ರಾಜಕೀಯ ನಿಂತ ನೀರಲ್ಲ. ಯಾರು ಅಡ್ಡಹಾಕೋಕೆ ಆಗಲ್ಲ. ಲೋಕಸಭೆ ಎಲೆಕ್ಷನ್ ನಲ್ಲೂ ಬಿಜೆಪಿಗೆ ಸಪೋರ್ಟ್ ಮಡಿದ್ದೆ ಎಂದು ಹೇಳುವ ಮೂಲಕ  ಜೆಡಿಎಸ್ ನ ಮತ್ತೊಬ್ಬ ಹಿರಿಯ ಶಾಸಕ ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ.

ಕೋಲಾರ, [ಅ.23]: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಮುಖಂಡರು ಹಣದ ಆಮಿಷವೊಡ್ಡಿ 5 ಕೋಟಿ ರೂ. ಅಡ್ವಾನ್ಸ್‌ ನೀಡಿದ್ದರು ಎಂದು ಹೇಳಿದ್ದ ಕೋಲಾರ ಜೆಡಿಎಸ್‌ ಶಾಸಕ ಶ್ರೀನಿವಾಸಗೌಡ ಮತ್ತೆ ಸುದ್ದಿಯಲ್ಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಚಿವ ಎಚ್. ನಾಗೇಶ್ ಸಮ್ಮುಖದಲ್ಲಿಯೇ ಶ್ರೀನಿವಾಸಗೌಡ ಅವರು ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ಇಂದು [ಬುಧವಾರ] ಕೋಲಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜಕೀಯ ನಿಂತ ನೀರಲ್ಲ. ಯಾರು ಅಡ್ಡ ಹಾಕೋಕೆ ಆಗಲ್ಲ. ಲೋಕಸಭೆ ಚುನಾವಣೆಯಲ್ಲೂ ನಾನು ಬಿಜೆಪಿಗೆ ಬೆಂಬಲ ಸೂಚಿಸಿದ್ದೇನೆ. ಓಪನ್ ಆಗಿ ಬಿಜೆಪಿ ಪರವಾಗಿ ಕೆಲಸ‌ ಮಾಡಿದ್ದೇನೆ ಎಂದು ಅಚ್ಚರಿ ಹೇಳಿಕೆ ನೀಡಿದರು.

ಜೆಡಿಎಸ್‌ಗೆ ಶಾಕ್?: ಬಾಡೂಟಕ್ಕೆಂದು ರೆಸಾರ್ಟ್ ಬಿಟ್ಟ ಶಾಸಕ ದೆಹಲಿ ವಿಮಾನ ಹತ್ತಿದ್ರು!

4 ಬಾರಿ, ನಾಲ್ಕು ಪಕ್ಷಗಳಿಂದ ಗೆದ್ದಿದ್ದೇನೆ. ಮುಂದೆ ಏನಾಗುತ್ತೋ ಗೊತ್ತಿಲ್ಲ. ರಾಜಕಾರಣ ಹರಿಯುವ ನೀರಿದ್ದಂಗೆ. ಯಾರೂ ಅಡ್ಡಿ ಪಡಿಸಲು ಸಾಧ್ಯವಿಲ್ಲ. ಅದು ಹರಿಯುತ್ತಲೇ ಇರುತ್ತೆ ಎಂದು ಹೇಳುವ ಮೂಲಕ ಜೆಡಿಎಸ್ ತೊರೆಯುವ ಸುಳಿವು ನೀಡಿದರು. 

ಈ ಹಿಂದೆಯೂ ಬಿಜೆಪಿಗೆ ಸೇರುತ್ತಾರೆ ಎನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಕೇಳಿಬಂದಿದ್ದವು. ಇದೀಗ ಶ್ರೀನಿವಾಸಗೌಡ ಅವರು ಈ ಮಾತುಗಳನ್ನು ಗಮನಿಸಿದರೆ ಜೆಡಿಎಸ್ ತೊರೆಯುವ ಮನಸ್ಸು ಮಾಡಿದಂತಿದೆ.

ಉಲ್ಟಾ ಹೊಡೆದ ಆಪರೇಷನ್ ಕಮಲವಿಲ್ಲವೆಂದ ಜೆಡಿಎಸ್ ಶಾಸಕ

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಶ್ರೀನಿವಾಸಗೌಡ ಅವರಿಗೆ ಬಿಜೆಪಿ ಆಪರೇಷನ್ ಕಮಲದ ಮೂಲಕ ಆಫರ್ ನೀಡಲಾಗಿತ್ತು. ಇದನ್ನು ಸ್ವತಃ ಶ್ರೀನಿವಾಸಗೌಡ ಅವರೇ ಬಹಿರಂಗಪಡಿಸಿದ್ದರು. 

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಮುಖಂಡರು ಹಣದ ಆಮಿಷವೊಡ್ಡಿ 5 ಕೋಟಿ ರೂ. ಅಡ್ವಾನ್ಸ್‌ ನೀಡಿದ್ದರನ್ನು ಎನ್ನುವ ಗಂಭೀರ ಆರೋಪ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.