Asianet Suvarna News Asianet Suvarna News

ನನ್ನ ನೇತೃತ್ವ ಅಲ್ಲ, ಸಾಮೂಹಿಕ ನಾಯಕತ್ವದಡಿ ಎಲೆಕ್ಷನ್‌: ಸಿಎಂ ಬೊಮ್ಮಾಯಿ

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರಕಾರ ಆಡಳಿತದಲ್ಲಿ ಇದ್ದರೆ ರಾಜ್ಯದ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗುತ್ತದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ. 

Karnataka Elections Under Mass Leadership Says CM Basavaraj Bommai grg
Author
First Published Jan 22, 2023, 3:00 AM IST

ತುಮಕೂರು(ಜ.22): ರಾಜ್ಯದಲ್ಲಿ ಮುಂದಿನ ಚುನಾವಣೆಯನ್ನು ಸಿಎಂ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಹೀಗಾಗಿ, ನಾವು ಇಡೀ ತಂಡವಾಗಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತುಮಕೂರು ವಿಶ್ವವಿದ್ಯಾಲಯದ ಮುಂಭಾಗದಲ್ಲಿರುವ ಬಾಯ​ರ್‍ಸ್ ಕಾಫಿ ಶಾಫ್‌ ಬಳಿ ‘ವಿಜಯ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರಕಾರ ಆಡಳಿತದಲ್ಲಿ ಇದ್ದರೆ ರಾಜ್ಯದ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಪರವಾಗಿ ಬಿರುಗಾಳಿ ಬೀಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಭರ್ಜರಿ ಜಯಭೇರಿ ಬಾರಿಸಲಿದೆ. ನಮ್ಮ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನರಿಗೆ ಬಿಜೆಪಿ ಮೇಲೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಡಳಿತದ ಮೇಲೆ ನಂಬಿಕೆ ಇದೆ. ಹೀಗಾಗಿ, ಈ ಬಾರಿಯ ಚುನಾವಣೆಯಲ್ಲಿ 130 ಸೀಟುಗಳನ್ನು ಗೆಲ್ಲುತ್ತೇವೆ.

ಸಿದ್ಧಗಂಗಾ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ: ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ-ಸಿಎಂ ಬೊಮ್ಮಾಯಿ

ಜನತೆಯ ಅಭಿಪ್ರಾಯ ಸಂಗ್ರಹಿಸಿ ಮುಂಬರುವ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ನಾಲ್ಕು ಮೂಲೆಗಳಿಂದಲೂ ಯಾತ್ರೆ ನಡೆಸಿ, ಜನಾಭಿಪ್ರಾಯ ಸಂಗ್ರಹಿಸಿ, ಅದರ ಆಧಾರದಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಈ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇದಕ್ಕೂ ಮೊದಲು ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಮಹಿಳೆಯರ ಕುರಿತಾಗಿ ವಿಶಾಲ ದೃಷ್ಟಿಕೋನವನ್ನು ಹೊಂದಿರುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ. ಮಹಿಳೆಯರು ಸಂಘಟಿತರಾಗಿ, ಭಾಜಪದಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕು. ಬಿಜೆಪಿಯ ನಾಯಕಿಯರೂ ಆಗಬೇಕು. ಸುಷ್ಮಾ ಸ್ವರಾಜ್‌ ಅವರು ಪಕ್ಷದ ಪ್ರಮುಖ ನಾಯಕಿಯಾಗಿದ್ದರು. ಎಲ್ಲಾ ಪ್ರಮುಖರೊಂದಿಗೆ ಹೆಗಲಿಗೆ ಹೆಗಲು ನೀಡಿ ಕಾರ್ಯ ನಿರ್ವಹಿಸಿದ್ದರು ಎಂದರು.

Follow Us:
Download App:
  • android
  • ios