ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ| ರಾಜಕಾರಣಿಗಳಿಗೂ ತಗುಲಿದ ಕೊರೋನಾ| ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೂ ಕೊರೋನಾ

ಬೆಂಗಳೂರು(ಆ.25): ರಾಜ್ಯದಲ್ಲಿ ಕೊರೋನಾ ಆತಂಕ ದಿನೇ ದಿನೇ ಹೆಚ್ಚುತ್ತಿದ್ದು, ಸದ್ಯ ರಾಜಕಾರಣಿಗಳಲ್ಲೂ ಈ ಮಹಾಮಾರಿ ಕಾಣಿಸಿಕೊಳ್ಳಲಾರಂಭಿಸಿದೆ. ಸಿಎಂ ಯಡಿಯೂರಪ್ಪ, ಶ್ರೀರಾಮುಲು, ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೂ ಕೊರೋನಾ ಸೋಂಕು ದೃಢಪಟ್ಟಿದೆ.

Add Asianetnews Kannada as a Preferred SourcegooglePreferred
Scroll to load tweet…

ಸದ್ಯ ಕೊರೋನಾ ಸೋಂಕು ದೃಢಪಟ್ಟ ಬೆನ್ನಲ್ಲೇ ವೈದ್ಯರ ಸಲಹೆ ಮೇರೆಗೆ ಡಿಕೆ ಶಿವಕುಮಾರ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿ.ಕೆ. ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ ಎಂದ ಬಿಜೆಪಿ ಎಂಎಲ್‌ಸಿ

Scroll to load tweet…

ಡಿಕೆಶಿಗೆ ಕೊರೋನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್‌ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ ಎಂದಿದ್ದಾರೆ.