ಈಶ್ವರಪ್ಪನವರ ಮಾಜಿ ಪಿ.ಎ ವಿನಯ್ ಮೇಲೆ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ N.R.ಸಂತೋಷ್ಗೆ ಸಂಕಷ್ಟ ಎದುರಾಗಿದೆ.
ಬೆಂಗಳೂರು, (ಫೆ.01): ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಾಜಿ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಯತ್ನ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿರುವ N.R.ಸಂತೋಷ್ಗೆ ಸಂಕಷ್ಟ ಎದುರಾಗಿದೆ.
'ಅವನ್ಯಾವನೋ ಸತ್ರೆ ನನಗೆ ಯಾಕ್ರೀ ಕೇಳ್ತೀರಾ'? ಸಂತೋಷ್ ಬಗ್ಗೆ ಈಶ್ವರಪ್ಪ ಸಿಡಿಮಿಡಿ
ಪ್ರಕರಣವನ್ನು ರದ್ದುಕೋರಿ N.R.ಸಂತೋಷ್ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇಂದು (ಸೋಮವಾರ) ನ್ಯಾ.ಹೆಚ್.ಪಿ.ಸಂದೇಶ್ರವರಿದ್ದ ಏಕಸದಸ್ಯ ಪೀಠ N.R.ಸಂತೋಷ್ ಅರ್ಜಿಯನ್ನು ವಜಾಗೊಳಿಸಿದೆ.
ಅಂದ ಹಾಗೆ, ಪ್ರಕರಣದ ವಿಚಾರಣೆ ವೇಳೆ ತಮ್ಮ ಪರ ಸ್ವತಃ ವಿನಯ್ ವಾದ ಮಂಡಿಸಿದ್ದರು. ಪ್ರಕರಣವನ್ನು CCBಗೆ ವರ್ಗಾಯಿಸಿದ್ದನ್ನು ಪ್ರಶ್ನಿಸಿ N.R.ಸಂತೋಷ್ ಅರ್ಜಿ ಸಲ್ಲಿಸಿದ್ದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 1, 2021, 10:36 PM IST