ಬೆಂಗಳೂರಿನಲ್ಲಿ ಸುದ್ದಿ ಮಾದ್ಯಮದ ಓರ್ವ ಪತ್ರಕರ್ತನಿಗೆ ಕೊರೋನಾ ಸೋಂಕು ಪಾಸಿಟಿವ್ ಕಂಡು ಬಂದ ಬೆನ್ನಲ್ಲೇ ಇದೀಗ ಕರ್ನಾಟಕದ ಐವರು ಸಚಿವರಿಗೆ ವೈರಸ್ ಭಯ ಶುರುವಾಗಿದೆ

ಬೆಂಗಳೂರು, (ಏ.29): ಕರ್ನಾಟಕ ಉಪಮುಖ್ಯಮಂತ್ರಿ ಸೇರಿದಂತೆ ಐವರು ಸಚಿವರಿಗೆ ಕೊರೋನಾ ಭೀತಿ ಶುರುವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ, ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಐವರಿಗೆ ಕೊರೋನಾ ಭಯ ಶುರುವಾಗಿದ್ದು, ಪರೀಕ್ಷೆಗೆ ಒಳಗಾಗಿದ್ದರು.

ಕೊರೋನಾ ಭೀತಿ: ಕರ್ನಾಟಕದ ಇಬ್ಬರು ಸಚಿವರು, ಓರ್ವ ಶಾಸಕ ಬಚಾವ್

ಅದೃಷ್ವಶಾತ್ ಐವರು ಸಚಿವರ ಪೈಕಿ ಬಸವರಾಜ್ ಬೊಮ್ಮಾಯಿ ಹಾಗೂ ಡಿಸಿಎಂ ಅಶ್ವಥ್ ನಾರಾಯಣ ಅವರ ವರದಿ ನೆಗೆಟಿವ್ ಬಂದಿದ್ದು, ಇನ್ನು ಕೆಲವ ಸಚಿವರ ವರದಿ ಬರಬೇಕಿದೆ.

ಆದರೂ ಈ ಐವರು ಸೆಲ್ಫ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಈ ಬಗ್ಗೆ ಸಚಿವರಾದ ಸುಧಾಕರ್ ಮತ್ತು ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Scroll to load tweet…

ಕನ್ನಡ ಖಾಸಗಿ ಸುದ್ದಿ ವಾಹಿನಿಯ ಕ್ಯಾಮರಾಮನ್‌ಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಹಲವರನ್ನು ಆರೋಗ್ಯ ಇಲಾಖೆ ಕ್ವಾರಂಟೈನ್‌ಗೆ ಒಳಪಡಿಸಿದೆ. ಇದರ ಭಯದಿಂದ ಈ ಐವರು ಸಚಿವರೂ ಸಹ ಪರೀಕ್ಷೆಗೆ ಒಳಗಾಗಿದ್ದಲ್ಲದೇ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಕೋವಿಡ್19 ಪಾಸಿಟಿವ್ ಬಂದಿರುವ ಟಿವಿ ಪತ್ರಕರ್ತರ ಜೊತೆ ನಾನು ಕೂಡ ಸಂಪರ್ಕಕ್ಕೆ ಬಂದಿರುವ ವಿಷಯ ಗೊತ್ತಾದ ಹಿನ್ನಲೆಯಲ್ಲಿ, ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇನೆ, ನೆಗೆಟಿವ್ ಬಂದಿದೆ. ಹಾಗಿದ್ದರೂ, ಮುನ್ನೆಚ್ಚರಿಕೆಯಿಂದ 7 ದಿನ ನನ್ನ ಮನೆಯಲ್ಲೆ ಕ್ವಾರಂಟೈನ್ ನಲ್ಲಿರಲು ನಿರ್ಧರಿಸಿದ್ದೇನೆ, ಅಲ್ಲಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂದು ಸುಧಾಕರ್ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ.

Scroll to load tweet…