2011ರಲ್ಲಿ ಯಡಿಯೂರಪ್ಪರನ್ನು ಬಂಧಿಸಿದ್ದ ಪೊಲೀಸ್ ಅಧಿಕಾರಿಗೆ ದೊಡ್ಡ ಪೋಸ್ಟ್| ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ನಿಯೋಜನೆ ಮಾಡಿದ ರಾಜ್ಯ ಸರ್ಕಾರ| ಪ್ರಭಾವಕ್ಕೆ ಒಳಗಾಗಿ ಪಶ್ಚಿಮ ವಲಯ ಡಿಸಿಪಿ ಮಾಡಲಾಯ್ತಾ..?| ಬಿಜೆಪಿ ಪಾಳಯದೊಳಗೆ ಗಂಭೀರ ಚರ್ಚೆ ಹುಟ್ಟು ಹಾಕಿರುವ ಅಧಿಕಾರಿಯ ವರ್ಗಾವಣೆ| ಹಾಗಾದ್ರೆ ಯಾರು ಆ ಪೊಲೀಸ್ ಅಧಿಕಾರಿ..?

ಬೆಂಗಳೂರು, [ನ.02]: ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರನ್ನು ಅರೆಸ್ಟ್ ಮಾಡಿದ್ದ ಪೊಲೀಸ್ ಅಧಿಕಾರಿ ಎಸ್. ಗಿರೀಶ್ ಗೆ ದೊಡ್ಡ ಪೋಸ್ಟ್ ನೀಡಲಾಗಿದೆ.

Add Asianetnews Kannada as a Preferred SourcegooglePreferred

ಭ್ರಷ್ಟಾಚಾರ ಹಾಗೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ 2011ರಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸಿದ್ದ ಗಿರೀಶ್ ಅವರನ್ನು ಇದೀಗ ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಇಂದು [ಶನಿವಾರ] ಆದೇಶ ಹೊರಡಿಸಿದೆ.

ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಅಳಿಯರಾಗಿರುವ ಗಿರೀಶ್, KSRP 9ನೇ ಬೆಟಾಲಿಯನ್ ಕಮಾಂಡೆಂಟ್ ಆಗಿದ್ದರು. ಇದೀಗ ಅವರನ್ನು ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ಮಾಡಲಾಗಿದೆ. ಗಿರೀಶ್ ಗೆ ಉನ್ನತ ಹುದ್ದೆ ನೀಡಿರುವುದಕ್ಕೆ ಬಿಎಸ್ ವೈ ಆಪ್ತರಲ್ಲಿ ಅಸಮಾಧನಗಳು ವ್ಯಕ್ತವಾಗಿವೆ. 

ಅನರ್ಹರ ಬೆನ್ನಿಗೆ ನಿಂತ Bsy ಸರ್ಕಾರ, ಕುಸಿಯಿತು ಚಿನ್ನದ ದರ; ಇಲ್ಲಿವೆ ನ.02ರ ಟಾಪ್ 10 ಸುದ್ದಿ!

ಸಿಎಂ ಬಿಎಸ್ ವೈ ಗೆ ಅಧಿಕಾರಿಯ ಹಿನ್ನೆಲೆ ಮುಚ್ಚಿಟ್ಟು ಉನ್ನತ ಹುದ್ದೆ ನೀಡಲಾಗಿದೆಯಾ..? ತಮ್ಮನ್ನು ಅರೆಸ್ಟ್ ಮಾಡಿದ್ದನ್ನು ಮರೆತು ಬಿಎಸ್ ವೈ ಉನ್ನತ ಹುದ್ದೆ ನೀಡಿದ್ರಾ..? ಅಥವಾ ಪ್ರಭಾವಕ್ಕೆ ಒಳಗಾಗಿ ಗಿರೀಶ್ ರನ್ನು ಪಶ್ಚಿಮ ವಲಯ ಡಿಸಿಪಿ ಮಾಡಲಾಯ್ತಾ..? ಹೀಗೆ ಹಲವು ಪ್ರಶ್ನೆಗಳ ಬಗ್ಗೆ ಯಡಿಯೂರಪ್ಪ ಆಪ್ತವಲಯದಲ್ಲಿ ಚರ್ಚೆಗಳು ಶುರುವಾಗಿದೆ.

ಒಟ್ಟಿನಲ್ಲಿ ಗಿರೀಶ್ ಅವರಿಗೆ ಉನ್ನತ ಹುದ್ದೆ ನೀಡಿ ವರ್ಗಾವಣೆ ಮಾಡಿರುವುದು ಬಿಜೆಪಿ ಪಾಳಯದೊಳಗೆ ಗಂಭೀರ ಚರ್ಚೆ ಹುಟ್ಟು ಹಾಕಿದೆ. 

ಭ್ರಷ್ಟಾಚಾರ ಹಾಗೂ ಡಿನೋಟಿಫಿಕೇಷನ್ ಪ್ರಕರಣದ ಅಡಿಯಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಅಕ್ಟೋರ್ 15, 2011ರಂದು ಬಂಧಿಸಲಾಗಿತ್ತು. ಬಳಿಕ ನವೆಂಬರ್ 8, 2011ರಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.