ಕೋರೊನಾ ಅಟ್ಟಹಾಸದ ನಡುವೆ ಪರಿಷತ್ ಅಖಾಡ/ ಕಾಂಗ್ರೆಸ್ ಅಗ್ರ ನಾಯಕರ ಕಸರತ್ತು/ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡಲು ಲಾಬಿ/ ಸಿದ್ದು-ಡಿಕೆಶಿ- ಪರಮೇಶ್ವರ ನಡುವೆ ತ್ರಿಕೋನ ಹಣಾಹಣಿ

ಬೆಂಗಳೂರು(ಜೂ.04) ಕೊರೋನಾ ಅಟ್ಟಹಾಸ ಮುಂದುವರಿದಿದ್ದರೂ ರಾಜಕೀಯ ಸುದ್ದಿಗಳಿಗೂ ಬರ ಇಲ್ಲ. ವಿಧಾನಪರಿಷತ್ ಚುನಾವಣಾ ಅಖಾಡ. ರಂಗೇರಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪರಿಷತ್ ಸದಸ್ಯರಾಗಲು ಕಾಂಗ್ರೆಸ್ ನಲ್ಲಿ ಆರಂಭಗೊಂಡ ಟ್ರೈ ಆಂಗಲ್ ಫೈಟ್ ಶುರುವಾಗಿದೆ. ಇರುವ ಎರಡು ಸ್ಥಾನಗಳಿಗೆ ಬಾರಿ ಲಾಬಿ ಶುರುವಾಗಿದೆ. ತಮ್ಮ ಬೆಂಬಲಿಗರಿಗೆ ಸ್ಥಾನ ಕಲ್ಪಿಸಿಕೊಡಲು ಅಗ್ರ ನಾಯಕರು ಸರ್ಕಸ್ ಆರಂಭಿಸಿದ್ದಾರೆ.

ಪರಿಷತ್ ಅಧಿಸೂಚನೆ ಪ್ರಕಟಣೆ ಮಾಡುವುದಕ್ಕೂ ಮೊದಲು ನಾಯಕರಲ್ಲಿ ಫೈಟ್ ಶುರುವಾಗಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಪರಮೇಶ್ವರ್ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡಲು ಹಸರಸಾಹಸ ಮಾಡುತ್ತಿದ್ದಾರೆ.

ಸಿದ್ಧಾರ್ಥ್ ಮಗನ ಜತೆ ಡಿಕೆಶಿ ಪುತ್ರಿ ವಿವಾಹ? ಏನ್ ಕತೆ

ಐವಾನ್ ಡಿಸೋಜ, ಎಚ್ ಎಂ ರೇವಣ್ಣ, ಮಾಜಿ ಮೇಯರ್ ರಾಮಚಂದ್ರಪ್ಪ, ನಾಸೀರ್ ಹುಸೇನ್ ಪರ ಸಿದ್ದರಾಮಯ್ಯ ಲಾಬಿ ಮಾಡುತ್ತಿದ್ದರೆ, ವಿಆರ್ ಸುದರ್ಶನ್, ಭಾರತಿ ಶಂಕರ್, ರಾಣಿ ಸತೀಶ್, ಬಿ.ಎ.ಹಸನಬ್ಬ ಪರ ಡಿಕೆಶಿ ಮಾತನಾಡುತ್ತಿದ್ದಾರೆ.

ನಿವೇದಿತ್ ಆಳ್ವಾ, ಶಾಫಿವುಲ್ಲಾ, ಬೋಸರಾಜು, ವೇಣುಗೋಪಾಲ್, ನಾಗರಾಜ್ ಯಾದವ್ ಪರಮೇಶ್ವರನ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ತಮ್ಮ ಬೆಂಬಲಿಗರಿಗೆ ಕೊಡಿಸಿ, ಹೈಕಮಾಂಡ್ ಬಳಿ ಮತ್ತಷ್ಟು ಸ್ಟ್ರಾಂಗ್ ಆಗಲು ಮೂರು ನಾಯಕರು ಕಸರತ್ತು ಮಾಡುತ್ತಿದ್ದಾರೆ. 

ಡಿಕೆಶಿ ಸಿದ್ದು ನಡುವೆ ನೇರಾನೇರ ಫೈಟ್ ಇದ್ದು ಶುಕ್ರವಾರ ನಡೆಯುವ ಸಭೆಯಲ್ಲಿ ಸ್ಪಷ್ಟ ಚಿತ್ರಣ ಹೊರಬಿಳುವ ಸಾಧ್ಯತೆ ಇದೆ.