ಗ್ಯಾರಂಟಿ ಯೋಜನೆಗಳಿಂದ ಶಾಸಕರ ಅನುದಾನಕ್ಕೆ ಯಾವುದೇ ಕೊರೆತೆ ಆಗಿಲ್ಲ. ಮುಖ್ಯಮಂತ್ರಿಗಳು ಸೇರಿದಂತೆ ಇತರೆ ಇಲಾಖೆ ಸಚಿವರು ಸಾಕಷ್ಟು ಅನುದಾನ ನೀಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. 136 ಶಾಸಕರಿಗೂ ಮುಖ್ಯಮಂತ್ರಿಗಳು ವಿಶೇಷ ಅನುದಾನ ನೀಡಿದ್ದಾರೆ: ಕೊಳ್ಳೇಗಾಲ ಶಾಸಕ ಎ.ಆರ್. ‌ಕೃಷ್ಣಮೂರ್ತಿ 

ಚಾಮರಾಜನಗರ(ನ.19): ನನಗೆ ಯಾವುದೇ ಆಫರ್ ಬಂದಿಲ್ಲ, ನನಗೆ ಬರುವುದೂ ಇಲ್ಲ. ನನ್ನನ್ನು ಯಾರೂ ಸಂಪರ್ಕಿಸಿಯೂ ಇಲ್ಲ. ನನ್ನ ಸಂಪರ್ಕ ಮಾಡಿದರೂ ಸಹ ನಾನು ಬಿಜೆಪಿಯ ಆಸೆ ಆಮಿಷಗಳಿಗೆ ಬಲಿಯಾಗುವವನಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾಗಿ ಬಿಜೆಪಿ ಬಿಟ್ಟು ಬಂದವನು ಎಂದು ಕೊಳ್ಳೇಗಾಲ ಶಾಸಕ ಎ.ಆರ್. ‌ಕೃಷ್ಣಮೂರ್ತಿ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್ ವಿಚಾರದ ಬಗ್ಗೆ ಇಂದು(ಮಂಗಳವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಎ.ಆರ್ ‌ಕೃಷ್ಣಮೂರ್ತಿ ಅವರು, ಗ್ಯಾರಂಟಿ ಯೋಜನೆಗಳಿಂದ ಶಾಸಕರ ಅನುದಾನಕ್ಕೆ ಯಾವುದೇ ಕೊರೆತೆ ಆಗಿಲ್ಲ. ಮುಖ್ಯಮಂತ್ರಿಗಳು ಸೇರಿದಂತೆ ಇತರೆ ಇಲಾಖೆ ಸಚಿವರು ಸಾಕಷ್ಟು ಅನುದಾನ ನೀಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. 136 ಶಾಸಕರಿಗೂ ಮುಖ್ಯಮಂತ್ರಿಗಳು ವಿಶೇಷ ಅನುದಾನ ನೀಡಿದ್ದಾರೆ ಎಂದು ತಿಳಿಸಿದ್ದಾರೆ. 

ಬಿಜೆಪಿ ಕಾಲದ ಕೋವಿಡ್‌ ಹಗರಣ: ನಮ್ಮ ಸರ್ಕಾರ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ಸಚಿವ ಮಂಕಾಳ ವೈದ್ಯ

ಉಪಚುನಾವಣೆ ಫಲಿತಾಂಶ ಬಳಿಕ ಸಿದ್ದರಾಮಯ್ಯ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಶಾಸಕ ಎ.ಆರ್ ‌ಕೃಷ್ಣಮೂರ್ತಿ ಅವರು, ಪಕ್ಷದ ತೀರ್ಮಾನದ ಆಧಾರದ ಮೇಲೆ ಸಿದ್ದರಾಮಯ್ಯ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ.