ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರ ಹೇಳಿಕೆ ಹಿಂದಿನ ವಿಚಾರವೇನು..?

ಮೈಸೂರು (ಜ.26): ‘ಇದು ಕಾಂಗ್ರೆಸ್‌- ಬಿಜೆಪಿ ಮೈತ್ರಿ ಸರ್ಕಾರ. ನಮ್ಮ ಸದಸ್ಯರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ. ಕಾಂಗ್ರೆಸ್‌- ಬಿಜೆಪಿ ಸರ್ಕಾರ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದರು.

Add Asianetnews Kannada as a Preferred SourcegooglePreferred

 ಸೋಮವಾರ ನಗರದಲ್ಲಿ ಮಾತನಾಡಿದ ಅವರು, ನಮ್ಮವರನ್ನು ಕರೆದುಕೊಂಡು ಹೋಗಿ ಗಿಫ್ಟ್ ಕೊಟ್ಟಿದ್ದಾರೆ. 

'ಈ ಸರ್ಕಾರ ಬಲಿಷ್ಠವಾಗಿದೆ, ಎಲ್ಲರೂ ಒಗ್ಗಟ್ಟಾಗಿದ್ದಾರೆ'

ರಾಜ್ಯ ಸರ್ಕಾರ ಸುಭದ್ರವಾಗಿದೆ. ಎಲ್ಲರೂ ಅತ್ಯಂತ ಒಗ್ಗಟ್ಟಿನಿಂದ ಸಹಕಾರ ಕೊಡುತ್ತಿದ್ದಾರೆ ಎಂದು ಕುಟುಕಿದರು. ಈ ಸರ್ಕಾರ ಬಲಿಷ್ಠವಾಗಿದೆ. ಸರ್ಕಾರಕ್ಕೆ ಬಹಳಷ್ಟುಸಂಖ್ಯಾ ಬಲವಿದೆ. ಸರ್ಕಾರದಲ್ಲಿರುವವರು ಎಲ್ಲರೂ ತುಂಬಾ ಒಗ್ಗಟ್ಟಾಗಿದ್ದಾರೆ. ಸರ್ಕಾರದಲ್ಲಿ ಏನೂ ಗೊಂದಲವಿಲ್ಲ. 

ಇನ್ನು ಮುಖ್ಯಮಂತ್ರಿಗಳೋ ಬಹಳ ದೊಡ್ಡವರು ಎನ್ನುವ ಮೂಲಕ ಸರ್ಕಾರದ ಸಂಪುಟ ಪುನರಚನೆ ಹಾಗೂ ಖಾತೆ ಹಂಚಿಕೆ ಗೊಂದಲದ ಬಗ್ಗೆ ಲೇವಡಿ ಮಾಡಿದರು.