Asianet Suvarna News Asianet Suvarna News

ಸಿ.ಟಿ.ರವಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿ: ಈಶ್ವರಪ್ಪ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

Let CT Ravi be the next Chief Minister of the state says Eshwarappa at chikkamagaluru rav
Author
First Published Apr 26, 2023, 1:10 AM IST | Last Updated Apr 26, 2023, 1:10 AM IST

ಚಿಕ್ಕಮಗಳೂರು (ಏ.26) : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ(Chikkamagaluru assembly constituency)ದ ನಿಡಘಟ್ಟಗ್ರಾಮದಲ್ಲಿ ಮಂಗಳವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮಾತನಾಡಿದ ಕೆ.ಎಸ್‌.ಈಶ್ವರಪ್ಪ(KS Eshwarappa), ಈ ಚುನಾವಣೆಯಲ್ಲಿ ಸಿ.ಟಿ.ರವಿ (CT Ravi)ಅವರನ್ನು ನೀವು ಗೆಲ್ಲಿಸಬೇಕು, ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು.

ಸೋಮವಾರ ಮೈಸೂರಿನಲ್ಲಿ ಸಿ.ಟಿ.ರವಿ ಮಾತನಾಡುವ ವೇಳೆಯಲ್ಲಿ ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಎಲ್ಲ ಕಡೆಯಲ್ಲೂ ನಾನು ಸಿಎಂ ಆಗಬೇಕೆಂಬ ಅಪೇಕ್ಷೆ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಂಗ್ರೆಸ್‌ ಸೋಲಲೆಂದೇ ಸಿದ್ದು ಲಿಂಗಾಯತ ವಿರೋಧಿ ಹೇಳಿಕೆ: ಸಿ.ಟಿ.ರವಿ

ಡಿಕೆಶಿ, ಸಿದ್ದುಗೆ ಜೈಲು ಖಚಿತ:

ಇನ್ನು ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆ.ಎಸ್‌.ಈಶ್ವರಪ್ಪ, ಜಾಮೀನಿನ ಮೇಲಿರುವ ಡಿ.ಕೆ.ಶಿವಕುಮಾರ್‌(DK Shivakumar), ಅರ್ಕಾವತಿ ಬಡಾವಣೆ ಹಗರಣದಲ್ಲಿ ಸಿದ್ದರಾಮಯ್ಯ(Siddaramaiah) ಮುಂದೊಂದು ದಿನ ಜೈಲಿಗೆ ಹೋಗುವುದು ಖಚಿತ ಎಂದರು. ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಹಗರಣದಲ್ಲಿ .8000 ಕೋಟಿ ಲೂಟಿ ಹೊಡೆದಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶ ಕೆಂಪಯ್ಯ ವರದಿ ಕೊಟ್ಟಿದ್ದಾರೆ. ಇದನ್ನು ಕಾಂಗ್ರೆಸ್‌ ಮುಚ್ಚಿಟ್ಟಿದೆ. ಡಿ.ಕೆ.ಶಿವಕುಮಾರ್‌ ತಿಹಾರ್‌ ಜೈಲಿನಲ್ಲಿದ್ದು ಬಂದವರು. ಇವರು ಜೈಲಿಗೆ ಹೋಗುವುದು ಯಾವ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ವಿಧಾನಸಭಾ ಚುನಾವಣೆ ಹಿನ್ನೆಲೆ: ಲಿಂಗಾಯತರ ಮತ ಸೆಳೆಯಲು ಬಿಎಸ್‌ವೈ ಮನೆಯಲ್ಲಿ ಮಹತ್ವದ ಸಭೆ

ರಾಷ್ಟ್ರದ್ರೋಹಿ ಮುಸ್ಲಿಮರ ಮತ ನಮಗೆ ಬೇಡ ಎಂದು ಹೇಳಿದ್ದೇನೆ. ಎಲ್ಲಾ ಮುಸಲ್ಮಾನರು ರಾಷ್ಟ್ರದ್ರೋಹಿಗಳು ಎಂದು ನಾವೆಂದೂ ಹೇಳಿಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಹೀಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಬಿಜೆಪಿ. ಕೋಮುವಾದಿಗಳಾರು, ಜಾತಿವಾದಿಗಳಾರು ಎನ್ನುವುದನ್ನು ಈ ಬಾರಿ ಜನ ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios