* ಜು.16 ಕ್ಕೆ ಕರ್ನಾಟಕಕ್ಕೆ ಆಗಮಿಸಲಿರುವ ಅರುಣ್‌ ಸಿಂಗ್‌* ಹೇಳುವವರು, ಕೇಳುವವರು ಇದ್ದಾರೆ ಎನ್ನುವುದಕ್ಕೆ ಅರುಣ್‌ ಸಿಂಗ್‌ ರಾಜ್ಯಕ್ಕೆ ಬರುತ್ತಿರುವುದೇ ಸಾಕ್ಷಿ* ಶಾಸಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶ

ಶಿವಮೊಗ್ಗ(ಜೂ.14): ರಾಜ್ಯ ಬಿಜೆಪಿ ಪ್ರಭಾರ ಉಸ್ತುವಾರಿ ಅರುಣ್‌ ಸಿಂಗ್‌ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರ ಭೇಟಿ ನಂತರ ಪಕ್ಷದ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತವೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ಅರುಣ್‌ ಸಿಂಗ್‌ ಅವರು ಜು.16, 17, 18ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಕ್ಯಾಬಿನೆಟ್‌ ಸಚಿವರು ಹಾಗೂ ಕೋರ್‌ ಕಮಿಟಿಯೊಂದಿಗೆ ಸಭೆ ನಡೆಸಲಿದ್ದಾರೆ. ಶಾಸಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶವಿದೆ. ಇದು ಬಿಜೆಪಿಯ ವಿಶೇಷ.

ಬಿಎಸ್‌ವೈ ಅವರೇ ಸಿಎಂ: 100% ವರಿಷ್ಠರ ಅಭಿಪ್ರಾಯ!

ಹೇಳುವವರು, ಕೇಳುವವರು ಇದ್ದಾರೆ ಎನ್ನುವುದಕ್ಕೆ ಅರುಣ್‌ ಸಿಂಗ್‌ ಅವರು ರಾಜ್ಯಕ್ಕೆ ಬರುತ್ತಿರುವುದೇ ಸಾಕ್ಷಿ. ಅರುಣ್‌ ಸಿಂಗ್‌ ಬರುತ್ತಿದ್ದಂತೆ ಬಿಜೆಪಿಯ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತವೆ. ಇದು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರ ನಂಬಿಕೆ ಎಂದರು.