Asianet Suvarna News Asianet Suvarna News

ಚುನಾವಣೆ ಘೋಷಣೆ ನಂತರ ಕಾಂಗ್ರೆಸ್‌ 2ನೇ ಪಟ್ಟಿ: 100 ಕ್ಷೇತ್ರಗಳ ಟಿಕೆಟ್‌ಗೆ ಇದೆ ಭಾರಿ ಪೈಪೋಟಿ

ಬಂಡಾಯ ಹಾಗೂ ಗೊಂದಲಕ್ಕೆ ಆಸ್ಪದ ನೀಡದಂತೆ ಮೊದಲ ಪಟ್ಟಿಯನ್ನು ಯಶಸ್ವಿಯಾಗಿ ಬಿಡುಗಡೆ ಮಾಡಿರುವ ಕಾಂಗ್ರೆಸ್‌ ಪಕ್ಷ ತನ್ನ ಎರಡನೇ ಪಟ್ಟಿಯನ್ನು ಬೇಗ ಬಿಡುಗಡೆ ಮಾಡುವ ಮನಸ್ಥಿತಿಯಲ್ಲಿ ಇಲ್ಲ.

Karnataka Election 2023 Congress 2nd list after election announcement gvd
Author
First Published Mar 26, 2023, 9:07 AM IST

ಬೆಂಗಳೂರು (ಮಾ.26): ಬಂಡಾಯ ಹಾಗೂ ಗೊಂದಲಕ್ಕೆ ಆಸ್ಪದ ನೀಡದಂತೆ ಮೊದಲ ಪಟ್ಟಿಯನ್ನು ಯಶಸ್ವಿಯಾಗಿ ಬಿಡುಗಡೆ ಮಾಡಿರುವ ಕಾಂಗ್ರೆಸ್‌ ಪಕ್ಷ ತನ್ನ ಎರಡನೇ ಪಟ್ಟಿಯನ್ನು ಬೇಗ ಬಿಡುಗಡೆ ಮಾಡುವ ಮನಸ್ಥಿತಿಯಲ್ಲಿ ಇಲ್ಲ. ಎರಡನೇ ಪಟ್ಟಿಯೇನಿದ್ದರೂ ಚುನಾವಣಾ ವೇಳಾಪಟ್ಟಿ ಬಿಡುಗಡೆಯಾದ ನಂತರವೇ ಬಹಿರಂಗವಾಗಲಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಟಿಕೆಟ್‌ ಪ್ರಕಟಿಸಿರುವ ಕಾಂಗ್ರೆಸ್‌ ತೀವ್ರ ಪೈಪೋಟಿ ಹಾಗೂ ಗೊಂದಲವಿರುವ 100 ಕ್ಷೇತ್ರಗಳಿಗೆ ಎರಡನೇ ಹಾಗೂ ಮೂರನೇ ಪಟ್ಟಿಯಲ್ಲಿ ಪ್ರಕಟಿಸುವ ಉದ್ದೇಶ ಹೊಂದಿದೆ. ದೆಹಲಿಯಲ್ಲಿ ಇತ್ತೀಚೆಗೆ ನಡೆದಿದ್ದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಹಾಲಿ ಬಿಡುಗಡೆಯಾದ 124 ಕ್ಷೇತ್ರಗಳೂ ಸೇರಿದಂತೆ ಒಟ್ಟು 180 ಕ್ಷೇತ್ರಗಳಿಗೆ ಒಂಟಿ ಹೆಸರನ್ನು ಅಖೈರುಗೊಳಿಸಿಕೊಂಡಿದೆ. 

ಆದರೆ, ಎಲ್ಲಾ ಒಂಟಿ ಹೆಸರಿರುವ ಕ್ಷೇತ್ರಗಳ ಪಟ್ಟಿ ಪ್ರಕಟಿಸಿದರೆ ಕೆಲವೆಡೆ ಬಂಡಾಯ ಉಂಟಾಗಬಹುದು ಎಂಬ ಕಾರಣಕ್ಕೆ 124 ಕ್ಷೇತ್ರಗಳನ್ನು ಮಾತ್ರ ಮೊದಲು ಪ್ರಕಟಿಸಿದೆ. ಉಳಿದ ಕ್ಷೇತ್ರಗಳ ಪಟ್ಟಿಪ್ರಕಟಿಸುವ ಮುನ್ನ ಮತ್ತೊಂದು ಹಂತದ ಸ್ಕ್ರೀನಿಂಗ್‌ ಕಮಿಟಿ ಸಭೆ ನಡೆಸಬೇಕಿದೆ. ಮೂಲಗಳ ಪ್ರಕಾರ ಚುನಾವಣಾ ವೇಳಾಪಟ್ಟಿಬಿಡುಗಡೆಯಾದ ನಂತರವೇ ಈ ಸ್ಕ್ರೀನಿಂಗ್‌ ಕಮಿಟಿ ಸಭೆ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧರಿಸಿದೆ. ವೇಳಾಪಟ್ಟಿಬಿಡುಗಡೆಯಾದ ನಂತರ ಬೆಂಗಳೂರಿನಲ್ಲಿ ಸ್ಕ್ರೀನಿಂಗ್‌ ಕಮಿಟಿ ಸಭೆ ನಡೆಸಿ ಉಳಿದ ಕ್ಷೇತ್ರಗಳ ಹೆಸರು ಅಖೈರುಗೊಳಿಸಿಕೊಂಡು ಅನಂತವರೇ ಕೇಂದ್ರೀಯ ಚುನಾವಣಾ ಸಮಿತಿ ಸಭೆಗೆ ಆಗಮಿಸುವಂತೆ ರಾಜ್ಯ ನಾಯಕತ್ವಕ್ಕೆ ಸೂಚನೆ ನೀಡಿದೆ ಎಂದು ಮೂಲಗಳು ಹೇಳಿವೆ.

ರೋಹಿಣಿ ಸಿಂಧೂರಿ ಕೇಸ್‌: ಡಿ.ರೂಪಾಗೆ ಮ್ಯಾಜಿಸ್ಪ್ರೇಟ್‌ ಕೋರ್ಟ್‌ ಸಮನ್ಸ್‌

124 ಅಭ್ಯರ್ಥಿಗಳಲ್ಲಿ ಕೇವಲ 6 ಮಹಿಳೆಯರು: ಕಾಂಗ್ರೆಸ್‌ ಪಕ್ಷ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ಮಹಿಳೆಯರಿಗೆ ಹೆಚ್ಚು ಮನ್ನಣೆ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. 124 ಮಂದಿಯ ಪಟ್ಟಿಯಲ್ಲಿ ಶೇ.5ಕ್ಕಿಂತ ಕಡಿಮೆ ಪ್ರಮಾಣದ ಟಿಕೆಟ್‌ಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಅಂದರೆ ಕೇವಲ ಆರು ಕ್ಷೇತ್ರಗಳಲ್ಲಿ ಮಾತ್ರ ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ‘ತನ್ಮೂಲಕ ಶೇ.4.83 ರಷ್ಟುಸ್ಥಾನಗಳನ್ನು ಮಾತ್ರ ಮಹಿಳೆಯರಿಗೆ ನೀಡಲಾಗಿದೆ. ಮಹಿಳೆಯರು ಶೇ.33 ರಷ್ಟು ಮೀಸಲಾತಿಗೆ ಬೇಡಿಕೆ ಇಡುತ್ತಿರುವಾಗ ಈ ಪ್ರಮಾಣ ತುಂಬಾ ಕಡಿಮೆ’ ಎಂಬ ಮಾತುಗಳು ಕೇಳಿ ಬರುತ್ತಿವೆ.

6 ಮಂದಿಯ ಪೈಕಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಲಕ್ಷ್ಮೇ ಹೆಬ್ಬಾಳ್ಕರ್‌, ಖಾನಾಪುರ ಕ್ಷೇತ್ರದಿಂದ ಡಾ. ಅಂಜಲಿ ನಿಂಬಾಳ್ಕರ್‌, ಜಯನಗರ ಕ್ಷೇತ್ರದಿಂದ ಸೌಮ್ಯಾರೆಡ್ಡಿ, ಕೆಜಿಎಫ್‌ ಕ್ಷೇತ್ರದಿಂದ ರೂಪಕಲಾ ಶಶಿಧರ್‌, ಕಲಬುರಗಿ ಉತ್ತರ ಕ್ಷೇತ್ರದಿಂದ ಖನೀಜ್‌ ಫಾತಿಮಾ ಅವರಿಗೆ ಟಿಕೆಟ್‌ ನೀಡಲಾಗಿದೆ. ಈ ಐದು ಮಂದಿಯೂ ಹಾಲಿ ಶಾಸಕರೂ ಹೌದು. ಇನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಕುಸುಮಾ ಹನುಮಂತರಾಯಪ್ಪ ಅವರಿಗೆ ರಾಜರಾಜೇಶ್ವರಿನಗರ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ತನ್ಮೂಲಕ ಆರು ಮಂದಿ ಮಹಿಳೆಯರಿಗೆ ಟಿಕೆಟ್‌ ನೀಡಿದಂತಾಗಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಕ್ಷಣ ಬಿಬಿಎಂಪಿ ಚುನಾವಣೆ: ಸಿದ್ದರಾಮಯ್ಯ

ಕಾಂಗ್ರೆಸ್‌ ಮೊದಲ ಪಟ್ಟಿ ರಿಲೀಸ್‌: 124 ವಿಧಾನಸಭಾ ಕ್ಷೇತ್ರಗಳ ಲಿಸ್ಟ್‌ ಹೀಗಿದೆ ನೋಡಿ..
ಚಿಕ್ಕೋಡಿ - ಗಣೇಶ್ ಹುಕ್ಕೇರಿ
ಕಾಗವಾಡ - ಭೀಮಗಗೌಡ ಕಾಗೆ
ಕುಡಚಿ - ಮಹೇಂದ್ರ ಕೆ
ಹುಕ್ಕೇರಿ - ಎ.ಬಿ.ಪಾಟೀಲ್
ಯಮಕನಮಡಿ - ಸತೀಶ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ - ಲಕ್ಷ್ಮಿ ಹೆಬ್ಬಾಳ್ಕರ್
ದೇವನಹಳ್ಳಿ - ಕೆ.ಎಚ್.ಮುನಿಯಪ್ಪ
ಖಾನಾಪು - ಅಂಜಲಿ ನಿಂಬಾಳ್ಕರ್
ಬೈಲಹೊಂಗಲ - ಮಹಾಂತೇಶ್ ಕೌಜಲಗಿ
ರಾಮದುರ್ಗ - ಅಶೋಕ್ ಪಟ್ಟಣ್
ಜಮಖಂಡಿ - ಆನಂದ್ ನ್ಯಾಮಗೌಡ
ಹುನಗುಂದ - ವಿಜಯಾನಂದ ಕಾಶಪ್ಪನವರ್
ಮುದ್ದೇಬಿಹಾಳ - ಅಪ್ಪಾಜಿ ನಾಡಗೌಡ
ಬಸವನ ಬಾಗೇವಾಡಿ - ಶಿವಾನಂದ ಪಾಟೀಲ್
ಬಬಲೇಶ್ವರ್ - ಎಂ.ಬಿ.ಪಾಟೀಲ್
ಇಂಡಿ - ಯಶವಂತರಾಯ ಗೌಡ ಪಾಟೀಲ್
ಜೇವರ್ಗಿ - ಅಜಯ್ ಸಿಂಗ್
ಸುರಪುರ - ರಾಜಾವೆಂಕಟಪ್ಪ ನಾಯಕ
ಶಹಪುರ_ಶರಣಬಸಪ್ಪ ಗೌಡ
ಚಿತ್ತಾಪುರ - ಪ್ರಿಯಾಂಕ್ ಖರ್ಗೆ
ಸೇಡಂ - ಶರಣಪ್ರಕಾಶ್ ಪಾಟೀಲ್
ಚಿಂಚೋಳಿ - ಸುಭಾಷ್ ರಾಠೋಡ್
ಕಲಬುರಗಿ ಉತ್ತರ - ಕನಿಜ ಫಾತಿಮಾ
ಆಳಂದ - ಬಿ.ಎಆರ್.ಪಾಟೀಲ್
ಹುಮ್ನಾಬಾದ್ - ರಾಜಶೇಖರ್ ಪಾಟೀಲ್
ಬೀದರ್ ದಕ್ಷಿಣ - ಅಶೋಕ್ ಖೇಣಿ
ಬೀದರ್ - ರಹೀಂ ಖಾನ್
ಬಾಲ್ಕಿ - ಈಶ್ವರ್ ಖಂಡ್ರೆ
ರಾಯಚೂರು ಗ್ರಾಮೀಣ - ಬಸನಗೌಡ ದದ್ದಲ್
ಮಸ್ಕಿ - ಬಸನಗೌಡ ತುರ್ವಿಹಾಳ
ಕುಷ್ಟಗಿ - ಅಮರೇಗೌಡ ಬಯ್ಯಾಪುರ
ಕನಕಗಿರಿ - ಶಿವರಾಜ್ ತಂಗಡಗಿ
ಯಲಬುರ್ಗಾ - ಬಸವರಾಜ ರಾಯರೆಡ್ಡಿ
ಕೊಪ್ಪಳ - ರಾಘವೇಂದ್ರ ಹಿಟ್ನಾಳ್
ಗದಗ - ಎಚ್.ಕೆ.ಪಾಟೀಲ್
ರೋಣ - ಜಿ.ಎಸ್.ಪಾಟೀಲ್
ಹುಬ್ಬಳ್ಳಿ-ಧಾರವಾಡ (ಪೂರ್ವ) - ಪ್ರಸಾದ್ ಅಬ್ಬಯ್ಯ
ಹಳಿಯಾಳ- ಆರ್.ವಿ.ದೇಶಪಾಂಡೆ
ಕಾರವಾರ - ಸತೀಶ್ ಸೈಲ್
ಭಟ್ಕಳ - ಮಂಕಾಳ ವೈದ್ಯ
ಹಾನಗಲ್ - ಶ್ರೀನಿವಾಸ್ ಮಾನೆ
ಹಾವೇರಿ - ರುದ್ರಪ್ಪ ಲಮಾಣಿ
ಬ್ಯಾಡಗಿ - ಬಸವರಾಜ ಶಿವಣ್ಣನವರ್
ಹಿರೆಕೇರೂರು - ಯು.ಬಿ.ಬಣಕಾರ್
ರಾಣೆಬೆನ್ನೂರು - ಪ್ರಕಾಶ್ ಕೋಳಿವಾಡ
ಹೂವಿನ ಹಡಗಲಿ - ಪರಮೇಶ್ವರ್ ನಾಯ್ಕ್
ಹಗರಿಬೊಮ್ಮನಹಳ್ಳಿ - ಭೀಮಾನಾಯ್ಕ್
ವಿಜಯನಗರ - ಎಚ್.ಆರ್.ಗವಿಯಪ್ಪ
ಕಂಪ್ಲಿ - ಗಣೇಶ್
ಬಳ್ಳಾರಿ ಗ್ರಾಮೀಣ - ನಾಗೇಂದ್ರ
ಸಂಡೂರು - ತುಕಾರಾಂ
ಚಳ್ಳಕೆರೆ - ರಘುಮೂರ್ತಿ
ಹಿರಿಯೂರು - ಡಿ.ಸುಧಾಕರ್
ಹೊಸದುರ್ಗ - ಗೋವಿಂದಪ್ಪ
ದಾವಣಗೆರೆ ಉತ್ತರ- ಎಸ್.ಎಸ್ ಮಲ್ಲಿಕಾರ್ಜುನ್
ದಾವಣಗೆರೆ ದಕ್ಷಿಣ - ಶಾಮನೂರು ಶಿವಶಂಕರಪ್ಪ
ಮಾಯಕೊಂಡ - ಕೆ.ಎಸ್.ಬಸವರಾಜ್
ಭದ್ರಾವತಿ - ಸಂಗಮೇಶ್ವರ್
ಸೊರಬ - ಮಧು ಬಂಗಾರಪ್ಪ
ಸಾಗರ - ಬೇಳೂರು ಗೋಪಾಲಕೃಷ್ಣ
ಬೈಂದೂರು - ಗೋಪಾಲ್ ಪೂಜಾರಿ
ಕುಂದಾಪುರ - ದಿನೇಶ್ ಹೆಗಡೆ
ಕಾಪು - ವಿನಯ್ ಕುಮಾರ್ ಸೊರಕೆ
ಶೃಂಗೇರಿ - ಟಿಡಿ ರಾಜೇಗೌಡ
ಚಿಕ್ಕನಾಯಕನಹಳ್ಳಿ - ಕಿರಣ್ ಕುಮಾರ್
ತಿಪಟೂರು - ಷಡಕ್ಷರಿ
ತುರುವೆಕೆರೆ - ಬೆಮೆಲ್ ಕಾಂತರಾಜ್
ಕುಣಿಗಲ್ - ರಂಗನಾಥ್
ಕೊರಟಗೆರೆ - ಪರಮೇಶ್ವರ್
ಶಿರಾ - ಟಿಬಿ ಜಯಚಂದ್ರ
ಪಾವಗಡ - ಎಚ್ವಿ ವೆಂಕಟೇಶ್
ಮಧುಗಿರಿ - ಕೆಎನ್ ರಾಜಣ್ಣ
ಗೌರಿಬಿದನೂರು ಶಿವಶಂಕರ ರೆಡ್ಡಿ
ಬಾಗೇಪಲ್ಲಿ - ಎಸ್.ಎನ್.ಸುಬ್ಬಾರೆಡ್ಡಿ
ಚಿಂತಾಮಣಿ - ಎಂಸಿ ಸುಧಾಕರ್
ಶ್ರೀನಿವಾಸಪುರ - ರಮೇಶ್ ಕುಮಾರ್
ಕೆಜಿಎಫ್ - ರೂಪಾ ಶಶೀಧರ್
ಬಂಗಾರಪೇಟೆ - ನಾರಾಯಣಸ್ವಾಮಿ
ಮಾಲೂರು - ನಂಜೇಗೌಡ
ಬ್ಯಾಟರಾಯನಪುರ - ಕೃಷ್ಣಭೈರೇಗೌಡ
ಆರ್.ಆರ್.ನಗರ - ಕುಸುಮಾ
ಮಲ್ಲೇಶ್ವರಂ - ಅನೂಪ್ ಅಯ್ಯಂಗಾರ್
ಹೆಬ್ಬಾಳ - ಭೈರತಿ ಸುರೇಶ್
ಸರ್ವಜ್ಞನಗರ - ಕೆಜೆ ಜಾರ್ಜ್
ಶಿವಾಜಿನಗರ - ರಿಜ್ವಾನ್ ಅರ್ಷದ್
ಶಾಂತಿನಗರ - ಎನ್.ಎಹ್ಯಾರಿಸ್
ಗಾಂಧಿನಗರ - ದಿನೇಶ್ ಗುಂಡೂರಾವ್
ರಾಜಾಜಿನಗರ - ಪುಟ್ಟಣ್ಣ
ಗೋವಿಂದರಾಜನಗರ - ಪ್ರಿಯಾಕೃಷ್ಣ
ವಿಜಯನಗರ - ಎಂ.ಕೃಷ್ಣಪ್ಪ
ಚಾಮರಾಜಪೇಟೆ - ಜಮೀರ್ ಅಹ್ಮದ್ ಖಾನ್
ಬಸವನಗುಡಿ - ಯುಬಿ ವೆಂಕಟೇಶ್
ಬಿಟಿಎಂ ಲೇಔಟ್ - ರಾಮಲಿಂಗಾರೆಡ್ಡಿ
ಜಯನಗರ - ಸೌಮ್ಯಾ ರೆಡ್ಡಿ
ಮಹದೇವಪುರ - ನಾಗೇಶ್
ಆನೇಕಲ್ - ಶಿವಣ್ಣ
ಹೊಸಕೋಟೆ - ಶರತ್ ಬಚ್ಚೇಗೌಡ
ದೇವನಹಳ್ಳಿ - ಕೆ.ಎಚ್.ಮುನಿಯಪ್ಪ
ದೊಡ್ಡಬಳ್ಳಾಪುರ - ವೆಂಕಟರಾಮಯ್ಯ
ನೆಲಮಂಗಲ - ಶ್ರೀನಿವಾಸ್ ಎನ್
ಮಾಗಡಿ - ಬಾಲಕೃಷ್ಣ
ರಾಮನಗರ - ಇಕ್ಬಾಲ್ ಹುಸೇನ್
ಕನಕಪುರ - ಡಿಕೆ ಶಿವಕುಮಾರ್
ಮಳವಳ್ಳಿ - ನರೇಂದ್ರ ಸ್ವಾಮಿ
ಶ್ರೀರಂಗಪಟ್ಟಣ - ರಮೇಶ್ ಬಂಡಿಸಿದ್ದೇಗೌಡ
ನಾಗಮಂಗಲ - ಚಲುವರಾಯಸ್ವಾಮಿ
ಹೊಳೆನರಸೀಪುರ - ಶ್ರೇಯಸ್ ಪಟೇಲ್
ಸಕಲೇಶಪುರ - ಮುರಳಿ ಮೋಹನ್
ಬೆಳ್ತಂಗಡಿ - ರಕ್ಷಿತ್ ಶಿವರಾಮ್
ಮೂಡಬಿದ್ರೆ - ಮಿಥುನ್ ರೈ
ಮಂಗಳೂರು - ಯುಟಿ ಖಾದರ್
ಬಂಟ್ವಾಳ - ರಮಾನಾಥ್ ರೈ
ಸುಳ್ಯ - ಕೃಷ್ಣಪ್ಪ ಜಿ
ವಿರಾಜಪೇಟೆ - ಪೊನ್ನಣ್ಣ
ಪಿರಿಯಾಪಟ್ಟಣ - ಕೆ.ವೆಂಕಟೇಶ್
ಕೆ.ಆರ್.ನಗರ - ಡಿ.ರವಿಶಂಕರ್
ಹುಣಸೂರು - ಎಚ್.ಪಿ.ಮಂಜುನಾಥ್
ಎಚ್.ಡಿ.ಕೋಟೆ - ಅನಿಲ್ ಚಿಕ್ಕಮಾದು
ನಂಜನಗೂರು -ದರ್ಶನ್ ಧ್ರುವನಾರಾಯಣ
ನರಸಿಂಹರಾಜ - ತನ್ವೀರ್ ಸೇಠ್
ವರುಣಾ - ಸಿದ್ದರಾಮಯ್ಯ
ಟಿ.ನರಸಿಪುರ - ಎಚ್.ಸಿ.ಮಹದೇವಪ್ಪ
ಹನೂರು - ನರೇಂದ್ರ
ಚಾಮರಾಜನಗರ - ಪುಟ್ಟರಂಗಶೆಟ್ಟಿ
ಗುಂಡ್ಲುಪೇಟೆ - ಗಣೇಶ್ ಪ್ರಸಾದ್

Follow Us:
Download App:
  • android
  • ios