ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹುಬ್ಬಳ್ಳಿ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರದಲ್ಲಿ 18 ಸಾವಿರ ಮತಗಳ ಹಿನ್ನಡೆಯಾಗಿದೆ.

ಹುಬ್ಬಳ್ಳಿ (ಮೇ 13): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್‌ ಕ್ಷೇತ್ರವಾಗಿದ್ದ ಹುಬ್ಬಳ್ಳಿ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್ ಆರಂಭದಿಂದಲೂ ತೀವರ ಹಿನ್ನಡೆ ಸಾಧಿಸಿದ್ದಾರೆ. ಬೆಳಗ್ಗೆ 11 ಗಂಟೆಯ ವೇಳೆಗೆ ನಡೆದ 42 ಸಾವಿರ ಮತಗಳ ಎಣಿಕೆಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಭಾರಿ ಹಿನ್ನಡೆಯಾಗಿದೆ. 

ಆರಂಭಿಕ 38000 ಮತಗಳನ್ನು ಎಣಿಸಿದ ನಂತರ ಚುನಾವಣಾ ಆಯೋಗದ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಕರ್ನಾಟಕದ ಮಾಜಿ ಸಿಎಂ ಮತ್ತು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ತಮ್ಮ ಭದ್ರಕೋಟೆಯಲ್ಲಿ ಹಿಂದುಳಿದಿದ್ದಾರೆ. ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದದಲ್ಲಿ ಜಗದೀಶ್ ಶೆಟ್ಟರ್‌ 21,152 ಮತಗಳನ್ನು ಗಳಿಸಿದರೆ, ಬಿಜೆಪಿಯ ಮಹೇಶ್ ಟೆಂಗಿನಕಾಯಿ-39,816 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿಯ ಮಹೇಶ್‌ ಟೆಂಗಿನಕಾಯಿ 18,664 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಹೀಗಾಗಿ, ಜಗದೀಶ್ ಶೆಟ್ಟರ್ ಬಾರಿ ಹಿನ್ನಡೆಯನ್ನು ಅನುಭವಿಸಿದ್ದಾರೆ. 

Karnataka Election 2023 Live: ಈ ಸಚಿವರಿಗೆ ಕಾಡುತ್ತಿದೆ ಸೋಲಿನ ಭೀತಿ...

ಹುಬ್ಬಳ್ಳಿ-ಧಾರವಾಡ-ಕೇಂದ್ರ 224 ವಿಧಾನಸಭಾ ಸ್ಥಾನಗಳಿಗೆ ರಾಜ್ಯದಲ್ಲಿ ಸ್ಪರ್ಧಿಸುತ್ತಿರುವ ಎಲ್ಲ ಪ್ರಮುಖ ಪಕ್ಷಗಳಿಗೆ ಪ್ರತಿಷ್ಠೆಯ ಕದನವಾಗಿ ಪರಿಣಮಿಸಿದೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಪ್ರತಿಷ್ಠೆ ಪಣಕ್ಕಿಟ್ಟಿದೆ. ಶೆಟ್ಟರ್ ಅವರು 2008, 2013 ಮತ್ತು 2018 ರ ಚುನಾವಣೆಯಲ್ಲಿ ಮೂರು ಬಾರಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದಿದ್ದಾರು. ಆದರೆ, ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ ನಂತರ, ಇದು ಅವರಿಗೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಗ್ನಿಪರೀಕ್ಷೆಯಾಗಿದೆ. ಆದರೆ, ಈಗ ಅವರ ಸೋಲು ಖಚಿತವೆಂದು ಹೇಳಲಾಗುತ್ತಿದೆ. ತೀವ್ರ ಪೈಪೋಟಿ ನೀಡಿದ ಭಾರತೀಯ ಜನತಾ ಪಕ್ಷವು ಮಹೇಶ್ ಟೆಂಗಿನಕಾಯಿ ಗೆಲುವಿನತ್ತು ದಾಪುಗಾಲಿಟ್ಟಿದ್ದಾರೆ.

ಅಂಚೆ ಮತಗಳಲ್ಲಿಯೂ ಹಿನ್ನಡೆ: ಇನ್ನು ಹುಬ್ಬಳ್ಳಿ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭವಾದಾಗಿನಿಂದಲೂ ಭಾರಿ ಹಿನ್ನಡೆಯನ್ನು ಅನುಭವಿಸಿದ್ದಾರೆ. ಅಂಚೆ ಮತ ಎಣಿಕೆಯಲ್ಲಿಯೂ ಜಗದೀಶ್‌ ಶೆಟ್ಟರ್‌ಗೆ ಹಿನ್ನಡೆ ಉಂಟಾಗಿತ್ತು. ಅಂಚೆ ಮತಗಳಲ್ಲಿ ಜಗದೀಶ್ ಶೆಟ್ಟರ್ 277 ಮತಗಳನ್ನು ಪಡೆದರೆ, ಬಿಜೆಪಿಯ ಮಹೇಶ್ ಟೆಂಗಿನಕಾಯಿ-516 ಮತಗಳನ್ನು ಪಡೆದುಕೊಂಡಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಹಿನ್ನೆಲೆಯಲ್ಲಿ ಸಂಭ್ರಮ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುತಮ ಗಳಿಸುವತ್ತ ಹೆಜ್ಜೆ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಹಷ್ಓದ್ಘಾರ ಎದ್ದಿದೆ. ಕನಕಪುರದಲ್ಲಿ 30 ಸಾವಿರಕ್ಕಿಂತ ಹೆಚ್ಚಾಗಿ ಮತಗಳನ್ನು ಗಳಿಸಿರುವ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಹರ್ಷೋದ್ಘಾರವೂ ಕೇಳಿಬಂದಿದೆ. ಡಿಕೆ ಗೆ ಜೈಕಾರ ಹಾಕಿ ಸಂಭ್ರಮಿಸುತ್ತಿರುವ ಅಭಿಮಾನಿಗಳು. ರಾಮನಗರ ಸರ್ಕಾರಿ ಎಂಜಿನಿಯರ್ ಕಾಲೇಜು ಬಳಿ ಡಿಕೆಗೆ ಜೈಕಾರ ಕೇಳಿಬರುತ್ತಿದೆ. ಹಳೇ ಮೈಸೂರು ರಸ್ತೆ ಹೈವೇಯಲ್ಲಿ ಸೇರಿರುವ ಸಾವಿರಾರು ಮಂದಿ ಕಾರ್ಯಕರ್ತರು ಅಭಿಮಾನಿಗಳು.

karnataka election results 2023: ಗೂಗಲ್‌ ಸರ್ಚ್‌ನಲ್ಲಿ ಡಿಕೆಶಿ, ಸಿದ್ದರಾಮಯ್ಯ ಟಾಪ್‌ ಟ್ರೆಂಡಿಂಗ್‌

16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.