Asianet Suvarna News Asianet Suvarna News

ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ನಡಿಗೆ ಅಚ್ಚುಕಟ್ಟು: ಡಿಕೆಶಿ

‘ಸಿದ್ದರಾಮಯ್ಯ ಅವರ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಚಾರದಟ್ಟಣೆ ನಿಯಂತ್ರಿಸಲು ಆಯೋಜಕರು ಕ್ರಮ ಕೈಗೊಂಡಿರಲಿಲ್ಲ. ಆದರೆ, ನಾನು ಮಾಡಿದ್ದ ಸ್ವಾತಂತ್ರ್ಯ ನಡಿಗೆ ಹಾಗೂ ಮೇಕೆದಾಟು ಪಾದಯಾತ್ರೆ ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಸ್ಮರಣೀಯವಾಗಿಸಿದ್ದೇನೆ’ ಎಂದು ಸಿದ್ದರಾಮಯ್ಯ ಜನ್ಮದಿನದ ಸಿದ್ಧತೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.

kpcc president dk shivakumar taunts davanagere siddaramotsava gvd
Author
First Published Sep 17, 2022, 4:00 AM IST

ಬೆಂಗಳೂರು (ಸೆ.17): ‘ಸಿದ್ದರಾಮಯ್ಯ ಅವರ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಚಾರದಟ್ಟಣೆ ನಿಯಂತ್ರಿಸಲು ಆಯೋಜಕರು ಕ್ರಮ ಕೈಗೊಂಡಿರಲಿಲ್ಲ. ಆದರೆ, ನಾನು ಮಾಡಿದ್ದ ಸ್ವಾತಂತ್ರ್ಯ ನಡಿಗೆ ಹಾಗೂ ಮೇಕೆದಾಟು ಪಾದಯಾತ್ರೆ ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಸ್ಮರಣೀಯವಾಗಿಸಿದ್ದೇನೆ’ ಎಂದು ಸಿದ್ದರಾಮಯ್ಯ ಜನ್ಮದಿನದ ಸಿದ್ಧತೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಟೀಕಿಸಿದ್ದಾರೆ. ಅಂಬೇಡ್ಕರ್‌ ಭವನದಲ್ಲಿ ನಡೆದ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸಂಯೋಜಕದ ಸಭೆಯಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಸಿದ್ದರಾಮಯ್ಯ ಜನ್ಮದಿನ ಕಾರ್ಯಕ್ರಮ ಮಾಡಿದ್ದರು. ವೇದಿಕೆಯ ಮೇಲಿರುವ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲೇ ಅದನ್ನು ಮಾಡಿದ್ದರು. 

ಕಾರ್ಯಕ್ರಮಕ್ಕೆ ಹೆಚ್ಚು ಜನರೂ ಬಂದಿದ್ದರು. ಆದರೆ ಸಂಚಾರದಟ್ಟಣೆ ನಿರ್ವಹಣೆ ಮಾಡಲು ವಿಫಲವಾಗಿದ್ದರು. ಹೀಗಾಗಿಯೇ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಸಂಚಾರದಟ್ಟಣೆ ಸಮಸ್ಯೆಯೇ ಆಗದಂತೆ ಕ್ರಮ ಕೈಗೊಂಡಿದ್ದೆ ಎಂದು ಹೇಳಿದರು. ಸ್ವಾತಂತ್ರ್ಯ ನಡಿಗೆಗೆ ಕೆಲವರು ಬಂದು ಮುಖ ತೋರಿಸಿ ಹೋಗಿ ಕುಳಿತುಕೊಂಡರು. ಅದು ನನಗೆ ಗೊತ್ತಿದೆ, ಎಐಸಿಸಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಬೆಂಬಲಿತ ಕೆಲ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಮಾತು ಮುಂದುವರೆಸಿದ ಅವರು, ‘ಅದೊಂದು ದಾಖಲೆಯ ಕಾರ್ಯಕ್ರಮ. ಎಷ್ಟು ಮಂದಿ ಭಾಗವಹಿಸಿದ್ದರು. ಯಾವ್ಯಾವ ವಯಸ್ಸಿನವರು, ಯಾವ್ಯಾವ ಕ್ಷೇತ್ರದಿಂದ ಭಾಗವಹಿಸಿದ್ದರು ಎಂಬ ಅಂಕಿ-ಅಂಶವೂ ನಮ್ಮ ಬಳಿ ಇದೆ. ಅಂತಹ ಕಾರ್ಯಕ್ರಮವನ್ನು ಮತ್ತೆ ಮತ್ತೆ ಮಾಡಲಾಗುವುದಿಲ್ಲ’ ಎಂದರು.

ಡಿಕೆಶಿಗೆ ಇ.ಡಿ ಸಮನ್ಸ್‌; ಭಾರತ ಏಕತಾ ಯಾತ್ರೆ, ಅಧಿವೇಶನದ ವೇಳೆ ಕಿರುಕುಳ ಎಂದ ಕಾಂಗ್ರೆಸ್‌ ಅಧ್ಯಕ್ಷ

ಐಕ್ಯತಾ ಯಾತ್ರೆ ಮೂಲಕ ದೇಶದಲ್ಲಿ ಬದಲಾವಣೆ ತರಬೇಕು: ಭಾರತ ಐಕ್ಯತಾ ಯಾತ್ರೆ ಈ ದೇಶದಲ್ಲಿ ಬದಲಾವಣೆ ತರಬೇಕು. ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ತುಂಬಿ ಕೇಂದ್ರ ಹಾಗೂ ರಾಜ್ಯದಲ್ಲಿ ಮತ್ತೆ ಈ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ರಾಹುಲ್‌ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿದೆ. ಎಲ್ಲರೂ ಒಗ್ಗಟ್ಟಾಗಿ ಐಕ್ಯತಾ ಯಾತ್ರೆಯನ್ನು ಯಶಸ್ವಿಗೊಳಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದ ಶ್ರೇಯಸ್‌ ಕಂಫಟ್ಸ್‌ರ್‍ನಲ್ಲಿ ಭಾರತ ಐಕ್ಯತಾ ಯಾತ್ರೆಯ ಪಾದಯಾತ್ರೆ ಶಿರಾ ನಗರದ ಮೂಲಕ ಹಾದು ಹೋಗುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ನಂತರ ಕಾರ್ಯಕರ್ತರೊಂದಿಗೆ ಚರ್ಚಿಸಿ ಮಾತನಾಡಿದರು. ಭಾರತ ಐಕ್ಯತಾ ಯಾತ್ರೆಯ ಯಶಸ್ವಿಗೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಪ್ರತಿ ಪಂಚಾಯಿತಿ, ಪ್ರತಿ ಹಳ್ಳಿಗೂ ಹೋಗಿ ಪ್ರತಿ ಮನೆಯವರನ್ನು ಕರೆತರಬೇಕು. ಜೆಡಿಎಸ್‌ ಪಕ್ಷದವರಾಗಲಿ, ಬಿಜೆಪಿ ಪಕ್ಷದವರಾಗಲಿ ಎಲ್ಲರನ್ನು ಆಹ್ವಾನಿಸಿ ಮತ್ತೊಮ್ಮೆ ದೇಶಕ್ಕೆ ಬದಲಾವಣೆಯನ್ನು ಕರ್ನಾಟಕದ ಮೂಲಕ ನೀಡೋಣ. ಎಲ್ಲಾ ಧರ್ಮದ ನಾಯಕರು ಎಲ್ಲರೂ ಭಾರತ ಐಕ್ಯತಾ ಯಾತ್ರೆಗೆ ಕೈಜೋಡಿಸಿ. ರಾಜ್ಯದ ನಾಯಕರು ನಿಮ್ಮ ಗ್ರಾಮಕ್ಕೆ ಬರುತ್ತಿದ್ದಾರೆ. ನಿಮ್ಮ ಶಕ್ತಿ ಪ್ರದರ್ಶನ ತೋರಿಸಿ ಎಂದರು.

ನಾನು ಸಿಎಂ ಆಗೋದಲ್ಲ, ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು: ಡಿಕೆಶಿ

ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ರಾಹುಲ್‌ ಗಾಂಧಿಯವರು ಭಾರತ ಐಕ್ಯತಾ ಯಾತ್ರೆ ಮಾಡುವ ಮೂಲಕ ಈ ದೇಶದಲ್ಲಿ ಹೊಡೆದು ಹೋಗಿರುವ ಮನಸ್ಸುಗಳನ್ನು ಒಂದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇಷ್ಟುದೊಡ್ಡಮಟ್ಟದ ಪಾದಯಾತ್ರೆ ಯಾರು ಮಾಡಿರಲಿಲ್ಲ. ಯಾತ್ರೆಯೂ ಶಿರಾ ತಾಲೂಕಿನಲ್ಲಿ ಸುಮಾರು 25 ಕಿ.ಮೀ. ಸಾಗುತ್ತದೆ. ನಮ್ಮ ತಾಲೂಕಿನಲ್ಲಿ ರಾಹುಲ್‌ ಗಾಂಧಿಯವರು 25 ಕಿ.ಮೀ. ಪಾದಯಾತ್ರೆ ಮಾಡುತ್ತಾರೆ. ನಾವೆಲ್ಲರೂ ಅವರ ಜೊತೆ ಹೆಜ್ಜೆ ಹಾಕಿದರೆ ಮುಂದೆ ಈ ದೇಶದ ಪ್ರಧಾನಮಂತ್ರಿಯವರ ಜೊತೆ ಹೆಜ್ಜೆ ಹಾಕಿದೆ ಎಂಬುದು ನಮ್ಮ ಮನಸ್ಸಿನಲ್ಲಿ ಉಳಿಯುತ್ತದೆ. ತಮಿಳುನಾಡು, ಕೇರಳದಲ್ಲಿ ಸಹಸ್ರಾರು ಜನ ಪಾಲ್ಗೊಂಡಿದ್ದಾರೆ ಎಂದರು.

Follow Us:
Download App:
  • android
  • ios