ಕೋವಿಡ್​ ಪಾಸಿಟಿವ್​ ಬಂದಿದೆ. ಈ ಬಗ್ಗೆ ಸ್ವತಃ ಅಶ್ವಥ್​ ನಾರಾಯಣ್​ ಅವರೇ ಟ್ವಿಟರ್​ನಲ್ಲಿ ಬಹಿರಂಗಪಡಿಸಿದ್ದಾರೆ.

ಮೊದಲ ದಿನವೇ ಅಧಿವೇಶನಕ್ಕೆ ಕೊರೋನಾ ಶಾಕ್: ಅನಂತ್ ಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಸೋಂಕು 

ಸೋಮವಾರದಿಂದ ವಿಧಾನಸಭೆಯ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಕರೊನಾ ಪಾಸಿಟಿವ್​ ಬಂದಿದೆ. ಆದರೆ, ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆರೋಗ್ಯವಾಗಿದ್ದೆ. ವರದಿ ಪಾಸಿಟಿವ್​ ಇರುವ ಕಾರಣ ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ’ ಎಂದು ಡಿಸಿಎಂ ತಿಳಿಸಿದ್ದಾರೆ. ಅಲ್ಲದೆ ‘ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ಇದೇ ಸೆಪ್ಟೆಂಬರ್ 21ರಂದು ಅಧಿವೇಶನ ಆರಂಭವಾಗುತ್ತಿದೆ. ಆದ್ಎ, ಅಧಿವೇಶ ಆರಂಭಕ್ಕೂ ಮುನ್ನವೇ ಕೋವಿಡ್​ ಸೋಂಕಿಕ ಜನಪ್ರತಿನಿಧಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಬಾರಿಯ ಅಧಿವೇಶನದಲ್ಲಿ ಬಹುತೇಕರು ಭಾಗವಹಿಸುವುದು ಅನುಮಾನವಾಗಿದೆ.

Follow Us:
Download App:
  • android
  • ios