Asianet Suvarna News Asianet Suvarna News

ಸಿದ್ದರಾಮಯ್ಯ ವಿರುದ್ಧ ಫೇಸ್ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಕೇಸ್ ಬುಕ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.

KPCC Files Complaint against who Miscreants derogatory Post In Facebook On siddaramaiah
Author
Bengaluru, First Published Aug 5, 2020, 6:42 PM IST

ಬೆಂಗಳೂರು, (ಆ.05): ಕೊರೋನಾ ಸೋಂಕಿನಿಂದಮಣಿಪಾಲ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಕೆಪಿಸಿಸಿ ಕಾನೂನು ಘಟಕದಿಂದ ವಕೀಲ ಸೂರ್ಯ ಮುಕುಂದರಾಜ್ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಇಂದು (ಬುಧವಾರ)  ದೂರು ನೀಡಿದರು. 

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ: ಕಾಂಗ್ರೆಸ್‌ ಮುಖಂಡನ ಬಂಧನ

ಮತ್ತೆ ಹುಟ್ಟಿ ಬರಬೇಡ, ಬಂದರೂ ಜಾತಿ ಮಾಡಬೇಡ. ಮಾಂಸ ತಿಂದು ದೇವಸ್ಥಾನಕ್ಕೆ ಹೋಗೊ ನಾಲಾಯಕ್ , ಮೊಟ್ಟೇಲಿ ಮಕ್ಕಳ ಜಾತಿ ಭೇದ ಮಾಡೊ ಭಿಕಾರಿ ಹೋಗು ಎಂದು ಮಂಜು ಮತ್ತು ಆನಂದ್ ಕುಮಾರ್ ಎನ್ನುವರ ಹೆಸರಿನಿಂದ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಲಾಗಿದೆ.

ಈ‌ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ ಹಾಕಿದ್ದ ಕೆಪಿಸಿಸಿ ಸಾಮಾಜಿಕ ಜಾಲತಾಣದ ಸದಸ್ಯನನ್ನು ಪೊಲೀಸರು ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us:
Download App:
  • android
  • ios