* ಕರ್ನಾಟಕ ಸಂಸದ ಜೈರಾಮ್ ರಮೇಶ್‌ಗೆ ಮಹತ್ವದ ಹುದ್ದೆ* ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಜೈರಾಮ್ ರಮೇಶ್ ನೇಮಕ* ನೇಮಕ ಮಾಡಿ ಆದೇಶ ಮಾಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ

ಬೆಂಗಳೂರು, (ಜೂನ್.16): ಎರಡನೇ ಬಾರಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಜೈರಾಮ್ ರಮೇಶ್ (Karnataka MP Jairam Ramesh)ಅವರಿಗೆ ಮಹತ್ವದ ಹುದ್ದೆ ಸಿಕ್ಕಿದೆ. 

Add Asianetnews Kannada as a Preferred SourcegooglePreferred

ಕರ್ನಾಟಕ ಸಂಸದ ಜೈರಾಮ್ ರಮೇಶ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು(ಗುರುವಾರ) ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿ ಸಹ ಜೈರಾಮ್ ರಮೇಶ್‌ಗೆ ವಹಿಸಲಾಗಿದೆ.

Rajya Sabha Poll ಡೈನಿಂಗ್ ಟೇಬಲ್ ಪಾಲಿಟಿಕ್ಸ್ ಸೋತಿದ್ದು ಎಲ್ಲಿ? ದಾರಿ ತಪ್ಪಿದರಾ ದಳಪತಿಗಳು?

 ರಣದೀಪ್ ಸಿಂಗ್ ಸುರ್ಜೇವಾಲ ಅವರು ಎಐಸಿಸಿಯ ಮಾಹಿತಿ, ಸೋಷಿಯಲ್ , ಡಿಜಿಟಲ್ ಮಿಡಿಯಾ ವಿಭಾಗದ ಉಸ್ತುವಾರಿಯಾಗಿದ್ದರು. ಇದೀಗ ಅವರನ್ನು ಬದಲಿಸಿ ಜೈರಾಮ್ ರಮೇಶ್ ಅವರನ್ನ ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುರ್ಜೇವಾಲ ಕೇವಲ ಕರ್ನಾಟಕ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಜೈರಾಮ್ ರಮೇಶ್ ಅವರು 2016ರಲ್ಲಿ ಕರ್ನಾಟಕದಿಂದಲೇ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ಮತ್ತೊಮ್ಮೆ ಕರ್ನಾಟಕದಿಂದಲೇ ಎರಡನೇ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದಾರೆ.