ಅಧಿವೇಶನದಲ್ಲಿ ದಾದಾಗಿರಿ ನಡೆಸಿದ ಕಾಂಗ್ರೆಸ್‌ ಸರ್ಕಾರವು ಪ್ರತಿಭಟನಾನಿರತ ಪ್ರತಿಪಕ್ಷದ ಸದಸ್ಯರನ್ನು ಮಾರ್ಷಲ್‌ಗಳ ಮೂಲಕ ಹೊರಗೆ ಹಾಕಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ: ಈಶ್ವರಪ್ಪ

ಹೂವಿನಹಡಗಲಿ(ಜು.24): ವಿಧಾನಸಭೆಯ ಅಧಿವೇಶನದಲ್ಲಿ 10 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್‌ ಕೂಡಲೇ ಕ್ಷಮೆ ಕೇಳಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು. 

Add Asianetnews Kannada as a Preferred SourcegooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ದಾದಾಗಿರಿ ನಡೆಸಿದ ಕಾಂಗ್ರೆಸ್‌ ಸರ್ಕಾರವು ಪ್ರತಿಭಟನಾನಿರತ ಪ್ರತಿಪಕ್ಷದ ಸದಸ್ಯರನ್ನು ಮಾರ್ಷಲ್‌ಗಳ ಮೂಲಕ ಹೊರಗೆ ಹಾಕಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಸಂವಿಧಾನಕ್ಕೆ ಮಾಡಿರುವ ಅಪ ಚಾರವಾಗಿದ್ದು, ಈ ಹಿಂದೆ ಸ್ಪೀಕರ್‌ ಆಗಿದ್ದ ಭೋಜಗೌಡ ಅವರನ್ನು ಸ್ಪೀಕರ್‌ ಆಸನದಿಂದಲೇ ಎಳೆದಾಡಿದ್ದು ಇದೇ ಕಾಂಗ್ರೆಸ್‌ನವರು. ಇದೀಗ ಬಿಜೆಪಿಯವರಿಗೆ ಸಂವಿಧಾನದ ಪಾಠ ಹೇಳಲು ಬರುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಹರಿಹಾಯ್ದರು. 

ಗೃಹಜ್ಯೋತಿ, ಗೃಹಲಕ್ಷ್ಮಿಯಿಂದ ಬಡವರಿಗೆ ಸಹಾಯ: ಸಚಿವ ನಾಗೇಂದ್ರ

ಸ್ಪೀಕರ್‌ ಆದವರು ನೂತನ ಶಾಸಕರಿಗೆ ತರಬೇತಿ ನೀಡುತ್ತಾರೆ. ಅದರ ಬದಲಿಗೆ ಈ ಸ್ಪೀಕರ್‌ ಖಾದರ್‌ ತಾವೇ ತರಬೇತಿ ಪಡೆಯುವುದು ಅಗತ್ಯವಿದೆ. ಈಗ ಕಾಂಗ್ರೆಸ್‌ನವರು ರುದ್ರಪ್ಪ ಲಮಾಣಿ ಅವರನ್ನು ಉಪ ಸ್ಪೀಕರ್‌ ಮಾಡಿದ್ದಾರೆ. ಆ ಮೂಲಕ ದಲಿತ ಅಸ್ತ್ರ ಬಳಕೆ ಮಾಡುತ್ತಿದ್ದಾರೆ ಎಂದರು.