ದೋಸ್ತಿ ಸರಕಾರ ಮತ್ತು ಕಾಂಗ್ರೆಸ್ ಉಳಿಸಲು ಐವರು ಸಚಿವರು ತಮ್ಮ ಸ್ಥಾನ ತ್ಯಜಿಸಲು ಸಿದ್ಧರಾಗಿದ್ದಾರೆ. ಕಾಂಗ್ರೆಸ್ ರಿವರ್ಸ್ ಆಪರೇಶನ್‌ಗೆ ಮುಂದಾಗಿದ್ಯಾ? ಆ ಐವರು ಸಚಿವರು ಯಾರು?

ಬೆಂಗಳೂರು[ಫೆ.07] ದೋಸ್ತಿ ಸರ್ಕಾರ ಉಳಿಸಲು ಅಂತಿಮ ಹಂತದ ಕಸರತ್ತು ನಡೆಯುತ್ತಿದೆ. ಒಂದು ಕಡೆ ಬಂಡಾಯ ಶಾಸಕರನ್ನು ಕಾಂಗ್ರೆಸ್ ಅನರ್ಹ ಮಾಡುವ ಮಟ್ಟಕ್ಕೆ ತೀರ್ಮಾನ ತೆಗೆದುಕೊಂಡಿದ್ದರೂ ಇನ್ನೊಂದು ಕಡೆ ಸುರಕ್ಷಾ ತಂತ್ರ ಎಂಬ ಕಾರಣಕ್ಕೆ 5 ಜನ ಸಚಿವರನ್ನು ರಾಜೀನಾಮೆ ಪಡೆದುಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

Add Asianetnews Kannada as a Preferred SourcegooglePreferred

ಹಿಂದಿನ ಸರಕಾರದಲ್ಲಿಯೂ ಸಚಿವರಾಗಿದ್ದ ಯು.ಟಿ ಖಾದರ್, ಕೃಷ್ಣ ಭೈರೇಗೌಡ, ಕೆ.ಜೆ ಜಾರ್ಜ್ ವಿಧಾನ ಪರಿಷತ್‌ ಸದಸ್ಯೆಯಾಗಿ ಸಚಿವೆಯಾಗಿರುವ ಜಯಮಾಲಾ, ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದ ಪುಟ್ಟರಂಗಶೆಟ್ಟಿ ಅವರ ರಾಜೀನಾಮೆ ಪಡೆದುಕೊಳ್ಳಲಾಗುತ್ತಿದೆ ಎಂಬ ಮಾತು ಕೇಳಿ ಬಂದಿದೆ.

ಕಮಲ-ದಳ ದೋಸ್ತಿಗೂ ವೇದಿಕೆ ಸಿದ್ಧ

ಬಿಜೆಪಿಯ ಆಪರೇಶನ್‌ಗೆ ಪ್ರತಿಯಾಗಿ ಕಾಂಗ್ರೆಸ್‌ನ ಪ್ರಭಾವಿ ಸಚಿವರೊಬ್ಬರು ಅಖಾಡಕ್ಕೆ ಇಳಿದು ರಿವರ್ಸ್ ಆಪರೇಶನ್‌ಗೆ ಮುಂದಾಗಿದ್ದಾರೆ. ಕಮಲ ಮಪಾಳಯದಿಂದಲೇ ಜನರನಬ್ನು ಕರೆತಂದು ಅವರಿಗೆ ವಿವಿಧ ಜವಾಬ್ದಾರಿ ವಹಿಸುಕೊಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.